AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ನಟನೆಯ ‘ದಿ ಜಡ್ಜ್​​ಮೆಂಟ್’ ಚಿತ್ರಕ್ಕೆ ಸಿಕ್ತು ರಿಲಯನ್ಸ್ ಸಂಸ್ಥೆಯ ಬೆಂಬಲ

ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್​ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್​ಟೇನ್​ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಕುತೂಹಲ ಹೆಚ್ಚಿಸಿದೆ.

ರವಿಚಂದ್ರನ್ ನಟನೆಯ ‘ದಿ ಜಡ್ಜ್​​ಮೆಂಟ್’ ಚಿತ್ರಕ್ಕೆ ಸಿಕ್ತು ರಿಲಯನ್ಸ್ ಸಂಸ್ಥೆಯ ಬೆಂಬಲ
ರವಿಚಂದ್ರನ್
ರಾಜೇಶ್ ದುಗ್ಗುಮನೆ
|

Updated on: May 02, 2024 | 7:06 AM

Share

ರವಿಚಂದ್ರನ್ (Ravichandran) ಅವರು ಈ ಮೊದಲು ಸಖತ್ ರೊಮ್ಯಾಂಟಿಕ್ ಚಿತ್ರಗಳನ್ನು ಮಾಡುತ್ತಿದ್ದರು. ಈಗ ಅವರು ಪಾತ್ರಗಳ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾಗಳನ್ನು ಕೂಡ ಅವರು ಮಾಡುತ್ತಿದ್ದಾರೆ. ‘ದೃಶ್ಯ’, ‘ದೃಶ್ಯ 2’ ಸಿನಿಮಾಗಳ ಮೂಲಕ ಅವರು ಗೆದ್ದಿದ್ದಾರೆ. ಈ ಚಿತ್ರದಲ್ಲಿ ಪೊಲೀಸು, ಕೋರ್ಟು, ಕಚೇರಿಯ ಕಥೆ ಇತ್ತು. ಈಗ ಅವರು ಮತ್ತೆ ಕೋರ್ಟ್​ ಮೆಟ್ಟಿಲೇರಿದ್ದಾರೆ. ಹಾಗಂತ ಅವರು ಯಾವುದೇ ಕೇಸ್ ಮಾಡಿಕೊಂಡಿಲ್ಲ. ಬದಲಿಗೆ ಅವರು ಈ ಬಾರಿ ಕೋರ್ಟ್​ ಮೆಟ್ಟಿಲೇರುತ್ತಿರುವುದು ಬೇರೆಯವರಿಗೆ ನ್ಯಾಯ ಕೊಡಿಸಲು. ‘ದಿ ಜಡ್ಜ್​ಮೆಂಟ್’ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದ್ದು, ವಕೀಲನ ಪಾತ್ರ ಮಾಡಿದ್ದಾರೆ.

ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್​ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್​ಟೇನ್​ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಕುತೂಹಲ ಹೆಚ್ಚಿಸಿದೆ. ರವಿಚಂದ್ರನ್ ಜೊತೆ ಈ ಸಿನಿಮಾದಲ್ಲಿ ದಿಗಂತ್, ಧನ್ಯಾ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಮೇಘನಾ ಗಾಂವ್ಕರ್, ಪ್ರಕಾಶ್ ಬೆಳವಾಡಿ, ನಾಗಾಭರಣ, ರವಿಶಂಕರ್ ಗೌಡ, ರಂಗಾಯಣ ರಘು, ಕೃಷ್ಣ ಹೆಬ್ಬಾಳೆ, ಸುಜಯ್ ಶಾಸ್ತ್ರಿ, ರೇಖಾ ಕೂಡ್ಲಿಗಿ ಮೊದಲಾದವರು ನಟಿಸಿದ್ದಾರೆ.

ಒಂದು ಕೊಲೆ ನಡೆಯುತ್ತದೆ. ಆ ಕೊಲೆಯ ಸುತ್ತವೇ ಸಿನಿಮಾ ಸಾಗಲಿದೆ ಎಂಬುದು ಟೀಸರ್ ನೋಡಿದವರಿಗೆ ಗೊತ್ತಾಗಿದೆ. ‘ದೃಶ್ಯ’ ಸಿನಿಮಾ ರೀತಿಯಲ್ಲೇ ಈ ಚಿತ್ರ ಕೂಡ ಕುತೂಹಲ ಮೂಡಿಸಿದೆ. ಈ ರೀತಿಯ ಸಿನಿಮಾಗಳು ರವಿಚಂದ್ರನ್ ಅವರಿಗೆ ಹೆಚ್ಚು ಒಪ್ಪುತ್ತವೆ ಎಂದು ಅನೇಕರು ಅಭಿಪ್ರಾಯ ಹೊರ ಹಾಕಿದ್ದಾರೆ. ಡಾ.ರಾಜ್​ಕುಮಾರ್ ಜನ್ಮದಿನವೇ (ಏಪ್ರಿಲ್ 24) ಚಿತ್ರದ ಶೂಟಿಂಗ್ ಪೂರ್ಣಗೊಂಡಿತ್ತು.

ಇದನ್ನೂ ಓದಿ: ಹಾಲಿವುಡ್​ಗೆ ರಿಮೇಕ್​ ಆಗಲಿದೆ ರವಿಚಂದ್ರನ್​ ನಟನೆಯ ಸಿನಿಮಾ; ಯಾವುದು ಗೊತ್ತಾ?

ಕೋರ್ಟ್ ಡ್ರಾಮ ಜಾನರ್​ನ ಈ ಸಿನಿಮಾ ಶೀಘ್ರವೇ ಬರಲಿದೆ. ಗುರುರಾಜ್ ಕುಲಕರ್ಣಿ ಈ ಚಿತ್ರವನ್ನು ನಿರ್ಮಾಣದ ಜೊತೆಗೆ ನಿರ್ದೇಶಕ ಮಾಡಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಕೆಂಪರಾಜ್ ಸಂಕಲನ ಈ ಸಿನಿಮಾಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್