AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasanthi Nalidaga: ಮತ್ತೊಂದು ವಾರಕ್ಕೆ ಕಾಲಿಟ್ಟ ಯೂಥ್​ಫುಲ್​ ಚಿತ್ರ ‘ವಾಸಂತಿ ನಲಿದಾಗ’

New Kannada Movie: ‘ವಾಸಂತಿ ನಲಿದಾಗ’ ಸಿನಿಮಾಗೆ ಹೊಸ ನಟ ರೋಹಿತ್​ ಶ್ರೀಧರ್​ ಹೀರೋ. ಅವರ ಜೊತೆ ಸಾಧು ಕೋಕಿಲ, ಸುಧಾರಾಣಿ, ಸಾಯಿ ಕುಮಾರ್​ ಅವರಂತಹ ಅನುಭವಿ ಕಲಾವಿದರು ನಟಿಸಿದ್ದಾರೆ.

Vasanthi Nalidaga: ಮತ್ತೊಂದು ವಾರಕ್ಕೆ ಕಾಲಿಟ್ಟ ಯೂಥ್​ಫುಲ್​ ಚಿತ್ರ ‘ವಾಸಂತಿ ನಲಿದಾಗ’
‘ವಾಸಂತಿ ನಲಿದಾಗ’ ಸಿನಿಮಾ
TV9 Web
| Edited By: |

Updated on:Dec 11, 2022 | 4:09 PM

Share

ವರ್ಷದ ಈ ಕೊನೇ ತಿಂಗಳಿನಲ್ಲಿ ಹತ್ತು ಹಲವು ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ತೆರೆಕಾಣುತ್ತಿವೆ. ಕಳೆದ ವಾರ ಕನ್ನಡದಲ್ಲೇ 10ಕ್ಕೂ ಹೆಚ್ಚು ಸಿನಿಮಾಗಳು (Kannada Movies) ರಿಲೀಸ್​ ಆದವು. ಅದರ ಜೊತೆ ಪರಭಾಷೆ ಚಿತ್ರಗಳ ಪೈಪೋಟಿಯೂ ಜೋರಾಗಿದೆ. ಈ ಸಂದರ್ಭದಲ್ಲಿ ಹೊಸ ಕಲಾವಿದರ ಸಿನಿಮಾ ಒಂದು ವಾರ ಪೂರೈಸಿ ಮುನ್ನುಗ್ಗುವುದು ತಮಾಷೆಯೇ ಅಲ್ಲ. ಡಿಸೆಂಬರ್​ 2ರಂದು ತೆರೆಕಂಡ ‘ವಾಸಂತಿ ನಲಿದಾಗ’ (Vasanthi Nalidag) ಚಿತ್ರ ಎರಡನೇ ವೀಕೆಂಡ್​ನಲ್ಲೂ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಮೂರನೇ ವಾರದಲ್ಲಿ ಇನ್ನಷ್ಟು ಸಂಖ್ಯೆಯ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಹೊಂದಿದೆ ಈ ಚಿತ್ರತಂಡ. ಈ ಸಿನಿಮಾದಲ್ಲಿನ ಒಂದಷ್ಟು ಅಂಶಗಳು ಪ್ರೇಕ್ಷಕರಿಗೆ ಇಷ್ಟ ಆಗುತ್ತಿವೆ.

ಚಿತ್ರರಂಗವೆಂದರೆ ಕೇವಲ ಬಿಗ್​ ಬಜೆಟ್​ ಸಿನಿಮಾಗಳ ಪ್ರಾಬಲ್ಯ ಮಾತ್ರವಲ್ಲ. ಹೊಸಬರ ಪ್ರಯತ್ನಗಳಿಗೂ ಇಲ್ಲಿ ಜಾಗವಿದೆ. ಕಂಟೆಂಟ್​ ಇಷ್ಟವಾದರೆ ಜನರು ಇಂಥ ಸಿನಿಮಾಗಳಿಗೆ ಖಂಡಿತಾ ಬೆಂಬಲ ನೀಡುತ್ತಾರೆ. ಏನಾದರೂ ಒಂದಷ್ಟು ಹೊಸತನ ಇದ್ದರೆ ಪ್ಲಸ್​ ಪಾಯಿಂಟ್​. ಪಕ್ಕಾ ಕಾಲೇಜು ಕಹಾನಿಯನ್ನು ಇಟ್ಟುಕೊಂಡು ಈ ಸಿನಿಮಾ ಮೂಡಿಬಂದಿದೆ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಮೊದಲ ಕ್ರಶ್​, ಮೊದಲ ಪ್ರೀತಿ, ಎಕ್ಸಾಂ ಟೆನ್ಷನ್​, ತರಲೆ-ತಮಾಷೆ ಸೇರಿದಂತೆ ಹತ್ತಾರು ವಿಚಾರಗಳು ಈ ಸಿನಿಮಾದಲ್ಲಿ ಮನರಂಜನೆ ನೀಡುತ್ತಿವೆ.

ಇದನ್ನೂ ಓದಿ: New Movies: ‘ಬಾಂಡ್​ ರವಿ’, ‘ವಿಜಯಾನಂದ’ ಜತೆ ರಿಲೀಸ್​ ಆಗ್ತಿವೆ ಸಿಕ್ಕಾಪಟ್ಟೆ ಸಿನಿಮಾ; ಈ ವಾರ 18ಕ್ಕೂ ಹೆಚ್ಚು ಚಿತ್ರ

ಬಣ್ಣದ ಲೋಕಕ್ಕೆ ಕಾಲಿಡುವ ಹೊಸಬರಿಗೆ ಹಳೆಯ ಕಲಾವಿದರು ಸಾಥ್​ ನೀಡಿದರೆ ಕಲಿಯಲು ಸಾಕಷ್ಟು ವಿಷಯ ಸಿಗುತ್ತದೆ. ‘ವಾಸಂತಿ ನಲಿದಾಗ’ ಸಿನಿಮಾದಲ್ಲಿ ಹೊಸ ನಟ ರೋಹಿತ್​ ಶ್ರೀಧರ್​ ಹೀರೋ ಆಗಿ ನಟಿಸಿದ್ದಾರೆ. ಅವರ ಜೊತೆ ಸಾಧು ಕೋಕಿಲ, ಸುಧಾರಾಣಿ, ಸಾಯಿ ಕುಮಾರ್​ ಅವರಂತಹ ಅನುಭವಿ ಕಲಾವಿದರು ಇದ್ದಾರೆ. ‘ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು’ ಎಂಬ ಕವಿವಾಣಿ ರೀತಿಯೇ ಈ ಸಿನಿಮಾದಲ್ಲಿ ಹಿರಿ-ಕಿರಿಯ ಕಲಾವಿದರ ಸಮಾಗಮ ಆಗಿದೆ.

ಇದನ್ನೂ ಓದಿ: Pankaj Tripathi: ಸೌತ್​ ಸಿನಿಮಾ ಒಪ್ಪಿಕೊಳ್ಳದೇ ಇರಲು ಬಹಿರಂಗ ವೇದಿಕೆಯಲ್ಲಿ ಕಾರಣ ತಿಳಿಸಿದ ಪಂಕಜ್​ ತ್ರಿಪಾಠಿ

ರೋಹಿತ್​ ಶ್ರೀಧರ್​, ಸಾಧು ಕೋಕಿಲ, ಭಾವನಾ ಶ್ರೀನಿವಾಸ್​, ಜೀವಿತಾ ವಸಿಷ್ಠ, ರಾಘು ರಾಮನಕೊಪ್ಪ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಜೇನುಗೂಡು ಕೆ.ಎನ್​. ಶ್ರೀಧರ್​ ಬಂಡವಾಳ ಹೂಡಿದ್ದಾರೆ. ರವೀಂದ್ರ ವಂಶಿ ನಿರ್ದೇಶನ, ಶ್ರೀಗುರು ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:09 pm, Sun, 11 December 22

Follow Us
Web contact
Web contact

TV9 Kannada

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!