ವ್ಯಾಕ್ಸಿನ್ ಹಾಕಿಸಿಕೊಳ್ಳುವ ಮೊದಲು ರಕ್ತದಾನ ಮಾಡಿ ಮಾದರಿಯಾದ ನಟ ವಸಿಷ್ಠ ಸಿಂಹ

ಕೊರೊನಾ ಲಸಿಕೆ ಹಾಕಿಸಿಕೊಂಡ ನಂತರ ಕೆಲ ತಿಂಗಳು ರಕ್ತ ದಾನ ಮಾಡಲು ಅವಕಾಶ ಇರುವುದಿಲ್ಲ. ಇದರಿಂದ ಬ್ಲಡ್​ ಬ್ಯಾಂಕ್​ಗಳಲ್ಲಿ ರಕ್ತದ ಅಭಾವ ಎದುರಾಗುವ ಆತಂಕ ಕಾಡಿದೆ.

ವ್ಯಾಕ್ಸಿನ್ ಹಾಕಿಸಿಕೊಳ್ಳುವ ಮೊದಲು ರಕ್ತದಾನ ಮಾಡಿ ಮಾದರಿಯಾದ ನಟ ವಸಿಷ್ಠ ಸಿಂಹ
ರಕ್ತದಾನ ಮಾಡಿದ ವಸಿಷ್ಠ ಸಿಂಹ
Edited By:

Updated on: May 09, 2021 | 8:47 PM

ಕೊರೊನಾ ವೈರಸ್​ ಎರಡನೇ ಅಲೆ ಭಾರತದಲ್ಲಿ ನಿಯಂತ್ರಣ ತಪ್ಪಿದೆ. ಕೊರೊನಾ ಹರಡದಂತೆ ತಡೆಯಲು ಸರ್ಕಾರ ಸಾಕಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದೆ. ಮತ್ತೊಂದು ಕಡೆ ಕೊರೊನಾ ಲಸಿಕೆ ಅಭಿಯಾನ ಆರಂಭಿಸಿದೆ. ನಟ ವಸಿಷ್ಠ ಸಿಂಹ ಕೂಡ ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲು ಅವರು ರಕ್ತದಾನ ಮಾಡಿದ್ದಾರೆ.

ಕೊರೊನ ಲಸಿಕೆ ಹಾಕಿಸಿಕೊಂಡ ನಂತರ ಕೆಲ ತಿಂಗಳು ರಕ್ತ ದಾನ ಮಾಡಲು ಅವಕಾಶ ಇರುವುದಿಲ್ಲ. ಇದರಿಂದ ಬ್ಲಡ್​ ಬ್ಯಾಂಕ್​ಗಳಲ್ಲಿ ರಕ್ತದ ಅಭಾವ ಎದುರಾಗುವ ಆತಂಕ ಕಾಡಿದೆ. ಹೀಗಾಗಿ, ಕೊರೊನಾ ಲಸಿಕೆ ಪಡೆಯುವುದಕ್ಕೂ ಮೊದಲು ರಕ್ತದಾನ ಮಾಡುವಂತೆ ಕೋರಲಾಗುತ್ತಿದೆ. ಇದಕ್ಕೆ ಈಗ ವಸಿಷ್ಠ ಸಿಂಹ ಧ್ವನಿಯಾಗಿದ್ದಾರೆ.

ಬೆಂಗಳೂರಿನ ವಿವಿಧ ಕಡೆಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದೆ. ಇಂದು (ಮೇ 9)  ವಸಿಷ್ಠ ಸಿಂಹ ಮತ್ತು ಕೆಪಿಟಿಸಿಎಲ್ ನೌಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಟಿಆರ್​​ ರಾಮಕೃಷ್ಣಯ್ಯ ರಕ್ತದಾನ ಶಿಬಿರವನ್ನು ಕೆಇಬಿ ಸಮುದಾಯ ಭವನದಲ್ಲಿ ಬೆಳಗ್ಗೆ ಉದ್ಘಾಟನೆ ಮಾಡಿದರು. ನಂತರ ರಕ್ತದಾನ ಮಾಡಿದ್ದಾರೆ. ಈ ಮೂಲಕ ರಕ್ತದಾನ‌ ಮಾಡಿ ಜೀವ ಉಳಿಸಿ ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ದಯವಿಟ್ಟು ಲಸಿಕೆ ಹಾಕಿಸಿಕೊಳ್ಳಿ: ನಟ ವಸಿಷ್ಠ ಸಿಂಹಾ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us