AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿತ್ತೋದ್ ನನ್ ..’ ಜಗ್ಗೇಶ್ ಮಾತಿಗೆ ಪ್ರತಿಕ್ರಿಯಿಸಿದ ವರ್ತೂರು ಸಂತೋಷ್ ಹೇಳಿದ್ದೇನು?

Varthur Santhosh: ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡುತ್ತಾ ನಟ ಜಗ್ಗೇಶ್, ವರ್ತೂರು ಸಂತೋಷ್ ಅವರನ್ನು ನಿಂದಿಸಿದ್ದರು. ಇದೀಗ ಜಗ್ಗೇಶ್ ಹೇಳಿಕೆ ಬಗ್ಗೆ ವರ್ತೂರು ಸಂತೋಷ್ ಮಾತನಾಡಿದ್ದಾರೆ.

‘ಕಿತ್ತೋದ್ ನನ್ ..’ ಜಗ್ಗೇಶ್ ಮಾತಿಗೆ ಪ್ರತಿಕ್ರಿಯಿಸಿದ ವರ್ತೂರು ಸಂತೋಷ್ ಹೇಳಿದ್ದೇನು?
ಮಂಜುನಾಥ ಸಿ.
|

Updated on: Feb 18, 2024 | 11:23 AM

Share

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ಕ್ಕೆ ಹೋಗಿ ಬಂದ ಬಳಿಕ ವರ್ತೂರು ಸಂತೋಷ್ ಸೆಲೆಬ್ರಿಟಿ ಆಗಿಬಿಟ್ಟಿದ್ದಾರೆ. ಸಿನಿಮಾ ತಾರೆಯರು ಸಹ ಹೊಟ್ಟೆಕಿಚ್ಚು ಪಟ್ಟುಕೊಳ್ಳುವಷ್ಟರ ಮಟ್ಟಿಗೆ ಅವರ ಜನಪ್ರಿಯತೆ ಏರಿದೆ. ಹೋದಲ್ಲೆಲ್ಲ ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಾರೆ. ಜನಪ್ರಿಯತೆ ನಡುವೆ ವರ್ತೂರು ಸಂತೋಷ್​ ಅವರನ್ನು ಟೀಕೆ ಮಾಡುವವರು, ನಿಂದಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಇತ್ತೀಚೆಗಷ್ಟೆ ನಟ ಜಗ್ಗೇಶ್, ಸಿನಿಮಾ ಕಾರ್ಯಕ್ರಮವೊಂದರಲ್ಲಿ ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡುತ್ತಾ ವರ್ತೂರು ಸಂತೋಷ್ ಅವರನ್ನು ಹೆಸರು ಹೇಳದೆ ನಿಂದಿಸಿದ್ದರು. ಈ ಬಗ್ಗೆ ಇದೀಗ ವರ್ತೂರು ಸಂತೋಷ್ ಉತ್ತರ ನೀಡಿದ್ದಾರೆ.

‘ರಂಗನಾಯಕ’ ಸಿನಿಮಾದ ಕಾರ್ಯಕ್ರಮದಲ್ಲಿ ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡಿದ್ದ ನಟ ಜಗ್ಗೇಶ್, ‘ನಾನು ಹುಲಿ ಥರಹ ಬದುಕಬೇಕು ಅಂತ ನಮ್ಮಮ್ಮ ಹುಲಿ ಉಗುರಿನ ಪೆಂಡೆಂಟ್ ಕೊಟ್ಟರು, ಆದರೆ ಯಾವನೋ ಕಿತ್ತೋದ್ ನನ್ ಮಗ ನಿಜವಾದ ಹುಲಿ ಉಗುರು ಹಾಕ್ಕೊಂಡು ಟಿವಿಗೆ ಹೋಗಿ ಅಲ್ಲಿ ತಗಲಾಕ್ಕೊಂಡ’ ಎಂದಿದ್ದರು. ಜಗ್ಗೇಶ್ ಸಹ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದು ಅವರ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿ ಹುಲಿ ಉಗುರು ವಶಪಡಿಸಿಕೊಂಡಿದ್ದರು. ಇದರ ಬಗ್ಗೆ ತೀವ್ರ ಅಸಮಾಧಾನವನ್ನು ಜಗ್ಗೇಶ್ ಪ್ರದರ್ಶಿಸಿದ್ದರು.

ಇದನ್ನೂ ಓದಿ:‘ಆ ಚೈಲ್ಡ್ ಚಪಾತಿಗೆ ಈ ವಿಡಿಯೋ’; ವರ್ತೂರು ಸಂತೋಷ್ ಖಡಕ್ ಉತ್ತರ ನೀಡಿದ್ಯಾರಿಗೆ?

ಜಗ್ಗೇಶ್ ಅವರು ವರ್ತೂರು ಸಂತೋಷ್​ಗೆ ‘ಕಿತ್ತೋದ್ ನನ್ನ ಮಗ’ ಎಂಬ ಪದ ಬಳಸಬಾರದಿತ್ತು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದರು. ಜಗ್ಗೇಶ್​ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ವರ್ತೂರು ಸಂತೋಷ್, ‘ಬಿಡಿ ಅವರು ದೊಡ್ಡವರು. ನಾನು ಹೇಳಲಿಚ್ಛಿಸುವುದು ಇಷ್ಟೆ, ‘ಕಾಲೈ ತಸ್ಮೈ ನಮಃ’ ಅಷ್ಟೆ. ಎಲ್ಲಾದಕ್ಕೂ ಉತ್ತರ ಕೊಡಲೇ ಬೇಕು ಅಂತೇನೂ ಇಲ್ಲ. ಕೆಲವೊಂದಕ್ಕೆ ಉತ್ತರ ಕೊಡಬೇಕು. ಕೆಲವೊಂದಕ್ಕೆ ಮೌನವಾಗಿದ್ದರೆ ಸಾಕು ಉತ್ತರ ಸಿಗುತ್ತದೆ’ ಎಂದಿದ್ದಾರೆ.

ಮುಂದುವರೆದು, ‘ಸುದೀಪಣ್ಣನ ಬಳಿ ನಾನು ಕೆಲವೊಂದು ವಿಚಾರಗಳನ್ನು ಕಲಿತಿದ್ದೀನಿ. ಸುದೀಪಣ್ಣ ಒಂದು ಹೇಳ್ತಾರೆ. ವರ್ತೂರು ಅವ್ರೇ ಎಲ್ಲಾ ಜಾಗದಲ್ಲೂ ಮಾತನಾಡಬೇಕು ಅಂತಿಲ್ಲ. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಅಂತ. ಅಷ್ಟೇ ಸಾಕು. ಕೆಲವು ಜಾಗಗಳಲ್ಲಿ ಮಾತನಾಡಲೇಬೇಕು ಸಂದರ್ಭ ಆ ತರ ಇರುತ್ತದೆ. ತೂಕದ ಜೊತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕು’ ಎಂದಿದ್ದಾರೆ ವರ್ತೂರು ಸಂತೋಷ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ