AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘90 ಬಿಡಿ ಮನೀಗ್ ನಡಿ’ ಚಿತ್ರದ ಹಾಡು ರಿಲೀಸ್​; ​ಇದು ವೈಜನಾಥ್​ ಬಿರಾದಾರ್​ ನಟನೆಯ 500ನೇ ಸಿನಿಮಾ

Vaijanath Biradar | 90 Bidi Manig Nadi: ‘ನಾನು 500 ಚಿತ್ರಗಳಲ್ಲಿ ನಟಿಸಿದ್ದೇನೆಂದರೆ ಅದಕ್ಕೆ ಎಲ್ಲರ ಪ್ರೋತ್ಸಾಹ ಕಾರಣ’ ಎಂದು ವೈಜನಾಥ್​ ಬಿರಾದಾರ್​ ಹೇಳಿದ್ದಾರೆ. ‘90 ಬಿಡಿ ಮನೀಗ್ ನಡಿ’ ಚಿತ್ರದಲ್ಲಿ ಅವರು ಡ್ಯಾನ್ಸ್​ ಕೂಡ ಮಾಡಿದ್ದಾರೆ.

‘90 ಬಿಡಿ ಮನೀಗ್ ನಡಿ’ ಚಿತ್ರದ ಹಾಡು ರಿಲೀಸ್​; ​ಇದು ವೈಜನಾಥ್​ ಬಿರಾದಾರ್​ ನಟನೆಯ 500ನೇ ಸಿನಿಮಾ
ನೀತಾ, ವೈಜನಾಥ್ ಬಿರಾದಾರ್
TV9 Web
| Edited By: |

Updated on: Aug 24, 2022 | 7:15 AM

Share

ನಟ ವೈಜನಾಥ್​ ಬಿರಾದಾರ್​ (Vaijanath Biradar) ಅವರಿಗೆ ಈಗ 70 ವರ್ಷ  ವಯಸ್ಸು. ಈ ಪ್ರಾಯದಲ್ಲೂ ಹದಿಹರೆಯದ ಯುವಕನ ರೀತಿ ಉತ್ಸಾಹ ಹೊಂದಿದ್ದಾರೆ. ಕನ್ನಡ ಸಿನಿಮಾಗಳಲ್ಲಿ ಹಾಸ್ಯಮಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿರುವ ಅವರು ‘90 ಬಿಡಿ ಮನೀಗ್ ನಡಿ’ (90 Bidi Manig Nadi) ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಇದು ಅವರು ನಟಿಸಿರುವ 500ನೇ ಚಿತ್ರ ಎಂಬುದು ವಿಶೇಷ. ಇತ್ತೀಚೆಗೆ ಈ ಸಿನಿಮಾದ ಆಡಿಯೋ ರಿಲೀಸ್​ ಮಾಡಲಾಯಿತು. ಅದರ ಪ್ರಯುಕ್ತ ಸುದ್ದಿಗೋಷ್ಠಿ ಕರೆದು ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಯಿತು. ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರವನ್ನು ರತ್ನಮಾಲ ಬಾದರದಿನ್ನಿ ನಿರ್ಮಾಣ ಮಾಡಿದ್ದಾರೆ.

‘ನಾನು 500 ಸಿನಿಮಾಗಳಲ್ಲಿ ನಟಿಸಿದ್ದೇನೆಂದರೆ ಅದಕ್ಕೆ ರಂಗಭೂಮಿ ಹಾಗೂ ಚಿತ್ರರಂಗದವರ ಪ್ರೋತ್ಸಾಹವೇ ಕಾರಣ.  ಈ ಚಿತ್ರದಲ್ಲಿ ಊದಿನ ಕಡ್ಡಿ ಮಾರುವವನ ಪಾತ್ರ ಮಾಡಿದ್ದೇನೆ.  ನನಗೆ ಕುಡಿತದ ಚಟ ಇರುತ್ತದೆ. ನಂತರ ಒಬ್ಬ ಹೆಂಗಸಿನ ಪರಿಚಯ ಆಗುತ್ತದೆ. ಅಲ್ಲಿಂದ ಅನೇಕ ತಿರುವುಗಳು ಎದುರಾಗುತ್ತವೆ. ನಾಟಕದಲ್ಲಿ ಹೀಗೋ ಕುಣಿಯುತ್ತಿದ್ದೆ. ಈ ಚಿತ್ರದಲ್ಲಿ ಹಾಡೊಂದಕ್ಕೆ ಪೂರ್ಣಪ್ರಮಾಣದಲ್ಲಿ ನೃತ್ಯ ಮಾಡಿದ್ದೇನೆ. ಭೂಷಣ್ ಮಾಸ್ಟರ್ ನನ್ನಿಂದ ಡ್ಯಾನ್ಸ್​ ಮಾಡಿಸಿದ್ದಾರೆ’ ಎಂದಿದ್ದಾರೆ ವೈಜನಾಥ್ ಬಿರಾದಾರ್.

‘ಈ ಸಿನಿಮಾದಲ್ಲಿ ಸಮಾಜಕ್ಕೊಂದು ಸಂದೇಶ ಇದೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಕಥೆ ಹೇಳುತ್ತೇವೆ. ಶೇ. 90ರಷ್ಟು  ಸಂಭಾಷಣೆ ಉತ್ತರ ಕರ್ನಾಟಕ ಶೈಲಿಯಲ್ಲಿ ಇರುತ್ತದೆ. ಹಾಗಾಗಿ ಆ ಭಾಗದ ಕಲಾವಿದನೇ ಬೇಕಾಗಿತ್ತು. ಆಗ ಬಿರಾದಾರ್ ಅವರನ್ನು ಆಯ್ಕೆ ಮಾಡಿಕೊಂಡೆವು’‌ ಎಂಬುದು ನಿರ್ದೇಶಕರಾದ  ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಅವರ ಮಾತು.

ಇದನ್ನೂ ಓದಿ
Image
Drama Juniors: ‘ಡ್ರಾಮಾ ಜ್ಯೂನಿಯರ್ಸ್​ 4’ ಫಿನಾಲೆಯಲ್ಲಿ ಗೆದ್ದ ಮಕ್ಕಳಿಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?
Image
ಖ್ಯಾತ ನಿರ್ದೇಶಕ ಲಿಂಗುಸ್ವಾಮಿಗೆ 6 ತಿಂಗಳು ಜೈಲು ಶಿಕ್ಷೆ; ಮಾಡಿದ ಅಪರಾಧವೇನು?
Image
‘ಜೊತೆ ಜೊತೆಯಲಿ ಧಾರಾವಾಹಿಯ ಆರ್ಯವರ್ಧನ್​ ಪಾತ್ರಕ್ಕೆ ಆಫರ್ ಬಂದಿದ್ದು ನಿಜ, ಆದರೆ…’: ಅನೂಪ್ ಭಂಡಾರಿ ಸ್ಪಷ್ಟನೆ

ನಟಿ ನೀತಾ ಅವರು ವೃತ್ತಿ ರಂಗಭೂಮಿಯಲ್ಲಿ ಚಿಕ್ಕ ವಯಸ್ಸಿನಿಂದಲೂ ಪಳಗಿದ್ದಾರೆ. ಅನೇಕ ನಾಟಕಗಳಲ್ಲಿ ಅಭಿನಯಿಸಿದ ಅನುಭವ ಅವರಿಗೆ ಇದೆ. ಈ ಸಿನಿಮಾದಲ್ಲಿ ಬಿರಾದಾರ್‌ ಅವರಿಗೆ ನೀತಾ ಜೋಡಿ ಆಗಿದ್ದಾರೆ. ‘ನಾನು ಈ ಚಿತ್ರದಲ್ಲಿ ವೇಶ್ಯೆ ಪಾತ್ರ ಮಾಡಿದ್ದೇನೆ. ನಾಯಕನನ್ನು ದುಶ್ಚಟಗಳಿಂದ ದೂರ ಮಾಡುತ್ತೇನೆ’ ಎಂದು ಅವರು ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡಿದ್ದಾರೆ.

ಹಾಡಿನಲ್ಲಿ ಭರ್ಜರಿಯಾಗಿ ಡ್ಯಾನ್ಸ್​ ಮಾಡಿರುವ ಬಿರಾದಾರ್​ ಅವರಿಗೆ ನಟ ಧರ್ಮ ಮೆಚ್ಚುಗೆ ಸೂಚಿಸಿದ್ದಾರೆ. ನಟ ಕರಿಸುಬ್ಬು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವೀರ್​ ಸಮರ್ಥ್​ ಹಿನ್ನೆಲೆ ಸಂಗೀತ ನೀಡಿದ್ದಾರೆ. ಶಿವು ಬೇರಗಿ ಸಾಹಿತ್ಯ ಬರೆದು ಸಂಗೀತ ಸಂಯೋಜನೆ ಮಾಡಿದ್ದಾರೆ. ಗಾಯಕ ರವೀಂದ್ರ ಸೊರಗಾವಿ ಕೂಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ