AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ನಟನೆಯ ‘ದಿ ಜಡ್ಜ್​​ಮೆಂಟ್’ ಚಿತ್ರಕ್ಕೆ ಸಿಕ್ತು ರಿಲಯನ್ಸ್ ಸಂಸ್ಥೆಯ ಬೆಂಬಲ

ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್​ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್​ಟೇನ್​ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಕುತೂಹಲ ಹೆಚ್ಚಿಸಿದೆ.

ರವಿಚಂದ್ರನ್ ನಟನೆಯ ‘ದಿ ಜಡ್ಜ್​​ಮೆಂಟ್’ ಚಿತ್ರಕ್ಕೆ ಸಿಕ್ತು ರಿಲಯನ್ಸ್ ಸಂಸ್ಥೆಯ ಬೆಂಬಲ
ರವಿಚಂದ್ರನ್
ರಾಜೇಶ್ ದುಗ್ಗುಮನೆ
|

Updated on: May 02, 2024 | 7:06 AM

Share

ರವಿಚಂದ್ರನ್ (Ravichandran) ಅವರು ಈ ಮೊದಲು ಸಖತ್ ರೊಮ್ಯಾಂಟಿಕ್ ಚಿತ್ರಗಳನ್ನು ಮಾಡುತ್ತಿದ್ದರು. ಈಗ ಅವರು ಪಾತ್ರಗಳ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾಗಳನ್ನು ಕೂಡ ಅವರು ಮಾಡುತ್ತಿದ್ದಾರೆ. ‘ದೃಶ್ಯ’, ‘ದೃಶ್ಯ 2’ ಸಿನಿಮಾಗಳ ಮೂಲಕ ಅವರು ಗೆದ್ದಿದ್ದಾರೆ. ಈ ಚಿತ್ರದಲ್ಲಿ ಪೊಲೀಸು, ಕೋರ್ಟು, ಕಚೇರಿಯ ಕಥೆ ಇತ್ತು. ಈಗ ಅವರು ಮತ್ತೆ ಕೋರ್ಟ್​ ಮೆಟ್ಟಿಲೇರಿದ್ದಾರೆ. ಹಾಗಂತ ಅವರು ಯಾವುದೇ ಕೇಸ್ ಮಾಡಿಕೊಂಡಿಲ್ಲ. ಬದಲಿಗೆ ಅವರು ಈ ಬಾರಿ ಕೋರ್ಟ್​ ಮೆಟ್ಟಿಲೇರುತ್ತಿರುವುದು ಬೇರೆಯವರಿಗೆ ನ್ಯಾಯ ಕೊಡಿಸಲು. ‘ದಿ ಜಡ್ಜ್​ಮೆಂಟ್’ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದ್ದು, ವಕೀಲನ ಪಾತ್ರ ಮಾಡಿದ್ದಾರೆ.

ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್​ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್​ಟೇನ್​ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಕುತೂಹಲ ಹೆಚ್ಚಿಸಿದೆ. ರವಿಚಂದ್ರನ್ ಜೊತೆ ಈ ಸಿನಿಮಾದಲ್ಲಿ ದಿಗಂತ್, ಧನ್ಯಾ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಮೇಘನಾ ಗಾಂವ್ಕರ್, ಪ್ರಕಾಶ್ ಬೆಳವಾಡಿ, ನಾಗಾಭರಣ, ರವಿಶಂಕರ್ ಗೌಡ, ರಂಗಾಯಣ ರಘು, ಕೃಷ್ಣ ಹೆಬ್ಬಾಳೆ, ಸುಜಯ್ ಶಾಸ್ತ್ರಿ, ರೇಖಾ ಕೂಡ್ಲಿಗಿ ಮೊದಲಾದವರು ನಟಿಸಿದ್ದಾರೆ.

ಒಂದು ಕೊಲೆ ನಡೆಯುತ್ತದೆ. ಆ ಕೊಲೆಯ ಸುತ್ತವೇ ಸಿನಿಮಾ ಸಾಗಲಿದೆ ಎಂಬುದು ಟೀಸರ್ ನೋಡಿದವರಿಗೆ ಗೊತ್ತಾಗಿದೆ. ‘ದೃಶ್ಯ’ ಸಿನಿಮಾ ರೀತಿಯಲ್ಲೇ ಈ ಚಿತ್ರ ಕೂಡ ಕುತೂಹಲ ಮೂಡಿಸಿದೆ. ಈ ರೀತಿಯ ಸಿನಿಮಾಗಳು ರವಿಚಂದ್ರನ್ ಅವರಿಗೆ ಹೆಚ್ಚು ಒಪ್ಪುತ್ತವೆ ಎಂದು ಅನೇಕರು ಅಭಿಪ್ರಾಯ ಹೊರ ಹಾಕಿದ್ದಾರೆ. ಡಾ.ರಾಜ್​ಕುಮಾರ್ ಜನ್ಮದಿನವೇ (ಏಪ್ರಿಲ್ 24) ಚಿತ್ರದ ಶೂಟಿಂಗ್ ಪೂರ್ಣಗೊಂಡಿತ್ತು.

ಇದನ್ನೂ ಓದಿ: ಹಾಲಿವುಡ್​ಗೆ ರಿಮೇಕ್​ ಆಗಲಿದೆ ರವಿಚಂದ್ರನ್​ ನಟನೆಯ ಸಿನಿಮಾ; ಯಾವುದು ಗೊತ್ತಾ?

ಕೋರ್ಟ್ ಡ್ರಾಮ ಜಾನರ್​ನ ಈ ಸಿನಿಮಾ ಶೀಘ್ರವೇ ಬರಲಿದೆ. ಗುರುರಾಜ್ ಕುಲಕರ್ಣಿ ಈ ಚಿತ್ರವನ್ನು ನಿರ್ಮಾಣದ ಜೊತೆಗೆ ನಿರ್ದೇಶಕ ಮಾಡಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಕೆಂಪರಾಜ್ ಸಂಕಲನ ಈ ಸಿನಿಮಾಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು