AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್’ ವೈಷ್ಣವಿ ಗೌಡ ಹೊಸ ಸಿನಿಮಾಗೆ ಭರ್ಜರಿ ಕ್ಲೈಮ್ಯಾಕ್ಸ್​; ಸೆನ್ಸಾರ್​ ಪ್ರಕ್ರಿಯೆ ಮುಗಿಸಿದ ‘ಬಹುಕೃತ ವೇಷಂ’

ವೈಷ್ಣವಿ ಗೌಡ ಅವರ ಮುಂದಿನ ಚಿತ್ರದ ಹೆಸರು ‘ಬಹುಕೃತ ವೇಷಂ’. ‘ಗೌಡ್ರು ಸೈಕಲ್’ ಸಿನಿಮಾದ ನಾಯಕ ಶಶಿಕಾಂತ್ ಈ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಶಾಂತ್ ಕೆ. ಎಳ್ಳಂಪಳ್ಳಿ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ.

‘ಬಿಗ್​ ಬಾಸ್’ ವೈಷ್ಣವಿ ಗೌಡ ಹೊಸ ಸಿನಿಮಾಗೆ ಭರ್ಜರಿ ಕ್ಲೈಮ್ಯಾಕ್ಸ್​; ಸೆನ್ಸಾರ್​ ಪ್ರಕ್ರಿಯೆ ಮುಗಿಸಿದ ‘ಬಹುಕೃತ ವೇಷಂ’
ವೈಷ್ಣವಿ ಗೌಡ-ಶಶಿಕಾಂತ್
TV9 Web
| Edited By: |

Updated on: Jan 29, 2022 | 5:54 PM

Share

‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಒಂದು ದೊಡ್ಡ ಅಭಿಮಾನಿ ಬಳಗ ಸೃಷ್ಟಿಸಿಕೊಂಡವರು ನಟಿ ವೈಷ್ಣವಿ ಗೌಡ (Vaishnavi Gowda). ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ (Kannada Bigg Boss 8)ಕ್ಕೆ ತೆರಳಿದ ನಂತರದಲ್ಲಿ ಈ ಅಭಿಮಾನಿ ಬಳಗ ಹಿರಿದಾಗಿದೆ. ಅವರನ್ನು ಇಷ್ಟಪಡೋಕೆ ಅಭಿಮಾನಿಗಳಿಗೆ ಹಲವು ಕಾರಣ ಸಿಕ್ಕಿವೆ. ಅಂದುಕೊಂಡ ಮಟ್ಟಿಗೆ ವೋಟ್​ ಬೀಳದ ಕಾರಣ ಬಿಗ್​ ಬಾಸ್​ ಗೆಲ್ಲೋಕೆ ಅವರಿಗೆ ಸಾಧ್ಯವಾಗಿಲ್ಲ. ಟ್ರೋಫಿ ಗೆಲ್ಲದೇ ಇದ್ದರೂ ಅವರ ಜನಪ್ರಿಯತೆ ಹೆಚ್ಚಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಷ್ಟೇ ಅಲ್ಲ, ಚಿತ್ರರಂಗದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ. ಹಲವು ಸಿನಿಮಾ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರ ನಟನೆಯ ಹೊಸ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಈ ಚಿತ್ರದ ಕ್ಲೈಮ್ಯಾಕ್ಸ್​ ಭರ್ಜರಿಯಾಗಿ ಮೂಡಿ ಬಂದಿದೆಯಂತೆ.  

ವೈಷ್ಣವಿ ಗೌಡ ಅವರ ಮುಂದಿನ ಚಿತ್ರದ ಹೆಸರು ‘ಬಹುಕೃತ ವೇಷಂ’. ‘ಗೌಡ್ರು ಸೈಕಲ್’ ಸಿನಿಮಾದ ನಾಯಕ ಶಶಿಕಾಂತ್ ಈ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಶಾಂತ್ ಕೆ. ಎಳ್ಳಂಪಳ್ಳಿ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಇವರು ಈ ಹಿಂದೆ ‘ಗೌಡ್ರು ಸೈಕಲ್’ ಚಿತ್ರ ನಿರ್ದೇಶನ ಮಾಡಿದ್ದರು. ಈಗ ಅವರು ‘ಬಹುಕೃತ ವೇಷಂ’ ಚಿತ್ರದ ಕ್ಲೈಮ್ಯಾಕ್ಸ್​ ಬಗ್ಗೆ ಮಾಹಿತಿ ನೀಡಿದ್ದಾರೆ. ಯಾರೂ ಊಹಿಸಿರದ ರೀತಿಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಮೂಡಿಬಂದಿದೆ ಬಂದಿದೆ ಎಂಬುದು ಅವರ ಅಭಿಪ್ರಾಯ.

ಸಾಮಾನ್ಯವಾಗಿ ಕ್ಲೈಮ್ಯಾಕ್ಸ್​ನಲ್ಲಿ ಒಂದು ದೊಡ್ಡ ಫೈಟ್​ ಇರುತ್ತದೆ. ಆದರೆ, ಈ ಚಿತ್ರದಲ್ಲಿ ಹಾಗಿಲ್ಲ. ‘ನಾಲ್ಕುವರೆ ನಿಮಿಷದ ಸಂಭಾಷಣೆ ಕ್ಲೈಮ್ಯಾಕ್ಸ್​ನಲ್ಲಿರಲಿದೆ. ಈ ಸಂಭಾಷಣೆ ಎಲ್ಲಿಯೂ ಕಟ್​ ಆಗುವುದಿಲ್ಲ. ಶಶಿಕಾಂತ್ ಹಾಗೂ ವೈಷ್ಣವಿ ಗೌಡ ಪೈಪೋಟಿ ಮೇಲೆ ಅಭಿನಯಿಸಿದ್ದಾರೆ’ ಎಂದು ನಿರ್ದೇಶಕ ಪ್ರಶಾಂತ್ ಕೆ. ಎಳ್ಳಂಪಳ್ಳಿ ತಿಳಿಸಿದ್ದಾರೆ.

ಎಚ್. ನಂದ ಹಾಗೂ ಡಿ.ಕೆ. ರವಿ ನಿರ್ಮಾಣದ ಈ ಚಿತ್ರಕ್ಕೆ ಅಧ್ಯಾಯ್ ತೇಜ್ ಕಥೆ ಚಿತ್ರಕಥೆ ಬರೆದಿದ್ದಾರೆ.  ಗಾಯಕ ವಿಜಯ ಪ್ರಕಾಶ್​ ಕಂಠದಲ್ಲಿ ಮೂಡಿ ಬಂದಿರುವ ‘ಮಾತುಕತೆ ನಿಂತ ಕಥೆ..’ ಹಾಡು​ ಹಾಗೂ ‘ಜೇಮ್ಸ್’ ಚಿತ್ರದ ನಿರ್ದೇಶಕರಾದ ಚೇತನ್ ಕುಮಾರ್ ಬರೆದ ‘ಮಾಮಾಹುಷಾರು..’ ಸಾಂಗ್​ ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಲಹರಿ ಆಡಿಯೋ ಮೂಲಕ‌ ಬಿಡುಗಡೆಯಾಗಿರುವ ಟೀಸರ್​​ಗೂ ಪ್ರಶಂಸೆ ಸಿಕ್ಕಿದೆ.

ವೈಶಾಖ್ ವಿ. ಭಾರ್ಗವ್​ ಅವರು ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂಗೀತ ನಿರ್ದೇಶಕರಾಗಿ ಇದು ಅವರಿಗೆ ಮೊದಲ ಅನುಭವ. ಕಿರಣ್ ಕೃಷ್ಣ ಮೂರ್ತಿ ಅವರು ಈ ಸಿನಿಮಾಗೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಹರ್ಷಕುಮಾರ್ ಗೌಡ ಛಾಯಾಗ್ರಹಣ ನೀಡಿದ್ದಾರೆ. ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ‘ ಸಿನಿಮಾಗೆ ಸಂಕಲನ ಮಾಡಿರೋ ಜ್ಞಾನೇಶ್ ಬಿ. ಮಾತಾಡ್ ಈ ಸಿನಿಮಾಕ್ಕೆ ಸಂಕಲನ ಮಾಡಿದ್ದಾರೆ. ಸಿನಿಮಾದ ಎಲ್ಲಾ ಕೆಲಸಗಳು ಪೂರ್ಣಗೊಂಡಿದ್ದು ಚಿತ್ರದ ಸೆನ್ಸಾರ್ ಕೂಡ ಪೂರ್ಣಗೊಂಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಬಹುಕೃತ ವೇಷಂ’ ಚಿತ್ರ ಕರ್ನಾಟಕ ರಾಜ್ಯಾದ್ಯಂತ  ತೆರೆಕಾಣಲಿದೆ.

ಇದನ್ನೂ ಓದಿ:  ಕುಟುಂಬದವರ ಸುದ್ದಿಗೆ ಬಂದ ಶಮಂತ್​ಗೆ ಸರಿಯಾಗೇ ತಿರುಗೇಟು ನೀಡಿದ ವೈಷ್ಣವಿ ಗೌಡ

ಆರ್​ಸಿಬಿ ಮಾಸ್ಕ್​ ಧರಿಸಿ ಮಿಂಚಿದ ವೈಷ್ಣವಿ ಗೌಡ; ಈ ಸಲ ಕಪ್​ ನಮ್ಮದೇ ಎಂದ ಸನ್ನಿಧಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್