AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ

Vaishnavi Gowda: ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಸದ್ಯ ಚರ್ಚೆಯಲ್ಲಿದೆ. ಈ ಚಿತ್ರದ ‘ಕಾವಾಲಾ..’ ಸಾಂಗ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಹವಾ ಜೋರಾಗಿದೆ. ವೈಷ್ಣವಿ ಗೌಡ ಕೂಡ ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ
ವೈಷ್ಣವಿ
ರಾಜೇಶ್ ದುಗ್ಗುಮನೆ
|

Updated on:Jul 24, 2023 | 11:47 AM

Share

ನಟಿ ವೈಷ್ಣವಿ ಗೌಡ (Vaishnavi Gowda) ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಮಿಲಿಯನ್ ಫಾಲೋವರ್ಸ್ ಇದ್ದಾರೆ. ವೈಷ್ಣವಿ ಗೌಡ ಅವರು ಆಗಾಗ ಅಭಿಮಾನಿಗಳಿಗೋಸ್ಕರ ಫೋಟೋ ಹಂಚಿಕೊಳ್ಳುತ್ತಾರೆ. ರೀಲ್ಸ್ ಕೂಡ ಮಾಡಿ ಶೇರ್ ಮಾಡಿಕೊಳ್ಳುತ್ತಾರೆ. ಈಗ ಅವರು ‘ಜೈಲರ್’ ಸಿನಿಮಾದ ‘ಕಾವಾಲಾ..’ ಹಾಡಿಗೆ (Kaavaala Song) ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಕಮೆಂಟ್ ಆಯ್ಕೆ ಆಫ್ ಇದೆ. ಹೀಗಾಗಿ ಅಭಿಮಾನಿಗಳು ಈ ಬಗ್ಗೆ ಕಮೆಂಟ್ ಮಾಡುವಂತಿಲ್ಲ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಸದ್ಯ ಚರ್ಚೆಯಲ್ಲಿದೆ. ಈ ಚಿತ್ರದ ‘ಕಾವಾಲಾ..’ ಸಾಂಗ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಹವಾ ಜೋರಾಗಿದೆ. ಯೂಟ್ಯೂಬ್​ನಲ್ಲಿ ಈ ಸಾಂಗ್ ಧೂಳೆಬ್ಬಿಸಿದೆ. ಕೋಟ್ಯಂತರ ಮಂದಿ ಹಾಡನ್ನು ನೋಡಿದ್ದಾರೆ. ಈ ಹಾಡಿನಲ್ಲಿ ತಮನ್ನಾ ಭಾಟಿಯಾ ಸಖತ್ ಆಗಿ ಸ್ಟೆಪ್ ಹಾಕಿದ್ದರು. ಇದರ ಪರಿ ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಹಾಡಿಗೆ ಅನೇಕ ಸೆಲೆಬ್ರಿಟಿಗಳು, ಫ್ಯಾನ್ಸ್ ರೀಲ್ಸ್ ಮಾಡುತ್ತಿದ್ದಾರೆ.

ವೈಷ್ಣವಿ ಗೌಡ ಕೂಡ ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೆ ಅವರು ಕುಣಿದ ಪರಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ರೀತಿಯ ವಿಡಿಯೋ ಹಾಕಿದಾಗ ನೆಗೆಟಿವ್ ಕಮೆಂಟ್​ಗಳು ಬರುತ್ತವೆ. ಆದರೆ, ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ವೈಷ್ಣವಿ ಕಮೆಂಟ್ ಆಯ್ಕೆಯನ್ನು ಆಫ್ ಮಾಡಿದ್ದಾರೆ. ಹೀಗಾಗಿ, ಅಭಿಮಾನಿಗಳಿಗೆ ಕಮೆಂಟ್ ಮಾಡೋಕೆ ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ‘ಸೀತಾ ರಾಮ’ ಧಾರಾವಾಹಿ ಆರಂಭಕ್ಕೂ ಮೊದಲು ಸಖತ್ ಕ್ಯೂಟ್ ಲುಕ್​ನಲ್ಲಿ ಮಿಂಚಿದ ವೈಷ್ಣವಿ ಗೌಡ

ವೈಷ್ಣವಿ ಗೌಡ ಅವರು ಸದ್ಯ ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವೈಷ್ಣವಿ ಅವರು ಸೀತಾ ಹೆಸರಿನ ಪಾತ್ರ ಮಾಡಿದರೆ, ರಾಮ್ ಹೆಸರಿನ ಪಾತ್ರದಲ್ಲಿ ಗಗನ್ ಮಿಂಚುತ್ತಿದ್ದಾರೆ. ಸೀತಾ ಮಗಳು ಸಿಹಿ ಪಾತ್ರದಲ್ಲಿ  ರೀತು ಸಿಂಗ್ ಅಭಿನಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:40 am, Mon, 24 July 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ