AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ನಟನೆಯ ‘ದಿ ಜಡ್ಜ್​​ಮೆಂಟ್’ ಚಿತ್ರಕ್ಕೆ ಸಿಕ್ತು ರಿಲಯನ್ಸ್ ಸಂಸ್ಥೆಯ ಬೆಂಬಲ

ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್​ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್​ಟೇನ್​ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಕುತೂಹಲ ಹೆಚ್ಚಿಸಿದೆ.

ರವಿಚಂದ್ರನ್ ನಟನೆಯ ‘ದಿ ಜಡ್ಜ್​​ಮೆಂಟ್’ ಚಿತ್ರಕ್ಕೆ ಸಿಕ್ತು ರಿಲಯನ್ಸ್ ಸಂಸ್ಥೆಯ ಬೆಂಬಲ
ರವಿಚಂದ್ರನ್
ರಾಜೇಶ್ ದುಗ್ಗುಮನೆ
|

Updated on: May 02, 2024 | 7:06 AM

Share

ರವಿಚಂದ್ರನ್ (Ravichandran) ಅವರು ಈ ಮೊದಲು ಸಖತ್ ರೊಮ್ಯಾಂಟಿಕ್ ಚಿತ್ರಗಳನ್ನು ಮಾಡುತ್ತಿದ್ದರು. ಈಗ ಅವರು ಪಾತ್ರಗಳ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾಗಳನ್ನು ಕೂಡ ಅವರು ಮಾಡುತ್ತಿದ್ದಾರೆ. ‘ದೃಶ್ಯ’, ‘ದೃಶ್ಯ 2’ ಸಿನಿಮಾಗಳ ಮೂಲಕ ಅವರು ಗೆದ್ದಿದ್ದಾರೆ. ಈ ಚಿತ್ರದಲ್ಲಿ ಪೊಲೀಸು, ಕೋರ್ಟು, ಕಚೇರಿಯ ಕಥೆ ಇತ್ತು. ಈಗ ಅವರು ಮತ್ತೆ ಕೋರ್ಟ್​ ಮೆಟ್ಟಿಲೇರಿದ್ದಾರೆ. ಹಾಗಂತ ಅವರು ಯಾವುದೇ ಕೇಸ್ ಮಾಡಿಕೊಂಡಿಲ್ಲ. ಬದಲಿಗೆ ಅವರು ಈ ಬಾರಿ ಕೋರ್ಟ್​ ಮೆಟ್ಟಿಲೇರುತ್ತಿರುವುದು ಬೇರೆಯವರಿಗೆ ನ್ಯಾಯ ಕೊಡಿಸಲು. ‘ದಿ ಜಡ್ಜ್​ಮೆಂಟ್’ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದ್ದು, ವಕೀಲನ ಪಾತ್ರ ಮಾಡಿದ್ದಾರೆ.

ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್​ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್​ಟೇನ್​ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಕುತೂಹಲ ಹೆಚ್ಚಿಸಿದೆ. ರವಿಚಂದ್ರನ್ ಜೊತೆ ಈ ಸಿನಿಮಾದಲ್ಲಿ ದಿಗಂತ್, ಧನ್ಯಾ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಮೇಘನಾ ಗಾಂವ್ಕರ್, ಪ್ರಕಾಶ್ ಬೆಳವಾಡಿ, ನಾಗಾಭರಣ, ರವಿಶಂಕರ್ ಗೌಡ, ರಂಗಾಯಣ ರಘು, ಕೃಷ್ಣ ಹೆಬ್ಬಾಳೆ, ಸುಜಯ್ ಶಾಸ್ತ್ರಿ, ರೇಖಾ ಕೂಡ್ಲಿಗಿ ಮೊದಲಾದವರು ನಟಿಸಿದ್ದಾರೆ.

ಒಂದು ಕೊಲೆ ನಡೆಯುತ್ತದೆ. ಆ ಕೊಲೆಯ ಸುತ್ತವೇ ಸಿನಿಮಾ ಸಾಗಲಿದೆ ಎಂಬುದು ಟೀಸರ್ ನೋಡಿದವರಿಗೆ ಗೊತ್ತಾಗಿದೆ. ‘ದೃಶ್ಯ’ ಸಿನಿಮಾ ರೀತಿಯಲ್ಲೇ ಈ ಚಿತ್ರ ಕೂಡ ಕುತೂಹಲ ಮೂಡಿಸಿದೆ. ಈ ರೀತಿಯ ಸಿನಿಮಾಗಳು ರವಿಚಂದ್ರನ್ ಅವರಿಗೆ ಹೆಚ್ಚು ಒಪ್ಪುತ್ತವೆ ಎಂದು ಅನೇಕರು ಅಭಿಪ್ರಾಯ ಹೊರ ಹಾಕಿದ್ದಾರೆ. ಡಾ.ರಾಜ್​ಕುಮಾರ್ ಜನ್ಮದಿನವೇ (ಏಪ್ರಿಲ್ 24) ಚಿತ್ರದ ಶೂಟಿಂಗ್ ಪೂರ್ಣಗೊಂಡಿತ್ತು.

ಇದನ್ನೂ ಓದಿ: ಹಾಲಿವುಡ್​ಗೆ ರಿಮೇಕ್​ ಆಗಲಿದೆ ರವಿಚಂದ್ರನ್​ ನಟನೆಯ ಸಿನಿಮಾ; ಯಾವುದು ಗೊತ್ತಾ?

ಕೋರ್ಟ್ ಡ್ರಾಮ ಜಾನರ್​ನ ಈ ಸಿನಿಮಾ ಶೀಘ್ರವೇ ಬರಲಿದೆ. ಗುರುರಾಜ್ ಕುಲಕರ್ಣಿ ಈ ಚಿತ್ರವನ್ನು ನಿರ್ಮಾಣದ ಜೊತೆಗೆ ನಿರ್ದೇಶಕ ಮಾಡಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಕೆಂಪರಾಜ್ ಸಂಕಲನ ಈ ಸಿನಿಮಾಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?