AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ

Vaishnavi Gowda: ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಸದ್ಯ ಚರ್ಚೆಯಲ್ಲಿದೆ. ಈ ಚಿತ್ರದ ‘ಕಾವಾಲಾ..’ ಸಾಂಗ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಹವಾ ಜೋರಾಗಿದೆ. ವೈಷ್ಣವಿ ಗೌಡ ಕೂಡ ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ
ವೈಷ್ಣವಿ
ರಾಜೇಶ್ ದುಗ್ಗುಮನೆ
|

Updated on:Jul 24, 2023 | 11:47 AM

Share

ನಟಿ ವೈಷ್ಣವಿ ಗೌಡ (Vaishnavi Gowda) ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಮಿಲಿಯನ್ ಫಾಲೋವರ್ಸ್ ಇದ್ದಾರೆ. ವೈಷ್ಣವಿ ಗೌಡ ಅವರು ಆಗಾಗ ಅಭಿಮಾನಿಗಳಿಗೋಸ್ಕರ ಫೋಟೋ ಹಂಚಿಕೊಳ್ಳುತ್ತಾರೆ. ರೀಲ್ಸ್ ಕೂಡ ಮಾಡಿ ಶೇರ್ ಮಾಡಿಕೊಳ್ಳುತ್ತಾರೆ. ಈಗ ಅವರು ‘ಜೈಲರ್’ ಸಿನಿಮಾದ ‘ಕಾವಾಲಾ..’ ಹಾಡಿಗೆ (Kaavaala Song) ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಕಮೆಂಟ್ ಆಯ್ಕೆ ಆಫ್ ಇದೆ. ಹೀಗಾಗಿ ಅಭಿಮಾನಿಗಳು ಈ ಬಗ್ಗೆ ಕಮೆಂಟ್ ಮಾಡುವಂತಿಲ್ಲ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಸದ್ಯ ಚರ್ಚೆಯಲ್ಲಿದೆ. ಈ ಚಿತ್ರದ ‘ಕಾವಾಲಾ..’ ಸಾಂಗ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಹವಾ ಜೋರಾಗಿದೆ. ಯೂಟ್ಯೂಬ್​ನಲ್ಲಿ ಈ ಸಾಂಗ್ ಧೂಳೆಬ್ಬಿಸಿದೆ. ಕೋಟ್ಯಂತರ ಮಂದಿ ಹಾಡನ್ನು ನೋಡಿದ್ದಾರೆ. ಈ ಹಾಡಿನಲ್ಲಿ ತಮನ್ನಾ ಭಾಟಿಯಾ ಸಖತ್ ಆಗಿ ಸ್ಟೆಪ್ ಹಾಕಿದ್ದರು. ಇದರ ಪರಿ ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಹಾಡಿಗೆ ಅನೇಕ ಸೆಲೆಬ್ರಿಟಿಗಳು, ಫ್ಯಾನ್ಸ್ ರೀಲ್ಸ್ ಮಾಡುತ್ತಿದ್ದಾರೆ.

ವೈಷ್ಣವಿ ಗೌಡ ಕೂಡ ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೆ ಅವರು ಕುಣಿದ ಪರಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ರೀತಿಯ ವಿಡಿಯೋ ಹಾಕಿದಾಗ ನೆಗೆಟಿವ್ ಕಮೆಂಟ್​ಗಳು ಬರುತ್ತವೆ. ಆದರೆ, ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ವೈಷ್ಣವಿ ಕಮೆಂಟ್ ಆಯ್ಕೆಯನ್ನು ಆಫ್ ಮಾಡಿದ್ದಾರೆ. ಹೀಗಾಗಿ, ಅಭಿಮಾನಿಗಳಿಗೆ ಕಮೆಂಟ್ ಮಾಡೋಕೆ ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ‘ಸೀತಾ ರಾಮ’ ಧಾರಾವಾಹಿ ಆರಂಭಕ್ಕೂ ಮೊದಲು ಸಖತ್ ಕ್ಯೂಟ್ ಲುಕ್​ನಲ್ಲಿ ಮಿಂಚಿದ ವೈಷ್ಣವಿ ಗೌಡ

ವೈಷ್ಣವಿ ಗೌಡ ಅವರು ಸದ್ಯ ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವೈಷ್ಣವಿ ಅವರು ಸೀತಾ ಹೆಸರಿನ ಪಾತ್ರ ಮಾಡಿದರೆ, ರಾಮ್ ಹೆಸರಿನ ಪಾತ್ರದಲ್ಲಿ ಗಗನ್ ಮಿಂಚುತ್ತಿದ್ದಾರೆ. ಸೀತಾ ಮಗಳು ಸಿಹಿ ಪಾತ್ರದಲ್ಲಿ  ರೀತು ಸಿಂಗ್ ಅಭಿನಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:40 am, Mon, 24 July 23

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ