AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ‘ತಪಸ್ಸಿ’ ಸಿನಿಮಾದಲ್ಲಿ ರವಿಚಂದ್ರನ್ ನಟನೆ

ನಟ ವಿ. ರವಿಚಂದ್ರನ್​ ಅವರು ‘ತಪಸ್ಸಿ’ ಸಿನಿಮಾದಲ್ಲಿ ಪ್ರಾಧ್ಯಾಪಕನ ಪಾತ್ರ ಮಾಡಲಿದ್ದಾರೆ. ಬೆಂಗಳೂರು ಸುತ್ತಮುತ್ತ ಈ ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಸ್ಪೆನ್ಸರ್​ ಮ್ಯಾಥ್ಯೂ ಅವರು ನಿರ್ದೇಶನ ಮತ್ತು ನಿರ್ಮಾಣದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಇದು ನೈಜ ಘಟನೆ ಆಧರಿಸಿ ಸಿದ್ಧವಾಗುತ್ತಿರುವ ಮಹಿಳಾ ಪ್ರಧಾನ ಸಿನಿಮಾ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ‘ತಪಸ್ಸಿ’ ಸಿನಿಮಾದಲ್ಲಿ ರವಿಚಂದ್ರನ್ ನಟನೆ
ಸುದ್ದಿಗೋಷ್ಠಿಯಲ್ಲಿ ‘ತಪಸ್ಸಿ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Mar 19, 2024 | 9:38 PM

Share

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್​ (Ravichandran) ಅವರ ಹೊಸ ಸಿನಿಮಾ ಬಗ್ಗೆ ಅಪ್​ಡೇಟ್​ ತಿಳಿಯಲು ಕಾದಿದ್ದ ಎಲ್ಲ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಹೌದು, ‘ಕ್ರೇಜಿಸ್ಟಾರ್’ ಅವರು ‘ತಪಸ್ಸಿ’ (Tapassi) ಶೀರ್ಷಿಕೆ ಹೊಸ ಸಿನಿಮಾಗೆ ಸಹಿ ಮಾಡಿದ್ದಾರೆ. ಇದರಲ್ಲಿ ಅವರ ಪಾತ್ರ ಬಹಳ ಮುಖ್ಯದ್ದಾಗಿರಲಿದೆ. ‘ಬೆಂಗಳೂರು ಮೂವೀಸ್’ ಮೂಲಕ ‘ತಪಸ್ಸಿ’ ಸಿನಿಮಾ ನಿರ್ಮಾಣ ಆಗುತ್ತಿದೆ. ಸ್ಪೆನ್ಸರ್ ಮ್ಯಾಥ್ಯೂ ಅವರು ನಿರ್ದೇಶನ ಮಾಡುತ್ತಿದ್ದಾರೆ. ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯ ಜವಾಬ್ದಾರಿ ಕೂಡ ಸ್ಪೆನ್ಸರ್​ ಮ್ಯಾಥ್ಯೂ ಅವರದ್ದೇ ಆಗಿದೆ.

ಇತ್ತೀಚೆಗೆ ‘ತಪಸ್ಸಿ’ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ನಿರ್ದೇಶಕ ಮ್ಯಾಥ್ಯೂ ಅವರು ಒಂದಷ್ಟು ಮಾಹಿತಿ ಹಂಚಿಕೊಂಡರು. ‘ಇದೊಂದು ಮಹಿಳಾ ಪ್ರಧಾನ ಸಿನಿಮಾ. ರವಿಚಂದ್ರನ್ ಸರ್ ಅವರಿಂದಲೇ ಈ ಸಿನಿಮಾದ ಕೆಲಸ ಆರಂಭ ಆಗಿದೆ. ಹಾಗಾಗಿ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಸಿನಿಮಾದಲ್ಲಿ ಒಂದು ಗಟ್ಟಿಯಾದ ಸಂದೇಶ ಇದೆ. ಜನರಿಗೆ ಆ ಮೆಸೇಜ್​ ರೀಚ್​ ಆಗಬೇಕೆಂದರೆ ರವಿಚಂದ್ರನ್ ಅವರಂತಹ ವ್ಯಕ್ತಿ ಬಿಟ್ಟು ಬೇರೆ ಯಾರಿಂದಲೂ ಸಾಧ್ಯವಿಲ್ಲ ಎನಿಸಿತು’ ಎಂದಿದ್ದಾರೆ ನಿರ್ದೇಶಕರು. ಬೆಂಗಳೂರು ಸುತ್ತಮುತ್ತವೇ ‘ತಪಸ್ಸಿ’ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.

ರವಿಚಂದ್ರನ್ ಅವರ ‘ತಪಸ್ಸಿ’ ತಮ್ಮ ಮಾಹಿತಿ ಹಂಚಿಕೊಂಡರು. ‘ಚಿತ್ರತಂಡದವರು ಸಿನಿಮಾ ಮಾಡಿ ಮುಗಿಸಿದ್ದಾರೆ. ಈಗ ನನ್ನ ಭಾಗದ ಶೂಟಿಂಗ್ ಮಾತ್ರ ಬಾಕಿಯಿದೆ. ಈ ಪಾತ್ರ ನೀವೇ ಮಾಡಬೇಕು ಎಂಬ ಆರೇಳು ತಿಂಗಳಿಂದ ಹಠ ಹಿಡಿದಿದ್ದಾರೆ. ಮ್ಯಾಥ್ಯೂ ಅವರು ನನಗೆ ಬಹಳ ಹತ್ತಿರದ ಸ್ನೇಹಿತ. ತುಂಬ ಶಿಸ್ತಿನ ವ್ಯಕ್ತಿ ಅವರು. ‘ರವಿ ಬೋಪಣ್ಣ’ ಸಿನಿಮಾದಿಂದ ನನಗೆ ಅವರು ಪರಿಚಯ. ಅದಕ್ಕೂ ಮೊದಲಿಂದಲೂ ಅವರು ಗಾಂಧಿನಗರದಲ್ಲಿದ್ದಾರೆ. ಒಂದು ಸಾಮಾಜಿಕ ಸಂದೇಶ ಸಾರುವ ತೂಕವಾದ ಪಾತ್ರ ನನ್ನದು. ಇಡೀ ಚಿತ್ರಕ್ಕೆ ನ್ಯಾಯ ಒದಗಿಸಲು ನನ್ನನ್ನು ಆಯ್ಕೆ ಮಾಡಿದ್ದಾರೆ’ ಎಂದಿದ್ದಾರೆ ರವಿಚಂದ್ರನ್​.

ಇದನ್ನೂ ಓದಿ: ‘ಅಪ್ಪನ ಸಾವಿನ ನೋವಿನಲ್ಲಿ ಇದ್ದಾಗಲೇ ಹಣದ ವಿಷಯ’: ಆ ಕ್ಷಣ ನೆನಪಿಸಿಕೊಂಡ ರವಿಚಂದ್ರನ್​

ಚಿತ್ರತಂಡ ಹೇಳಿಕೊಂಡಿರುವಂತೆ ಇದು ನೈಜ ಘಟನೆ ಆಧರಿಸಿ ಸಿದ್ಧವಾಗುತ್ತಿರುವ ಸಿನಿಮಾ. ಈ ಮಹಿಳಾ ಪ್ರಧಾನ ಸಿನಿಮಾದಲ್ಲಿ ವಿ. ರವಿಚಂದ್ರನ್ ಅವರು ಪ್ರಾಧ್ಯಾಪಕನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರಕ್ಕೆ ಅಮೈರಾ ಗೋಸ್ವಾಮಿ ನಾಯಕಿ. ಪಾತ್ರವರ್ಗದಲ್ಲಿ ಪ್ರಜ್ವಲ್, ವಿನಯಾ ಪ್ರಸಾದ್, ಸಚಿನ್, ಭಾಸ್ಕರ್, ಅನುಷಾ ಕಿಣಿ ಮುಂತಾದವರು ಇದ್ದಾರೆ. ವೀರೇಶ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಅರುಣ್ ಪಿ. ಥಾಮಸ್ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಸ್ಪೆನ್ಸರ್ ಮ್ಯಾಥ್ಯೂ ಅವರು ನಿರ್ದೆಶನದ ಜೊತೆಗೆ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಆರ್. ಗಂಗಾಧರ್ ಅವರು ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು