AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day 2023: ಸ್ಯಾಂಡಲ್​ವುಡ್​ನಲ್ಲಿ ಪ್ರೇಮಕಥೆ; ಪ್ರೀತಿಸಿ ಮದುವೆ ಆದ ಸೆಲೆಬ್ರಿಟಿಗಳಿವರು

ಸ್ಯಾಂಡಲ್​ವುಡ್​ನಲ್ಲಿ ಅನೇಕರು ಪ್ರೀತಿಸಿ ಮದುವೆ ಆಗಿದ್ದಾರೆ. ಪ್ರೇಮದ ಪಾತ್ರ ಮಾಡುತ್ತಲೇ ಸಪ್ತಪದಿ ತುಳಿದ ಸ್ಯಾಂಡಲ್​ವುಡ್​ ಜೋಡಿಗಳ ಪಟ್ಟಿ ಇಲ್ಲಿದೆ.

Valentine’s Day 2023: ಸ್ಯಾಂಡಲ್​ವುಡ್​ನಲ್ಲಿ ಪ್ರೇಮಕಥೆ; ಪ್ರೀತಿಸಿ ಮದುವೆ ಆದ ಸೆಲೆಬ್ರಿಟಿಗಳಿವರು
ಸ್ಯಾಂಡಲ್​ವುಡ್​ನಲ್ಲಿ ಪ್ರೇಮಕಥೆ
ರಾಜೇಶ್ ದುಗ್ಗುಮನೆ
|

Updated on:Feb 14, 2023 | 2:33 PM

Share

Valentine’s Day 2023: ಬಣ್ಣ ಹಚ್ಚಿ ನಟಿಸುವಾಗ ಅನೇಕರಿಗೆ ಪ್ರೀತಿ ಹುಟ್ಟಿಕೊಂಡಿದ್ದಿದೆ. ತಾವು ಮಾಡುತ್ತಿರುವುದು ನಟನೆ ಎಂಬುದನ್ನು ಮರೆತು ಒಬ್ಬರಿಗೊಬ್ಬರು ಹತ್ತಿರ ಆದವರು ಅನೇಕರಿದ್ದಾರೆ. ಸೆಟ್​ನಲ್ಲಿ ಉಂಟಾಗುವ ಗೆಳೆತನ ಪ್ರೀತಿಗೆ ತಿರುಗಿ ನಂತರ ಹಸೆಮಣೆವರೆಗೂ ಕರೆದುಕೊಂಡು ಹೋದ ಉದಾಹರಣೆ ಸಾಕಷ್ಟಿದೆ. ಸ್ಯಾಂಡಲ್​ವುಡ್​ನಲ್ಲಿ (Sandalwood) ಅನೇಕರು ಪ್ರೀತಿಸಿ ಮದುವೆ ಆಗಿದ್ದಾರೆ. ಪ್ರೇಮದ ಪಾತ್ರ ಮಾಡುತ್ತಲೇ ಸಪ್ತಪದಿ ತುಳಿದ ಸ್ಯಾಂಡಲ್​ವುಡ್​ ಜೋಡಿಗಳ ಪಟ್ಟಿ ಇಲ್ಲಿದೆ.

ಯಶ್​-ರಾಧಿಕಾ:

ಯಶ್​ ಹಾಗೂ ರಾಧಿಕಾ ಪಂಡಿತ್​ ಸ್ಯಾಂಡಲ್​ವುಡ್​ನ ತುಂಬಾನೇ ಖ್ಯಾತಿ ಪಡೆದಿರುವ ಸೆಲೆಬ್ರಿಟಿಗಳು. ಇಬ್ಬರೂ ಕಿರುತೆರೆಯಲ್ಲಿ ಒಟ್ಟಾಗಿ ನಟಿಸಿದ ಧಾರಾವಾಹಿ ‘ನಂದಗೋಕುಲ’. ನಂತರ, ಇಬ್ಬರೂ ‘ಮೊಗ್ಗಿನ ಮನಸು’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿರಲಿಲ್ಲ. ನಂತರ ಈ ಜೋಡಿ 2016ರಲ್ಲಿ ಮದುವೆ ಆಯಿತು. ಇವರಿಗೆ ಆಯ್ರಾ ಹಾಗೂ ಯಥರ್ವ್​ ಹೆಸರಿನ ಮಕ್ಕಳಿದ್ದಾರೆ.

ಐಂದ್ರಿತಾ-ದಿಗಂತ್​:

ಐಂದ್ರಿತಾ ರೇ ಹಾಗೂ ದಿಗಂತ್​ ಮದುವೆ ಆಗಿ ಕೆಲ ವರ್ಷಗಳು ಕಳೆದಿವೆ. ಇವರದ್ದು ಲವ್​ ಮ್ಯಾರೇಜ್​. ಐಂದ್ರಿತಾ ಸಂದರ್ಶನ ನೋಡಿದ್ದ ದಿಗಂತ್​, ಈ ಹುಡುಗಿ ತುಂಬಾನೇ ಕ್ಯೂಟ್​ ಆಗಿದ್ದಾರೆ ಎಂದುಕೊಂಡಿದ್ದರು. ಅಚ್ಚರಿ ಎಂಬಂತೆ, ‘ಮನಸಾರೆ’ ಸಿನಿಮಾದಲ್ಲಿ ಐಂದ್ರಿತಾ ಜತೆ ತೆರೆ ಹಂಚಿಕೊಳ್ಳುವ ಅವಕಾಶ ದಿಗಂತ್​ಗೆ ಸಿಕ್ಕಿತ್ತು. ಈ ಸಿನಿಮಾ ಶೂಟಿಂಗ್​ ವೇಳೆ ದಿಗಂತ್​ ಅನಾರೋಗ್ಯಕ್ಕೆ ಒಳಗಾದಾಗ ಐಂದ್ರಿತಾ ಹಣ್ಣನ್ನು ಕಳುಹಿಸಿದ್ದರು ಎನ್ನಲಾಗಿದೆ. ಇಬ್ಬರ ನಡುವೆ ಪ್ರೀತಿ ಮೊಳೆಯಲು ಇಷ್ಟು ಸಾಕಿತ್ತು.

ಅಂಬರೀಷ್​-ಸುಮಲತಾ:

ಇವರ ಪ್ರೇಮಕತೆ ನಡೆದಿದ್ದು 90ರ ದಶಕದಲ್ಲಿ. ಇಬ್ಬರೂ ಅಂದಿನ ಕಾಲದಲ್ಲಿ ಸಿನಿಮಾ ಇಂಡಸ್ಟ್ರಿಯಲ್ಲಿ ಟಾಪ್​ನಲ್ಲಿದ್ದವರು. 1984ರಲ್ಲಿ ಮೊಟ್ಟ ಮೊದಲ ಬಾರಿಗೆ ಸುಮಲತಾ, ಅಂಬರೀಷ್​ ಅವರನ್ನು ನೋಡಿದ್ದು. ಅದೂ ಕಾರ್ಯಕ್ರಮವೊಂದರಲ್ಲಿ. ನಂತರ ‘ಆಹುತಿ’ ಸಿನಿಮಾದ ಸೆಟ್​ನಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ಮೊದಲ ಬಾರಿಗೆ ಭೇಟಿ ಮಾಡಿದ್ದರು. ಅಲ್ಲಿಂದ ಆರಂಭವಾದ ಪರಿಚಯ ಮದುವೆಗೆ ತಂದು ನಿಲ್ಲಿಸಿತ್ತು.

ಪ್ರಜ್ವಲ್​ ದೇವರಾಜ್​-ರಾಗಿಣಿ:

ಪ್ರಜ್ವಲ್​ ದೇವರಾಜ್​-ರಾಗಿಣಿ ಅವರದ್ದು ಇಂದು ನಿನ್ನೆಯ ಪ್ರೀತಿಯಲ್ಲ. ಪ್ರಜ್ವಲ್ ದೇವರಾಜ್ 9ನೇ ಕ್ಲಾಸ್​​ನಲ್ಲಿದ್ದಾಗ ಅವರು ರಾಗಿಣಿ ಚಂದ್ರನ್ ಮೊದಲ ಬಾರಿಗೆ ನೋಡಿದ್ದರು. ಆಗ ರಾಗಿಣಿ ಚಂದ್ರನ್ 6ನೇ ಕ್ಲಾಸ್​​ನಲ್ಲಿದ್ದರು. ನಂತರ ಡ್ಯಾನ್ಸ್​ ಕ್ಲಾಸ್​ನಲ್ಲಿ ಇಬ್ಬರಿಗೂ ಪರಿಚಯವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಲು ಆರಂಭಿಸಿದ್ದರು. ಇವರ ಪ್ರೀತಿಗೆ ಮನೆಯಲ್ಲೂ ಒಪ್ಪಿಗೆ ಸಿಕ್ಕಿತ್ತು. ನಂತರ ಮದುವೆ ಆದರು.

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​:

ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ‘ಲವ್‌ ಬರ್ಡ್ಸ್​’ ಸಿನಿಮಾ ರಿಲೀಸ್​ಗಾಗಿ ಕಾಯುತ್ತಿದ್ದಾರೆ. 2015ರಲ್ಲಿ ತೆರೆಕಂಡ ‘ಚಾರ್ಲಿ’ ಚಿತ್ರದಲ್ಲಿ ಇವರಿಬ್ಬರೂ ಒಟ್ಟಿಗೆ ನಟಿಸಿದ್ದರು. ‘ಚಾರ್ಲಿ’ ಚಿತ್ರದ ಶೂಟಿಂಗ್‌ ಮುಗಿಯುತ್ತಾ ಬಂದಿತ್ತು. ಈ ವೇಳೆ ಒಂದು ದಿನ ಮಿಲನಾ ಅವರನ್ನು ಕಾರಿನಲ್ಲಿ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗಿದ್ದ ಕೃಷ್ಣ ಮದುವೆಗೆ ನೇರವಾಗಿ ಪ್ರಪೋಸ್‌ ಮಾಡಿದ್ದರು. ಮಿಲನಾ ಕೂಡ ಇವರ ಪ್ರಪೋಸ್​ ಒಪ್ಪಿಕೊಂಡರು.

ಮೇಘನಾ ರಾಜ್​- ಚಿರು ಸರ್ಜಾ:

‘ಪೈರಸಿ ಮುಕ್ತ ಕನ್ನಡ ಚಲನಚಿತ್ರ’ ಹೆಸರಿನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಮೊಟ್ಟ ಮೊದಲ ಬಾರಿಗೆ ಮೇಘನಾ ರಾಜ್​-ಚಿರಂಜೀವಿ ಸರ್ಜಾ ಭೇಟಿ ಆಗಿದ್ದರು. ನಂತರ ಮೇಘನಾಗೆ ಮೆಸೇಜ್​ ಮಾಡಿ ಚಿರು ಮಾತು ಆರಂಭಿಸಿದ್ದರು. ದ್ವಾರಕೀಶ್ ನಿರ್ಮಾಣದ ‘ಆಟಗಾರ’ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಮತ್ತು ನಟಿ ಮೇಘನಾ ರಾಜ್ ಇಬ್ಬರು ಒಟ್ಟಿಗೆ ನಟಿಸಿದ್ದರು. ಗೆಳೆತನದ ಮೂಲಕ ಆರಂಭವಾದ ಇವರ ಸಂಬಂಧ ನಂತರ ಪ್ರೇಮದ ಹಾದಿ ತುಳಿದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:55 am, Tue, 14 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು