AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ಧಗೊಳ್ಳಲಿದೆ ವಾದಿರಾಜ ಸ್ವಾಮಿ ಬಯೋಪಿಕ್; ತೆರೆಮೇಲೆ 15ನೇ ಶತಮಾನದ ಕಥೆ

ವಾದಿರಾಜ ಸ್ವಾಮಿಗಳು 15ನೇ ಶತಮಾನದಲ್ಲಿ ಬದುಕಿದ್ದರು. 120 ವರ್ಷಗಳ ಕಾಲ ಅವರು ಜೀವಿಸಿದ್ದರು. ಈ ಕಾಲಘಟ್ಟವನ್ನು ತೆರೆಮೇಲೆ ತರೋದು ಒಂದು ಚಾಲೆಂಜ್​. ಹೀಗಾಗಿ ಹಯವದನ ಅವರಿಗೆ ಹೆಚ್ಚಿನ ಕಾಲಾವಕಾಶದ ಅಗತ್ಯ ಇದೆ. ‘

ಸಿದ್ಧಗೊಳ್ಳಲಿದೆ ವಾದಿರಾಜ ಸ್ವಾಮಿ ಬಯೋಪಿಕ್; ತೆರೆಮೇಲೆ 15ನೇ ಶತಮಾನದ ಕಥೆ
ಶ್ರೀ ವಾದಿರಾಜ ಗುರುಸಾರ್ವಭೌಮ ಅವರ ಸಿನಿಮಾ ಘೋಷಣೆಗೆ ಕರೆದ ಸುದ್ದಿಗೋಷ್ಠಿ ಸಂದರ್ಭದ ಫೋಟೋ
Follow us
ರಾಜೇಶ್ ದುಗ್ಗುಮನೆ
|

Updated on:Feb 04, 2023 | 12:25 PM

ಇತ್ತೀಚೆಗೆ ಅನೇಕ ಬಯೋಪಿಕ್​ಗಳು (Biopic) ಸೆಟ್ಟೇರುತ್ತಿವೆ. ಹಲವು ಬಯೋಪಿಕ್​ಗಳು ಯಶಸ್ಸು ಕಂಡಿವೆ. ಖ್ಯಾತ ನಾಮರ ಜೀವನವನ್ನು ದೊಡ್ಡ ಪರದೆಮೇಲೆ ತಂದರೆ ಅದನ್ನು ಜನರು ಕಣ್ತುಂಬಿಕೊಳ್ಳುತ್ತಾರೆ. ಈಗ ಸೋದೆ ಶ್ರೀ ವಾದಿರಾಜ ಗುರುಸಾರ್ವಭೌಮರ ಕಥೆ ಸಿನಿಮಾ ಆಗಲಿದೆ. ಈ ಚಿತ್ರವನ್ನು ಹಯವದನ (Hayavadana) ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮಾಡೋದು ದೊಡ್ಡ ಚಾಲೆಂಜ್ ಅನ್ನೋದು ನಿರ್ದೇಶಕರ ಮಾತು.

ವಾದಿರಾಜ ಗುರುಗಳ ಜಯಂತಿಯಂದು ಕುಂದಾಪುರದಲ್ಲಿರುವ ಹೂವಿನಕೆರೆಯ ವಾದಿರಾಜ ಸ್ವಾಮಿಗಳ ಮಠದಲ್ಲಿ ಸಿನಿಮಾ ಘೋಷಣೆ ಆಗಿದೆ. ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ನಿರ್ದೇಶಕ ಹಯವದನ ಈ ಬಯೋಪಿಕ್ ನಿರ್ದೇಶನ ಮಾಡುತ್ತಿದ್ದಾರೆ. ವಾದಿರಾಜ ಸ್ವಾಮಿಗಳ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥರ ಆಶೀರ್ವಾದೊಂದಿಗೆ ಸಿನಿಮಾ ಸೆಟ್ಟೇರಿದೆ ಅನ್ನೋದು ವಿಶೇಷ.

ಈ ರೀತಿಯ ಸಿನಿಮಾ ಮಾಡುವಾಗ ಅಧ್ಯಯನ ತುಂಬಾನೇ ಮುಖ್ಯವಾಗುತ್ತದೆ. ಅಂಕಿ ಅಂಶಗಳು ಕೊಂಚ ಹೆಚ್ಚು ಕಡಿಮೆ ಆದರೂ ತೊಂದರೆ ಆಗುತ್ತದೆ. ಹೀಗಾಗಿ ಹಯವದನ ಸಾಕಷ್ಟು ರಿಸರ್ಚ್ ವರ್ಕ್ ನಡೆಸುತ್ತಿದ್ದಾರೆ. ಸದ್ಯ ವಾದಿರಾಜ ಗುರುಸಾರ್ವಭೌಮರ ಪಾತ್ರವನ್ನು ಯಾರು ಮಾಡುತ್ತಾರೆ ಅನ್ನೋದು ಇನ್ನೂ ಫೈನಲ್ ಆಗಿಲ್ಲ. ಇತರ ಪಾತ್ರಗಳ ಆಯ್ಕೆ ಇನ್ನಷ್ಟೇ ಆಗಬೇಕಿದೆ. ವಿಕ್ರಮ್ ಹತ್ವಾರ್, ಹಯವದನ ಸ್ಕ್ರಿಪ್ಟ್ ಕೆಲಸ ನಡೆಸುತ್ತಿದ್ದಾರೆ. ಇದನ್ನು ಪೂರ್ಣಗೊಳಿಸಲು 4-5 ತಿಂಗಳು ಹಿಡಿಯಲಿದೆ.

ವಾದಿರಾಜ ಸ್ವಾಮಿಗಳು 15ನೇ ಶತಮಾನದಲ್ಲಿ ಬದುಕಿದ್ದರು. 120 ವರ್ಷಗಳ ಕಾಲ ಅವರು ಜೀವಿಸಿದ್ದರು. ಈ ಕಾಲಘಟ್ಟವನ್ನು ತೆರೆಮೇಲೆ ತರೋದು ಒಂದು ಚಾಲೆಂಜ್​. ಹೀಗಾಗಿ ಹಯವದನ ಅವರಿಗೆ ಹೆಚ್ಚಿನ ಕಾಲಾವಕಾಶದ ಅಗತ್ಯ ಇದೆ. ‘ಸಮಾಜಕ್ಕೆ ಭಕ್ತಿ ಬಗ್ಗೆ, ಸಮಾಜ ಸೇವೆ ಬಗ್ಗೆ, ಮಾನವೀಯತೆ ಬಗ್ಗೆ ಸ್ವಾಮಿಗಳು ಹೇಳಿದ್ದಾರೆ. ಸಮಾಜ ಸುಧಾರಣೆ ಮಾಡಿದ್ದಾರೆ. 15ನೇ ಶತಮಾನದಲ್ಲಿ ಕನ್ನಡದಲ್ಲಿ ಕೀರ್ತನೆಗಳನ್ನು ನೀಡಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ತುಂಬಾ ಇದೆ. ಭಕ್ತಿ ಮತ್ತು ಗೌರವದಿಂದ ಅವರ ಕಥೆಯನ್ನು ಸಿನಿಮಾ ಮಾಡುತ್ತಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಈ ಮೊದಲು ವಾದಿರಾಜ ಸ್ವಾಮಿಗಳ ಧಾರಾವಾಹಿ ಹಾಗೂ ಸಿನಿಮಾ ಮಾಡಲು ಅನೇಕರು ಪ್ಲ್ಯಾನ್ ರೂಪಿಸಿದ್ದರು. ಆದರೆ, ಇದಕ್ಕೆ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥರವರು ಒಪ್ಪಿರಲಿಲ್ಲ. ಸೂಕ್ತ ವ್ಯಕ್ತಿ ಸಿನಿಮಾ ಮಾಡಲು ಬರಲಿ ಎಂದು ಅವರು ಕಾಯುತ್ತಿದ್ದರು. ಆಗ ಹಯವದನ ಅವರು ಆಗಮಿಸಿ ಸಿನಿಮಾ ಮಾಡುವ ಆಲೋಚನೆ ತಿಳಿಸಿದರು. ಅವರು ವಾದಿರಾಜ ಭಕ್ತರು ಕೂಡ ಹೌದು. ಈ ಕಾರಣಕ್ಕೆ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥರವರು ಬಯೋಪಿಕ್ ಮಾಡೋಕೆ ಒಪ್ಪಿಗೆ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥರವರು, ‘ವಾದಿರಾಜ ಗುರುಗಳು 15,16ನೇ ಶತಮಾನದಲ್ಲಿ ಜೀವಿಸಿದ್ದರು. ಅವರು 113 ವರ್ಷ ಸನ್ಯಾಸ ಜೀವನ ನಡೆಸಿದ್ದಾರೆ. ಅವರ 120 ವರ್ಷಗಳ ಜೀವನವನ್ನು ಒಂದು ಸಿನಿಮಾದಲ್ಲಿ ತೋರಿಸೋದು ಕಷ್ಟಸಾಧ್ಯ. ಇದನ್ನು ಹಯವದನ ಅವರು ಮಾಡುತ್ತಾರೆ ಅನ್ನೋ ನಂಬಿಕೆ ಇದೆ’ ಎಂದಿದ್ದಾರೆ.

ಚಿತ್ರಕ್ಕೆ ಶೀರ್ಷಿಕೆ ಇನ್ನೂ ಫೈನಲ್ ಆಗಿಲ್ಲ. ತಾಂತ್ರಿಕ ವರ್ಗದ ಆಯ್ಕೆ ಕೂಡ ಬಾಕಿ ಇದೆ. ಇವುಗಳ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಸಿಗಲಿದೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ಸ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಹಾಗೂ ಸ್ನೇಹಿತರು ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ. ಐದು ತಿಂಗಳ ಬಳಿಕ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:22 pm, Sat, 4 February 23

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್