AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಹಾಡಿನ ಟ್ಯೂನ್ ಕದ್ದಿದ್ದು ಎಂದವರಿಗೆ ಉತ್ತರ ಕೊಟ್ಟ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್

‘ಕಾಂತಾರ’ ಸಿನಿಮಾದಲ್ಲಿ ಬರುವ ‘ವರಾಹ ರೂಪಂ..’ ಹಾಡಿನ ಟ್ಯೂನ್ ಬೇರೆ ಹಾಡಿನಿಂದ ಕದಿಯಲಾಗಿದೆ ಎಂದು ಕೆಲವರು ಟೀಕೆ ಮಾಡಿದ್ದರು. ಇದಕ್ಕೆ ಅಜನೀಶ್ ಅವರು ಉತ್ತರ ನೀಡಿದ್ದಾರೆ.

‘ಕಾಂತಾರ’ ಹಾಡಿನ ಟ್ಯೂನ್ ಕದ್ದಿದ್ದು ಎಂದವರಿಗೆ ಉತ್ತರ ಕೊಟ್ಟ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್
ಕಾಂತಾರ
TV9 Web
| Edited By: |

Updated on:Oct 12, 2022 | 6:57 PM

Share

ಅಜನೀಶ್ ಲೋಕನಾಥ್ (Ajaneesh Loknath) ಅವರು ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಸಂಗೀತ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅಜನೀಶ್ ಲೋಕನಾಥ್ ಅವರ ಖ್ಯಾತಿ ದುಪ್ಪಟ್ಟಾಗಿದೆ. ಈ ಸಿನಿಮಾದಲ್ಲಿ ಬರುವ ‘ವರಾಹ ರೂಪಂ..’ (Varaha Roopam) ಹಾಡಿನ ಟ್ಯೂನ್ ಮಲಯಾಳಂ ವೆಬ್​ ಸೀರಿಸ್​ನಿಂದ ಕದಿಯಲಾಗಿದೆ ಎಂದು ಕೆಲವರು ಟೀಕೆ ಮಾಡಿದ್ದರು. ಇದಕ್ಕೆ ಅಜನೀಶ್ ಅವರು ಉತ್ತರ ನೀಡಿದ್ದಾರೆ.

‘ಕಂಪೋಸಿಷನ್ ವಿಚಾರದಲ್ಲಿ ವರಾಹ ರೂಪಂ ಹಾಡು ಬೇರೆ, ಜನರು ಹೇಳುತ್ತಿರುವ ಹಾಡು​ ಬೇರೆ. ಮೂಲ ಹಾಡಿನಲ್ಲಿರುವ ರಾಕ್​ ಶೈಲಿ ನಮಗೆ ಸ್ಫೂರ್ತಿ ಮಾಡಿತು ಅಷ್ಟೇ. ನನ್ನ ಕಂಪೋಸಿಷನ್ ಬೇರೆಯದೇ ರೀತಿಯಲ್ಲಿದೆ. ನಮ್ಮ ಹಾಡಿನ ರಾಗಗಳು ಬೇರೆ. ತೋಡಿ, ವರಾಳಿ, ಮುಖಾರಿ ರಾಗ ಆಯ್ಕೆ ಮಾಡಿಕೊಂಡಿದ್ದೇನೆ. ಇದನ್ನು ಹಾಡಿದಾಗ ಒಂದೇ ರೀತಿ ಕೇಳುತ್ತದೆ. ಸಂಗೀತ ಬಲ್ಲವರಿಗೆ ಇದನ್ನು ಕೇಳಿದರೆ ಆ ಹಾಡೇ ಬೇರೆ ಈ ಹಾಡೇ ಬೇರೆ ಎಂದು ಹೇಳುತ್ತಾರೆ’ ಎಂಬುದಾಗಿ ಅವರು ಟಿವಿ9 ಕನ್ನಡಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ತೆಲುಗು ಸ್ಟಾರ್ ನಟನ ಸಿನಿಮಾಗೆ ಅಜನೀಶ್ ಸಂಗೀತ ಸಂಯೋಜನೆ 

ಅಜನೀಶ್ ಅವರಿಗೆ ಟಾಲಿವುಡ್​ನಿಂದಲೂ ಆಫರ್ ಬರುತ್ತಿದೆ. ಸಾಯಿ ಧರಮ್ ತೇಜ್ ಅವರ 15ನೇ ಚಿತ್ರಕ್ಕೆ ಅಜನೀಶ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ವಿಚಾರವನ್ನು ತಂಡ ಖುಷಿಯಿಂದ  ಇಂದು (ಅಕ್ಟೋಬರ್ 12 ) ಅನೌನ್ಸ್ ಮಾಡಿದೆ. ಅಜನೀಶ್ ಲೋಕನಾಥ್ ಅವರು 2009ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಮೊದಲು ಸಂಗೀತ ಸಂಯೋಜನೆ ಮಾಡಿದ ಸಿನಿಮಾ ‘ಶಿಶಿರ’. ಆ ಬಳಿಕ ಹಲವು ಆಫರ್​ಗಳು ಅವರನ್ನು ಅರಸಿ ಬಂದವು. 2014ರಲ್ಲಿ ರಿಲೀಸ್ ಆದ ‘ಉಳಿದವರು ಕಂಡಂತೆ’ ಚಿತ್ರಕ್ಕೆ ಅಜನೀಶ್ ಅವರೇ ಸಂಗೀತ ಸಂಯೋಜನೆ ಮಾಡಿದ್ದರು. 2015ರ ಸೂಪರ್ ಹಿಟ್ ಚಿತ್ರ ‘ರಂಗಿ ತರಂಗ’ ಚಿತ್ರಕ್ಕೆ ಅಜನೀಶ್ ಅವರು ಹಿನ್ನೆಲೆ ಸಂಗೀತ ನೀಡಿದ್ದರು. ‘ಕಿರಿಕ್ ಪಾರ್ಟಿ’, ‘ಬೆಲ್ ಬಾಟಂ’ ಸೇರಿ ಅನೇಕ ಚಿತ್ರಗಳು ಅಜನೀಶ್ ಅವರ ಬತ್ತಳಿಕೆಯಿಂದ ಮೂಡಿ ಬಂದಿದೆ.

2022 ಅಜನೀಶ್ ಪಾಲಿಗೆ ತುಂಬಾನೇ ವಿಶೇಷವಾಗಿದೆ. ‘ವಿಕ್ರಾಂತ್ ರೋಣ’, ‘ಕಾಂತಾರ’ ಚಿತ್ರಗಳು ಹಿಟ್ ಆಗಿವೆ. ಇವೆರಡೂ ಚಿತ್ರಕ್ಕೆ ಅಜನೀಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಷ್ಟೇ ಅಲ್ಲ ಅವರ ಕೈಯಲ್ಲಿ, ಉಪೇಂದ್ರ ನಟನೆಯ ‘ಯುಐ’ ಸೇರಿ 10ಕ್ಕೂ ಅಧಿಕ ಸಿನಿಮಾಗಳು ಇವೆ.

Published On - 5:45 pm, Wed, 12 October 22

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?