AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖುಷ್ಬೂ ಎಂದಿಗೂ ಮರೆಯಲಾಗದ ಸಹಾಯ ಮಾಡಿದ್ದ ರವಿಚಂದ್ರನ್; ಈಗಲೂ ನೆನಪಿಸಿಕೊಳ್ಳುತ್ತಾರೆ ನಟಿ

ಖುಷ್ಬೂ ಸುಂದರ್ ಅವರು ತಮ್ಮ ಆರಂಭಿಕ ದಿನಗಳಲ್ಲಿ ವಿ. ರವಿಚಂದ್ರನ್ ಮತ್ತು ಅವರ ತಂದೆ ವೀರಸ್ವಾಮಿ ಅವರಿಂದ ಪಡೆದ ಸಹಾಯವನ್ನು ನೆನಪಿಸಿಕೊಂಡಿದ್ದಾರೆ. ತಾಯಿಯ ಆಸ್ಪತ್ರೆ ವೆಚ್ಚವನ್ನು ಭರಿಸಲು ಸಹಾಯ ಮಾಡಿದ್ದಕ್ಕಾಗಿ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಈ ವೀಡಿಯೋ ವೈರಲ್ ಆಗಿದೆ ಈಗ ವೈರಲ್ ಆಗಿದೆ.

ಖುಷ್ಬೂ ಎಂದಿಗೂ ಮರೆಯಲಾಗದ ಸಹಾಯ ಮಾಡಿದ್ದ ರವಿಚಂದ್ರನ್; ಈಗಲೂ ನೆನಪಿಸಿಕೊಳ್ಳುತ್ತಾರೆ ನಟಿ
ಖುಷ್ಬೂ
ರಾಜೇಶ್ ದುಗ್ಗುಮನೆ
|

Updated on:Apr 01, 2025 | 1:54 PM

Share

ವಿ. ರವಿಚಂದ್ರನ್ (V. Ravichandran) ಅವರು ಕನ್ನಡ ಚಿತ್ರಂಗಕ್ಕೆ ಸಾಕಷ್ಟು ನಟ-ನಟಿಯರನ್ನು ಪರಿಚಯಿಸಿದ್ದಾರೆ. ಕಷ್ಟ ಎಂದು ಬಂದವರಿಗೆ ಅವರು ಸಹಾಯವನ್ನೂ ಮಾಡಿದ್ದಾರೆ. ಅನೇಕರು ರವಿಚಂದ್ರನ್ ಮಾಡಿದ ಸಹಾಯವನ್ನು ಈಗಲೂ ನೆನಪಿಟ್ಟುಕೊಂಡಿದ್ದಾರೆ. ಈ ರೀತಿ ನೆನಪು ಇಟ್ಟುಕೊಂಡವರಲ್ಲಿ ಬಹುಭಾಷಾ ನಟಿ, ರಾಜಕಾರಣಿ ಖುಷ್ಬೂ ಸುಂದರ್ ಕೂಡ ಒಬ್ಬರು. ಈಗ ಈ ಬಗ್ಗೆ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ರವಿಚಂದ್ರನ್ ಹಾಗೂ ಅವರ ತಂದೆ ವೀರಸ್ವಾಮಿ ಗುಣಗಾನವನ್ನು ಅವರು ಮಾಡಿದ್ದಾರೆ.

ಖುಷ್ಬೂ ಸುಂದರ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದವರೇ ರವಿಚಂದ್ರನ್ ಹಾಗೂ ವೀರಸ್ವಾಮಿ. 1988ರಲ್ಲಿ ರಿಲೀಸ್ ಆದ ‘ರಣಧೀರ’ ಸಿನಿಮಾದಲ್ಲಿ ಖುಷ್ಬು ಬಣ್ಣ ಹಚ್ಚಿದರು. ಇದು ಅವರು ನಟಿಸಿದ ಮೊದಲ ಕನ್ನಡ ಸಿನಿಮಾ. ಈ ಚಿತ್ರವನ್ನು ರವಿಚಂದ್ರನ್ ಅವರೇ ನಿರ್ದೇಶಿಸಿದ್ದರು. ಅವರ ತಂದೆ ವೀರಸ್ವಾಮಿ ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ
Image
‘ಸಂಬಂಧಗಳು ಐಸ್​​​ಕ್ರೀಮ್​ನಂತೆ, ಆಸ್ವಾದಿಸಿ ಮುಂದೆ ಸಾಗಬೇಕು’; ವಿಜಯ್ ವರ್ಮ
Image
‘ಲೇ ಕಳಸ್ರಯ್ಯ ಇವಳನ್ನ’; ಸುಕೃತಾ ಮೇಲೆ ರವಿಚಂದ್ರನ್ ಸಿಟ್ಟಾಗಿದ್ದೇಕೆ?
Image
ಸಿಕಂದರ್ ಗಳಿಕೆಯಲ್ಲಿ ಏರಿಕೆ; ಆದರೂ ನಿಂತಿಲ್ಲ ಸಲ್ಮಾನ್ ಖಾನ್ ಸಿನಿಮಾ ಪರದಾಟ
Image
ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸುವ ಸಮಸ್ಯೆಗಳೇನು?

‘ನಾನು ವಿ. ರವಿಚಂದ್ರನ್ ಜೊತೆ ಶೂಟ್ ಮಾಡುತ್ತಿದ್ದೆ. ಆ ಚಿತ್ರಕ್ಕೆ ಅವರದ್ದೇ ನಿರ್ದೇಶನ ಇತ್ತು. ಅವರ ತಂದೆ ನಿರ್ಮಾಣ ಮಾಡಿದ್ದರು. ಈ ಚಿತ್ರದ ಶೂಟ್ ಸಂದರ್ಭದಲ್ಲಿ ನನ್ನ ತಾಯಿ ಆಸ್ಪತ್ರೆಯಲ್ಲಿ ಇದ್ದರು. ಈ ವೇಳೆ 36 ಸಾವಿರ ರೂಪಾಯಿ ಬಿಲ್ ಆಗಿತ್ತು. ಅದನ್ನು ಹೇಗೆ ಪಾವತಿಸೋದು ಎಂದು ನಾನು ಚಿಂತೆಯಲ್ಲಿ ಇದ್ದೆ. ನಾನು ಆಗ ಒಬ್ಬಂಟಿಯಾಗಿದ್ದೆ. ತಾಯಿಗೆ ಅನಾರೋಗ್ಯ ಆದ ವಿಚಾರವನ್ನು ಯಾರ ಬಳಿಯೂ ಹೇಳಿಕೊಂಡಿಲ್ಲ’ ಎಂದಿದ್ದಾರೆ ಖುಷ್ಬೂ.

ಖುಷ್ಬು ಸಾಕಷ್ಟು ಡಿಸ್ಟರ್ಬ್ ಆಗಿರೋದನ್ನು ಗಮನಿಸಿದ ರವಿಚಂದ್ರನ್ ಅವರು ಈ ಬಗ್ಗೆ ಸ್ಟಾಫ್​ಗಳ ಬಳಿ ವಿಚಾರಿಸಿದರು. ಆಗ ಇರೋ ವಿಚಾರವನ್ನು ಅವರು ತಿಳಿಸಿದರು. ‘ರವಿಚಂದ್ರನ್ ಅವರ ತಂದೆ ವೀರಸ್ವಾಮಿ ಅವರು ವಿಚಾರ ತಿಳಿದು ಆಸ್ಪತ್ರೆಗೆ ತೆರಳಿದರು. ವೈದ್ಯರ ಜೊತೆ ಮಾತನಾಡಿ, ಬಿಲ್ ಕಟ್ಟಿ ನನ್ನ ತಾಯಿಯನ್ನು ಮನೆಗೆ ಕರೆದುಕೊಂಡು ಹೋಗಿ ಬಿಟ್ಟರು’ ಎಂದು ಖುಷ್ಬೂ ಹೇಳಿದ್ದಾರೆ.

ಇದನ್ನೂ ಓದಿ: ‘ಲೇ ಕಳಸ್ರಯ್ಯ ಇವಳನ್ನ’; ಸುಕೃತಾ ಮೇಲೆ ರವಿಚಂದ್ರನ್ ಸಿಟ್ಟಾಗಿದ್ದೇಕೆ?

ಶೂಟಿಂಗ್ ಮುಗಿದ ಬಳಿಕ ರವಿಚಂದ್ರನ್ ಹಾಗೂ ವೀರಸ್ವಾಮಿ ಅವರು ಖುಷ್ಬೂ ವಿರುದ್ಧ ಸಿಟ್ಟಾದರಂತೆ. ‘ಏಕೆ ಈ ವಿಚಾರ ಮುಚ್ಚಿಟ್ಟಿರಿ’ ಎಂದು ಕೇಳಿದರಂತೆ. ‘ನನಗೆ ಹಣವನ್ನು ಹೇಗೆ ಕೇಳಬೇಕು ಎಂಬುದು ಗೊತ್ತಾಗಿರಲಿಲ್ಲ’ ಎಂದು ಖುಷ್ಬು ಅವರು ವೀರಸ್ವಾಮಿಗೆ ವಿವರಿಸಿದ್ದರು. ಇದನ್ನು ಖುಷ್ಬೂ ಈಗಲೂ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:01 pm, Tue, 1 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ