AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ

Vaishnavi Gowda: ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಸದ್ಯ ಚರ್ಚೆಯಲ್ಲಿದೆ. ಈ ಚಿತ್ರದ ‘ಕಾವಾಲಾ..’ ಸಾಂಗ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಹವಾ ಜೋರಾಗಿದೆ. ವೈಷ್ಣವಿ ಗೌಡ ಕೂಡ ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ
ವೈಷ್ಣವಿ
Follow us
ರಾಜೇಶ್ ದುಗ್ಗುಮನೆ
|

Updated on:Jul 24, 2023 | 11:47 AM

ನಟಿ ವೈಷ್ಣವಿ ಗೌಡ (Vaishnavi Gowda) ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಮಿಲಿಯನ್ ಫಾಲೋವರ್ಸ್ ಇದ್ದಾರೆ. ವೈಷ್ಣವಿ ಗೌಡ ಅವರು ಆಗಾಗ ಅಭಿಮಾನಿಗಳಿಗೋಸ್ಕರ ಫೋಟೋ ಹಂಚಿಕೊಳ್ಳುತ್ತಾರೆ. ರೀಲ್ಸ್ ಕೂಡ ಮಾಡಿ ಶೇರ್ ಮಾಡಿಕೊಳ್ಳುತ್ತಾರೆ. ಈಗ ಅವರು ‘ಜೈಲರ್’ ಸಿನಿಮಾದ ‘ಕಾವಾಲಾ..’ ಹಾಡಿಗೆ (Kaavaala Song) ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಕಮೆಂಟ್ ಆಯ್ಕೆ ಆಫ್ ಇದೆ. ಹೀಗಾಗಿ ಅಭಿಮಾನಿಗಳು ಈ ಬಗ್ಗೆ ಕಮೆಂಟ್ ಮಾಡುವಂತಿಲ್ಲ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಸದ್ಯ ಚರ್ಚೆಯಲ್ಲಿದೆ. ಈ ಚಿತ್ರದ ‘ಕಾವಾಲಾ..’ ಸಾಂಗ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಹವಾ ಜೋರಾಗಿದೆ. ಯೂಟ್ಯೂಬ್​ನಲ್ಲಿ ಈ ಸಾಂಗ್ ಧೂಳೆಬ್ಬಿಸಿದೆ. ಕೋಟ್ಯಂತರ ಮಂದಿ ಹಾಡನ್ನು ನೋಡಿದ್ದಾರೆ. ಈ ಹಾಡಿನಲ್ಲಿ ತಮನ್ನಾ ಭಾಟಿಯಾ ಸಖತ್ ಆಗಿ ಸ್ಟೆಪ್ ಹಾಕಿದ್ದರು. ಇದರ ಪರಿ ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಹಾಡಿಗೆ ಅನೇಕ ಸೆಲೆಬ್ರಿಟಿಗಳು, ಫ್ಯಾನ್ಸ್ ರೀಲ್ಸ್ ಮಾಡುತ್ತಿದ್ದಾರೆ.

ವೈಷ್ಣವಿ ಗೌಡ ಕೂಡ ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೆ ಅವರು ಕುಣಿದ ಪರಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ರೀತಿಯ ವಿಡಿಯೋ ಹಾಕಿದಾಗ ನೆಗೆಟಿವ್ ಕಮೆಂಟ್​ಗಳು ಬರುತ್ತವೆ. ಆದರೆ, ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ವೈಷ್ಣವಿ ಕಮೆಂಟ್ ಆಯ್ಕೆಯನ್ನು ಆಫ್ ಮಾಡಿದ್ದಾರೆ. ಹೀಗಾಗಿ, ಅಭಿಮಾನಿಗಳಿಗೆ ಕಮೆಂಟ್ ಮಾಡೋಕೆ ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ‘ಸೀತಾ ರಾಮ’ ಧಾರಾವಾಹಿ ಆರಂಭಕ್ಕೂ ಮೊದಲು ಸಖತ್ ಕ್ಯೂಟ್ ಲುಕ್​ನಲ್ಲಿ ಮಿಂಚಿದ ವೈಷ್ಣವಿ ಗೌಡ

ವೈಷ್ಣವಿ ಗೌಡ ಅವರು ಸದ್ಯ ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವೈಷ್ಣವಿ ಅವರು ಸೀತಾ ಹೆಸರಿನ ಪಾತ್ರ ಮಾಡಿದರೆ, ರಾಮ್ ಹೆಸರಿನ ಪಾತ್ರದಲ್ಲಿ ಗಗನ್ ಮಿಂಚುತ್ತಿದ್ದಾರೆ. ಸೀತಾ ಮಗಳು ಸಿಹಿ ಪಾತ್ರದಲ್ಲಿ  ರೀತು ಸಿಂಗ್ ಅಭಿನಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:40 am, Mon, 24 July 23

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ