AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ನಟನೆಯ ‘ದಿ ಜಡ್ಜ್​​ಮೆಂಟ್’ ಚಿತ್ರಕ್ಕೆ ಸಿಕ್ತು ರಿಲಯನ್ಸ್ ಸಂಸ್ಥೆಯ ಬೆಂಬಲ

ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್​ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್​ಟೇನ್​ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಕುತೂಹಲ ಹೆಚ್ಚಿಸಿದೆ.

ರವಿಚಂದ್ರನ್ ನಟನೆಯ ‘ದಿ ಜಡ್ಜ್​​ಮೆಂಟ್’ ಚಿತ್ರಕ್ಕೆ ಸಿಕ್ತು ರಿಲಯನ್ಸ್ ಸಂಸ್ಥೆಯ ಬೆಂಬಲ
ರವಿಚಂದ್ರನ್
ರಾಜೇಶ್ ದುಗ್ಗುಮನೆ
|

Updated on: May 02, 2024 | 7:06 AM

Share

ರವಿಚಂದ್ರನ್ (Ravichandran) ಅವರು ಈ ಮೊದಲು ಸಖತ್ ರೊಮ್ಯಾಂಟಿಕ್ ಚಿತ್ರಗಳನ್ನು ಮಾಡುತ್ತಿದ್ದರು. ಈಗ ಅವರು ಪಾತ್ರಗಳ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾಗಳನ್ನು ಕೂಡ ಅವರು ಮಾಡುತ್ತಿದ್ದಾರೆ. ‘ದೃಶ್ಯ’, ‘ದೃಶ್ಯ 2’ ಸಿನಿಮಾಗಳ ಮೂಲಕ ಅವರು ಗೆದ್ದಿದ್ದಾರೆ. ಈ ಚಿತ್ರದಲ್ಲಿ ಪೊಲೀಸು, ಕೋರ್ಟು, ಕಚೇರಿಯ ಕಥೆ ಇತ್ತು. ಈಗ ಅವರು ಮತ್ತೆ ಕೋರ್ಟ್​ ಮೆಟ್ಟಿಲೇರಿದ್ದಾರೆ. ಹಾಗಂತ ಅವರು ಯಾವುದೇ ಕೇಸ್ ಮಾಡಿಕೊಂಡಿಲ್ಲ. ಬದಲಿಗೆ ಅವರು ಈ ಬಾರಿ ಕೋರ್ಟ್​ ಮೆಟ್ಟಿಲೇರುತ್ತಿರುವುದು ಬೇರೆಯವರಿಗೆ ನ್ಯಾಯ ಕೊಡಿಸಲು. ‘ದಿ ಜಡ್ಜ್​ಮೆಂಟ್’ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದ್ದು, ವಕೀಲನ ಪಾತ್ರ ಮಾಡಿದ್ದಾರೆ.

ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್​ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್​ಟೇನ್​ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಕುತೂಹಲ ಹೆಚ್ಚಿಸಿದೆ. ರವಿಚಂದ್ರನ್ ಜೊತೆ ಈ ಸಿನಿಮಾದಲ್ಲಿ ದಿಗಂತ್, ಧನ್ಯಾ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಮೇಘನಾ ಗಾಂವ್ಕರ್, ಪ್ರಕಾಶ್ ಬೆಳವಾಡಿ, ನಾಗಾಭರಣ, ರವಿಶಂಕರ್ ಗೌಡ, ರಂಗಾಯಣ ರಘು, ಕೃಷ್ಣ ಹೆಬ್ಬಾಳೆ, ಸುಜಯ್ ಶಾಸ್ತ್ರಿ, ರೇಖಾ ಕೂಡ್ಲಿಗಿ ಮೊದಲಾದವರು ನಟಿಸಿದ್ದಾರೆ.

ಒಂದು ಕೊಲೆ ನಡೆಯುತ್ತದೆ. ಆ ಕೊಲೆಯ ಸುತ್ತವೇ ಸಿನಿಮಾ ಸಾಗಲಿದೆ ಎಂಬುದು ಟೀಸರ್ ನೋಡಿದವರಿಗೆ ಗೊತ್ತಾಗಿದೆ. ‘ದೃಶ್ಯ’ ಸಿನಿಮಾ ರೀತಿಯಲ್ಲೇ ಈ ಚಿತ್ರ ಕೂಡ ಕುತೂಹಲ ಮೂಡಿಸಿದೆ. ಈ ರೀತಿಯ ಸಿನಿಮಾಗಳು ರವಿಚಂದ್ರನ್ ಅವರಿಗೆ ಹೆಚ್ಚು ಒಪ್ಪುತ್ತವೆ ಎಂದು ಅನೇಕರು ಅಭಿಪ್ರಾಯ ಹೊರ ಹಾಕಿದ್ದಾರೆ. ಡಾ.ರಾಜ್​ಕುಮಾರ್ ಜನ್ಮದಿನವೇ (ಏಪ್ರಿಲ್ 24) ಚಿತ್ರದ ಶೂಟಿಂಗ್ ಪೂರ್ಣಗೊಂಡಿತ್ತು.

ಇದನ್ನೂ ಓದಿ: ಹಾಲಿವುಡ್​ಗೆ ರಿಮೇಕ್​ ಆಗಲಿದೆ ರವಿಚಂದ್ರನ್​ ನಟನೆಯ ಸಿನಿಮಾ; ಯಾವುದು ಗೊತ್ತಾ?

ಕೋರ್ಟ್ ಡ್ರಾಮ ಜಾನರ್​ನ ಈ ಸಿನಿಮಾ ಶೀಘ್ರವೇ ಬರಲಿದೆ. ಗುರುರಾಜ್ ಕುಲಕರ್ಣಿ ಈ ಚಿತ್ರವನ್ನು ನಿರ್ಮಾಣದ ಜೊತೆಗೆ ನಿರ್ದೇಶಕ ಮಾಡಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಕೆಂಪರಾಜ್ ಸಂಕಲನ ಈ ಸಿನಿಮಾಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ