AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರ್ಯಾಮಿ ನಾಮಿನೇಷನ್​ನಲ್ಲಿ ‘ಮಗಳು ಜಾನಕಿ’ ಟೈಟಲ್ ಸಾಂಗ್ ಗಾಯಕಿ ವಾರಿಜಾಶ್ರೀ ವೇಣುಗೋಪಲ್​ ಹೆಸರು

ಬೆಂಗಳೂರಿನ ವಾರಿಜಾಶ್ರೀ ವೇಣುಗೋಪಾಲ್ ಅವರು 'ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಪರ್ಫಾರ್ಮೆನ್ಸ್' ವಿಭಾಗದಲ್ಲಿ ಗ್ರಾಮಿ 2025 ನಾಮನಿರ್ದೇಶನ ಪಡೆದಿದ್ದಾರೆ. ಅವರ 'ಎ ರಾಕ್ ಸಮ್‌ವೇರ್' ಹಾಡು ನಾಮನಿರ್ದೇಶನಗೊಂಡಿದೆ. ಅವರು ಕನ್ನಡದಲ್ಲಿ ಹಲವು ಹಾಡುಗಳನ್ನು ಹಾಡಿದ್ದಾರೆ. ಗ್ರ್ಯಾಮಿ ನಾಮನಿರ್ದೇಶನವು ಅವರ ಸಂಗೀತ ವೃತ್ತಿಜೀವನದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಗ್ರ್ಯಾಮಿ ನಾಮಿನೇಷನ್​ನಲ್ಲಿ ‘ಮಗಳು ಜಾನಕಿ’ ಟೈಟಲ್ ಸಾಂಗ್ ಗಾಯಕಿ ವಾರಿಜಾಶ್ರೀ ವೇಣುಗೋಪಲ್​ ಹೆಸರು
ವಾರಿಜಾಶ್ರೀ
ರಾಜೇಶ್ ದುಗ್ಗುಮನೆ
|

Updated on:Nov 23, 2024 | 1:22 PM

Share

‘ಮಗಳು ಜಾನಕಿ’ ಧಾರಾವಾಹಿಯನ್ನು ಟಿಎನ್​ ಸೀತಾರಾಮ ನಿರ್ದೇಶನ ಮಾಡಿದ್ದರು. ಈ ಧಾರಾವಾಹಿಯ ಟೈಟಲ್ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಇದನ್ನು ಹಾಡಿದ್ದು ವಾರಿಜಾಶ್ರೀ ವೇಣುಗೋಪಾಲ್ ಅವರು. ಕನ್ನಡದಲ್ಲಿ ಅವರು ಹಲವು ಹಾಡುಗಳನ್ನು ಹಾಡಿದ್ದಾರೆ. ಅವರು ‘ಹಾಡು ಕರ್ನಾಟಕ’ ಶೋಗೆ ಜಡ್ಜ್​ ಕೂಡ ಆಗಿದ್ದರು. ಬೆಂಗಳೂರಿನ ಮೂದವರಾದ ಅವರು, ಈ ಬಾರಿಯ ಗ್ರ್ಯಾಮಿ ಅವಾರ್ಡ್​ಗೆ ನಾಮಿನೇಟ್ ಆಗಿದ್ದಾರೆ. ಇದು ಅವರ ಸಂತಸ ಹೆಚ್ಚಿಸಿದೆ.

‘ಗ್ರ್ಯಾಮಿ 2025’ ನಾಮಿನೇಷನ್ ಇತ್ತೀಚೆಗೆ ಅನೌನ್ಸ್ ಆಗಿದೆ. ಇದು 67ನೇ ಸಾಲಿನ ಅವಾರ್ಡ್ಸ್ ಕಾರ್ಯಕ್ರಮ ಆಗಿದೆ. ಈ ಸಾಲಿನಲ್ಲಿ ರಿಕ್ಕಿ ಕೇಜ್, ಅಶೋಕ್ ಶಂಕರ್ ಸೇರಿ ಐದು ಮಂದಿ ಭಾರತೀಯರು ಇದ್ದಾರೆ. ಈ ಸಾಲಿನಲ್ಲಿ ಬೆಂಗಳೂರಿನ ವಾರಿಜಾಶ್ರೀ ವೇಣುಗೋಪಾಲ್ ಕೂಡ ಇದ್ದಾರೆ ಅನ್ನೋದು ವಿಶೇಷ. ಅವರು ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ.

ವಾಣಿಶ್ರೀ ಅವರು ಸಂಗೀತ ಹಿನ್ನೆಲೆ ಹೊಂದಿರುವವರು. ಅವರ ತಂದೆ ಎಚ್​ಎಸ್ ವೇಣುಗೋಪಾಲ್ ಹಾಗೂ ತಾಯಿ ಟಿವಿ ರಮಾ ಸಂಗೀತ ಲೋಕದಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ವಾಣಿಶ್ರೀ ಅವರಿಗೆ ಸಂಗೀತದ ಬಗ್ಗೆ ಚಿಕ್ಕ ವಯಸ್ಸಿನಿಂದಲೇ ಆಸಕ್ತಿ ಬಂತು. ಅವರು ಮೊದಲ ಬಾರಿಗೆ ಗ್ರ್ಯಾಮಿಗೆ ನಾಮಿನೇಟ್ ಆದ ಖುಷಿಯಲ್ಲಿ ಇದ್ದಾರೆ.

‘ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಪರ್ಫಾರ್ಮೆನ್ಸ್’ ವಿಭಾಗದಲ್ಲಿ ಅವರ ‘ಎ ರಾಕ್ ಸಮ್​ವೇರ್’ ಹಾಡು ನಾಮಿನೇಟ್ ಆಗಿದೆ.  ಇದು ಅವರ ಖುಷಿ ಹೆಚ್ಚಿಸಿದೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯ ಬರುತ್ತಿವೆ. ‘ಹರಿವ ಝರಿ..’, ರೀತಿಯ ಹಾಡುಗಳನ್ನು ಅವರು ಹಾಡಿದ್ದಾರೆ. ಈ ಹಾಡುಗಳು ಸಾಕಷ್ಟು ಸುಮಧುರವಾಗಿ ಮೂಡಿ ಬಂದಿತ್ತು. ಇದನ್ನೂ ಓದಿ: ಎಷ್ಟು ಮಧುರವಾಗಿದೆ ನೋಡಿ ನಿಶಾ ರವಿಕೃಷ್ಣನ್ ಧ್ವನಿ

ಬೆಂಗಳೂರು ಮೂಲದ Chakrafonics ಹೆಸರಿನ ಬ್ಯಾಂಡ್​ನ ಭಾಗವಾಗಿ ವಾಣಿಶ್ರೀ ಇದ್ದಾರೆ. ಪ್ರವೀಣ್ ರಾವ್, ಅಜಯ್ ವಾರಿಯರ್, ಪ್ರಮಥ್ ಕಿರಣ್ ಈ ಬ್ಯಾಂಡ್​ನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:16 pm, Sat, 23 November 24

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?