AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರ್ಯಾಮಿ ನಾಮಿನೇಷನ್​ನಲ್ಲಿ ‘ಮಗಳು ಜಾನಕಿ’ ಟೈಟಲ್ ಸಾಂಗ್ ಗಾಯಕಿ ವಾರಿಜಾಶ್ರೀ ವೇಣುಗೋಪಲ್​ ಹೆಸರು

ಬೆಂಗಳೂರಿನ ವಾರಿಜಾಶ್ರೀ ವೇಣುಗೋಪಾಲ್ ಅವರು 'ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಪರ್ಫಾರ್ಮೆನ್ಸ್' ವಿಭಾಗದಲ್ಲಿ ಗ್ರಾಮಿ 2025 ನಾಮನಿರ್ದೇಶನ ಪಡೆದಿದ್ದಾರೆ. ಅವರ 'ಎ ರಾಕ್ ಸಮ್‌ವೇರ್' ಹಾಡು ನಾಮನಿರ್ದೇಶನಗೊಂಡಿದೆ. ಅವರು ಕನ್ನಡದಲ್ಲಿ ಹಲವು ಹಾಡುಗಳನ್ನು ಹಾಡಿದ್ದಾರೆ. ಗ್ರ್ಯಾಮಿ ನಾಮನಿರ್ದೇಶನವು ಅವರ ಸಂಗೀತ ವೃತ್ತಿಜೀವನದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಗ್ರ್ಯಾಮಿ ನಾಮಿನೇಷನ್​ನಲ್ಲಿ ‘ಮಗಳು ಜಾನಕಿ’ ಟೈಟಲ್ ಸಾಂಗ್ ಗಾಯಕಿ ವಾರಿಜಾಶ್ರೀ ವೇಣುಗೋಪಲ್​ ಹೆಸರು
ವಾರಿಜಾಶ್ರೀ
ರಾಜೇಶ್ ದುಗ್ಗುಮನೆ
|

Updated on:Nov 23, 2024 | 1:22 PM

Share

‘ಮಗಳು ಜಾನಕಿ’ ಧಾರಾವಾಹಿಯನ್ನು ಟಿಎನ್​ ಸೀತಾರಾಮ ನಿರ್ದೇಶನ ಮಾಡಿದ್ದರು. ಈ ಧಾರಾವಾಹಿಯ ಟೈಟಲ್ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಇದನ್ನು ಹಾಡಿದ್ದು ವಾರಿಜಾಶ್ರೀ ವೇಣುಗೋಪಾಲ್ ಅವರು. ಕನ್ನಡದಲ್ಲಿ ಅವರು ಹಲವು ಹಾಡುಗಳನ್ನು ಹಾಡಿದ್ದಾರೆ. ಅವರು ‘ಹಾಡು ಕರ್ನಾಟಕ’ ಶೋಗೆ ಜಡ್ಜ್​ ಕೂಡ ಆಗಿದ್ದರು. ಬೆಂಗಳೂರಿನ ಮೂದವರಾದ ಅವರು, ಈ ಬಾರಿಯ ಗ್ರ್ಯಾಮಿ ಅವಾರ್ಡ್​ಗೆ ನಾಮಿನೇಟ್ ಆಗಿದ್ದಾರೆ. ಇದು ಅವರ ಸಂತಸ ಹೆಚ್ಚಿಸಿದೆ.

‘ಗ್ರ್ಯಾಮಿ 2025’ ನಾಮಿನೇಷನ್ ಇತ್ತೀಚೆಗೆ ಅನೌನ್ಸ್ ಆಗಿದೆ. ಇದು 67ನೇ ಸಾಲಿನ ಅವಾರ್ಡ್ಸ್ ಕಾರ್ಯಕ್ರಮ ಆಗಿದೆ. ಈ ಸಾಲಿನಲ್ಲಿ ರಿಕ್ಕಿ ಕೇಜ್, ಅಶೋಕ್ ಶಂಕರ್ ಸೇರಿ ಐದು ಮಂದಿ ಭಾರತೀಯರು ಇದ್ದಾರೆ. ಈ ಸಾಲಿನಲ್ಲಿ ಬೆಂಗಳೂರಿನ ವಾರಿಜಾಶ್ರೀ ವೇಣುಗೋಪಾಲ್ ಕೂಡ ಇದ್ದಾರೆ ಅನ್ನೋದು ವಿಶೇಷ. ಅವರು ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ.

ವಾಣಿಶ್ರೀ ಅವರು ಸಂಗೀತ ಹಿನ್ನೆಲೆ ಹೊಂದಿರುವವರು. ಅವರ ತಂದೆ ಎಚ್​ಎಸ್ ವೇಣುಗೋಪಾಲ್ ಹಾಗೂ ತಾಯಿ ಟಿವಿ ರಮಾ ಸಂಗೀತ ಲೋಕದಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ವಾಣಿಶ್ರೀ ಅವರಿಗೆ ಸಂಗೀತದ ಬಗ್ಗೆ ಚಿಕ್ಕ ವಯಸ್ಸಿನಿಂದಲೇ ಆಸಕ್ತಿ ಬಂತು. ಅವರು ಮೊದಲ ಬಾರಿಗೆ ಗ್ರ್ಯಾಮಿಗೆ ನಾಮಿನೇಟ್ ಆದ ಖುಷಿಯಲ್ಲಿ ಇದ್ದಾರೆ.

‘ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಪರ್ಫಾರ್ಮೆನ್ಸ್’ ವಿಭಾಗದಲ್ಲಿ ಅವರ ‘ಎ ರಾಕ್ ಸಮ್​ವೇರ್’ ಹಾಡು ನಾಮಿನೇಟ್ ಆಗಿದೆ.  ಇದು ಅವರ ಖುಷಿ ಹೆಚ್ಚಿಸಿದೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯ ಬರುತ್ತಿವೆ. ‘ಹರಿವ ಝರಿ..’, ರೀತಿಯ ಹಾಡುಗಳನ್ನು ಅವರು ಹಾಡಿದ್ದಾರೆ. ಈ ಹಾಡುಗಳು ಸಾಕಷ್ಟು ಸುಮಧುರವಾಗಿ ಮೂಡಿ ಬಂದಿತ್ತು. ಇದನ್ನೂ ಓದಿ: ಎಷ್ಟು ಮಧುರವಾಗಿದೆ ನೋಡಿ ನಿಶಾ ರವಿಕೃಷ್ಣನ್ ಧ್ವನಿ

ಬೆಂಗಳೂರು ಮೂಲದ Chakrafonics ಹೆಸರಿನ ಬ್ಯಾಂಡ್​ನ ಭಾಗವಾಗಿ ವಾಣಿಶ್ರೀ ಇದ್ದಾರೆ. ಪ್ರವೀಣ್ ರಾವ್, ಅಜಯ್ ವಾರಿಯರ್, ಪ್ರಮಥ್ ಕಿರಣ್ ಈ ಬ್ಯಾಂಡ್​ನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:16 pm, Sat, 23 November 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್