AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ಪ್ರಕಟಿಸುವ ನಿರ್ಧಾರಕ್ಕೆ ಬದ್ಧರಾಗ್ತಾರಾ ಸುದೀಪ್​-ಕುಮಾರ್; ಭಾನುವಾರ ಸಿಗಲಿದೆ ಉತ್ತರ

ಶುಕ್ರವಾರ (ಜುಲೈ 21) ಸಂಧಾನ ಸಭೆ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಸುದೀಪ್, ಎಂಎನ್ ಕುಮಾರ್ ಅವರು ಭಾಗಿ ಆಗಿದ್ದರು. ರವಿಚಂದ್ರನ್ ಅವರು ಇದರ ನೇತೃತ್ವ ವಹಿಸಿಕೊಂಡಿದ್ದರು.

ರವಿಚಂದ್ರನ್ ಪ್ರಕಟಿಸುವ ನಿರ್ಧಾರಕ್ಕೆ ಬದ್ಧರಾಗ್ತಾರಾ ಸುದೀಪ್​-ಕುಮಾರ್; ಭಾನುವಾರ ಸಿಗಲಿದೆ ಉತ್ತರ
ರವಿಚಂದ್ರನ್, ಸುದೀಪ್, ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jul 22, 2023 | 11:18 AM

Share

ಕಿಚ್ಚ ಸುದೀಪ್ (Sudeep) ಹಾಗೂ ನಿರ್ಮಾಪಕ ಎಂಎನ್ ಕುಮಾರ್ ಮಧ್ಯೆ ಕಳೆದ ಕೆಲ ದಿನಗಳಿಂದ ಜಟಾಪಟಿ ನಡೆಯುತ್ತಲೇ ಇತ್ತು. ಸುದೀಪ್ ವಿರುದ್ಧ ಕುಮಾರ್ (MN Kumar) ಅವರು ವಂಚನೆ ಆರೋಪ ಮಾಡಿದ್ದರು. ಹಣ ಪಡೆದು ಕಾಲ್​ಶೀಟ್ ನೀಡಿಲ್ಲ ಎಂದು ದೂರಿದ್ದರು. ಇದನ್ನು ಸುದೀಪ್ ಅಲ್ಲಗಳೆದಿದ್ದರು. ಈ ಪ್ರಕರಣದಲ್ಲಿ ಸುದೀಪ್ ಕೋರ್ಟ್​ ಮೆಟ್ಟಿಲೇರಿದರು. ಕುಮಾರ್ ಅವರು ಇದನ್ನು ವಿರೋಧಿಸಿ ಫಿಲ್ಮ್​ ಚೇಂಬರ್ ಎದುರು ಪ್ರತಿಭಟನೆಗೆ ಕುಳಿತರು. ಈಗ ಈ ಪ್ರಕರಣ ಕೊನೆಗೊಳ್ಳುವ ಸಾಧ್ಯತೆ ಗೋಚರವಾಗಿದೆ.

ಶುಕ್ರವಾರ (ಜುಲೈ 21) ಸಂಧಾನ ಸಭೆ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಸುದೀಪ್, ಎಂಎನ್ ಕುಮಾರ್ ಅವರು ಭಾಗಿ ಆಗಿದ್ದರು. ರವಿಚಂದ್ರನ್ ಅವರು ಇದರ ನೇತೃತ್ವ ವಹಿಸಿಕೊಂಡಿದ್ದರು. ಈ ಸಭೆ ಸತತ ಎಳು ಗಂಟೆಗಳ ಕಾಲ ನಡೆದಿತ್ತು. ಈ ವೇಳೆ ಸುದೀಪ್ ಹಾಗೂ ಎಂಎನ್ ಕುಮಾರ್ ಅವರೂ ಪರಸ್ಪರ ಮಾತುಕತೆ ಮಾಡಿಕೊಂಡಿದ್ದಾರೆ. ಸಂಧಾನ ಸಭೆ ಬಹುತೇಕ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಭಾನುವಾರ (ಜುಲೈ 22) ನಿರ್ಧಾರ ಪ್ರಕಟ ಆಗಲಿದೆ.

ಭಾಮ ಹರೀಶ್ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ‘ಫಿಲ್ಮ್​ ಚೇಂಬರ್ ಹಾಗೂ ಹಿರಿಯ ನಟರ ಸಮ್ಮುಖದಲ್ಲಿ ಸಮಸ್ಯೆ ಬಗೆ ಹರಿಯಬೇಕು ಎಂಬ ಕಾರಣದಿಂದಲೇ ಸಭೆ ಮಾಡಲಾಗಿತ್ತು. ಈಗಾಗಲೇ ಇಬ್ಬರೂ ತಮ್ಮ ತಮ್ಮ ಅಭಿಪ್ರಾಯವನ್ನು ರವಿಚಂದ್ರನ್ ಎದುರು ಹೇಳಿಕೊಂಡಿದ್ದಾರೆ. ಸಂಧಾನ ಸಭೆಯಲ್ಲಿ ಸುದೀಪ್ ಎಂಎನ್ ಕುಮಾರ್, ಭಾಮಾ ಹರೀಶ್, ಉಮೇಶ್ ಬಣಕಾರ್ ಭಾಗಿಯಾಗಿದ್ರು.  ಇಬ್ಬರ ಪರಸ್ಪರ ವಾದಗಳನ್ನ ಆಲಿಸಲಾಗಿದೆ. ನಾಳೆ ಬಹುತೆಕ ನಿರ್ಧಾರ ಪ್ರಕಟ ಆಗುತ್ತದೆ. ಇಬ್ಬರೂ ಒಪ್ಪಬೇಕಾದ ನಿರ್ಧಾರ ರವಿಚಂದ್ರನ್ ಅವರು ಪ್ರಕಟಿಸಲಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ರವಿಚಂದ್ರನ್ ಕೊಟ್ಟ;ಭರವಸೆ ಬಗ್ಗೆ ಎಂಎನ್​ ಕುಮಾರ್​ಗೆ ಭರವಸೆ: ಇತ್ಯರ್ಥವಾಗುತ್ತಾ ವಿವಾದ?

ಇತ್ತೀಚೆಗೆ ಮಾತನಾಡಿದ್ದ ರವಿಚಂದ್ರನ್ ಅವರು, ‘ನಾನು ಎಂಟ್ರಿ ಕೊಟ್ಟೆ ಅಂದಮೇಲೆ ಇಬ್ಬರೂ ನನ್ನ ನಿರ್ಧಾರ ಒಪ್ಪಬೇಕು. ಹಾಗಿದ್ದರೆ ಮಾತ್ರ ನಾನು ಎಂಟ್ರಿ ಕೊಡುತ್ತೇನೆ’ ಎಂದಿದ್ದರು. ಈಗ ಅವರು ಸಂಧಾನ ಸಭೆಯ ನೇತೃತ್ವ ವಹಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Sat, 22 July 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು