AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasanthi Nalidaga: ಮತ್ತೊಂದು ವಾರಕ್ಕೆ ಕಾಲಿಟ್ಟ ಯೂಥ್​ಫುಲ್​ ಚಿತ್ರ ‘ವಾಸಂತಿ ನಲಿದಾಗ’

New Kannada Movie: ‘ವಾಸಂತಿ ನಲಿದಾಗ’ ಸಿನಿಮಾಗೆ ಹೊಸ ನಟ ರೋಹಿತ್​ ಶ್ರೀಧರ್​ ಹೀರೋ. ಅವರ ಜೊತೆ ಸಾಧು ಕೋಕಿಲ, ಸುಧಾರಾಣಿ, ಸಾಯಿ ಕುಮಾರ್​ ಅವರಂತಹ ಅನುಭವಿ ಕಲಾವಿದರು ನಟಿಸಿದ್ದಾರೆ.

Vasanthi Nalidaga: ಮತ್ತೊಂದು ವಾರಕ್ಕೆ ಕಾಲಿಟ್ಟ ಯೂಥ್​ಫುಲ್​ ಚಿತ್ರ ‘ವಾಸಂತಿ ನಲಿದಾಗ’
‘ವಾಸಂತಿ ನಲಿದಾಗ’ ಸಿನಿಮಾ
TV9 Web
| Edited By: |

Updated on:Dec 11, 2022 | 4:09 PM

Share

ವರ್ಷದ ಈ ಕೊನೇ ತಿಂಗಳಿನಲ್ಲಿ ಹತ್ತು ಹಲವು ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ತೆರೆಕಾಣುತ್ತಿವೆ. ಕಳೆದ ವಾರ ಕನ್ನಡದಲ್ಲೇ 10ಕ್ಕೂ ಹೆಚ್ಚು ಸಿನಿಮಾಗಳು (Kannada Movies) ರಿಲೀಸ್​ ಆದವು. ಅದರ ಜೊತೆ ಪರಭಾಷೆ ಚಿತ್ರಗಳ ಪೈಪೋಟಿಯೂ ಜೋರಾಗಿದೆ. ಈ ಸಂದರ್ಭದಲ್ಲಿ ಹೊಸ ಕಲಾವಿದರ ಸಿನಿಮಾ ಒಂದು ವಾರ ಪೂರೈಸಿ ಮುನ್ನುಗ್ಗುವುದು ತಮಾಷೆಯೇ ಅಲ್ಲ. ಡಿಸೆಂಬರ್​ 2ರಂದು ತೆರೆಕಂಡ ‘ವಾಸಂತಿ ನಲಿದಾಗ’ (Vasanthi Nalidag) ಚಿತ್ರ ಎರಡನೇ ವೀಕೆಂಡ್​ನಲ್ಲೂ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಮೂರನೇ ವಾರದಲ್ಲಿ ಇನ್ನಷ್ಟು ಸಂಖ್ಯೆಯ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಹೊಂದಿದೆ ಈ ಚಿತ್ರತಂಡ. ಈ ಸಿನಿಮಾದಲ್ಲಿನ ಒಂದಷ್ಟು ಅಂಶಗಳು ಪ್ರೇಕ್ಷಕರಿಗೆ ಇಷ್ಟ ಆಗುತ್ತಿವೆ.

ಚಿತ್ರರಂಗವೆಂದರೆ ಕೇವಲ ಬಿಗ್​ ಬಜೆಟ್​ ಸಿನಿಮಾಗಳ ಪ್ರಾಬಲ್ಯ ಮಾತ್ರವಲ್ಲ. ಹೊಸಬರ ಪ್ರಯತ್ನಗಳಿಗೂ ಇಲ್ಲಿ ಜಾಗವಿದೆ. ಕಂಟೆಂಟ್​ ಇಷ್ಟವಾದರೆ ಜನರು ಇಂಥ ಸಿನಿಮಾಗಳಿಗೆ ಖಂಡಿತಾ ಬೆಂಬಲ ನೀಡುತ್ತಾರೆ. ಏನಾದರೂ ಒಂದಷ್ಟು ಹೊಸತನ ಇದ್ದರೆ ಪ್ಲಸ್​ ಪಾಯಿಂಟ್​. ಪಕ್ಕಾ ಕಾಲೇಜು ಕಹಾನಿಯನ್ನು ಇಟ್ಟುಕೊಂಡು ಈ ಸಿನಿಮಾ ಮೂಡಿಬಂದಿದೆ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಮೊದಲ ಕ್ರಶ್​, ಮೊದಲ ಪ್ರೀತಿ, ಎಕ್ಸಾಂ ಟೆನ್ಷನ್​, ತರಲೆ-ತಮಾಷೆ ಸೇರಿದಂತೆ ಹತ್ತಾರು ವಿಚಾರಗಳು ಈ ಸಿನಿಮಾದಲ್ಲಿ ಮನರಂಜನೆ ನೀಡುತ್ತಿವೆ.

ಇದನ್ನೂ ಓದಿ: New Movies: ‘ಬಾಂಡ್​ ರವಿ’, ‘ವಿಜಯಾನಂದ’ ಜತೆ ರಿಲೀಸ್​ ಆಗ್ತಿವೆ ಸಿಕ್ಕಾಪಟ್ಟೆ ಸಿನಿಮಾ; ಈ ವಾರ 18ಕ್ಕೂ ಹೆಚ್ಚು ಚಿತ್ರ

ಬಣ್ಣದ ಲೋಕಕ್ಕೆ ಕಾಲಿಡುವ ಹೊಸಬರಿಗೆ ಹಳೆಯ ಕಲಾವಿದರು ಸಾಥ್​ ನೀಡಿದರೆ ಕಲಿಯಲು ಸಾಕಷ್ಟು ವಿಷಯ ಸಿಗುತ್ತದೆ. ‘ವಾಸಂತಿ ನಲಿದಾಗ’ ಸಿನಿಮಾದಲ್ಲಿ ಹೊಸ ನಟ ರೋಹಿತ್​ ಶ್ರೀಧರ್​ ಹೀರೋ ಆಗಿ ನಟಿಸಿದ್ದಾರೆ. ಅವರ ಜೊತೆ ಸಾಧು ಕೋಕಿಲ, ಸುಧಾರಾಣಿ, ಸಾಯಿ ಕುಮಾರ್​ ಅವರಂತಹ ಅನುಭವಿ ಕಲಾವಿದರು ಇದ್ದಾರೆ. ‘ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು’ ಎಂಬ ಕವಿವಾಣಿ ರೀತಿಯೇ ಈ ಸಿನಿಮಾದಲ್ಲಿ ಹಿರಿ-ಕಿರಿಯ ಕಲಾವಿದರ ಸಮಾಗಮ ಆಗಿದೆ.

ಇದನ್ನೂ ಓದಿ: Pankaj Tripathi: ಸೌತ್​ ಸಿನಿಮಾ ಒಪ್ಪಿಕೊಳ್ಳದೇ ಇರಲು ಬಹಿರಂಗ ವೇದಿಕೆಯಲ್ಲಿ ಕಾರಣ ತಿಳಿಸಿದ ಪಂಕಜ್​ ತ್ರಿಪಾಠಿ

ರೋಹಿತ್​ ಶ್ರೀಧರ್​, ಸಾಧು ಕೋಕಿಲ, ಭಾವನಾ ಶ್ರೀನಿವಾಸ್​, ಜೀವಿತಾ ವಸಿಷ್ಠ, ರಾಘು ರಾಮನಕೊಪ್ಪ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಜೇನುಗೂಡು ಕೆ.ಎನ್​. ಶ್ರೀಧರ್​ ಬಂಡವಾಳ ಹೂಡಿದ್ದಾರೆ. ರವೀಂದ್ರ ವಂಶಿ ನಿರ್ದೇಶನ, ಶ್ರೀಗುರು ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:09 pm, Sun, 11 December 22

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!