AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಾಹಸಕ್ಕೆ ಮುಂದಾದ ನಟ ವಸಿಸ್ಠ ಸಿಂಹ; ಲಾಂಚ್ ಆಯ್ತು ‘ಸಿಂಹ ಆಡಿಯೋ’

‘ಕಾಲಚಕ್ರ’ ಸಿನಿಮಾ ಬಗ್ಗೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ವಿವಿಧ ಗೆಟಪ್​ನಲ್ಲಿ ವಸಿಷ್ಠ ಸಿಂಹ ಕಾಣಿಸಿಕೊಂಡಿದ್ದಾರೆ.

ಹೊಸ ಸಾಹಸಕ್ಕೆ ಮುಂದಾದ ನಟ ವಸಿಸ್ಠ ಸಿಂಹ; ಲಾಂಚ್ ಆಯ್ತು ‘ಸಿಂಹ ಆಡಿಯೋ’
ವಸಿಷ್ಠ ಸಿಂಹ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 04, 2022 | 4:58 PM

Share

ವಸಿಷ್ಠ ಸಿಂಹ (Vasishta  Simha) ನಟನಾಗಿ ಸ್ಯಾಂಡಲ್​ವುಡ್​ನಲ್ಲಿ (Sandalwood) ಗುರುತಿಸಿಕೊಂಡಿದ್ದಾರೆ. ಯಶ್ ನಟನೆಯ ‘ರಾಜ ಹುಲಿ’ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ ಅವರಿಗೆ ನಂತರ ಹಲವು ಆಫರ್​ಗಳು ಬಂದವು. ನಟನಾಗಿ, ಖಳನಾಗಿ, ರೊಮ್ಯಾಂಟಿಕ್​ ಹೀರೋ ಆಗಿ ಅವರು ಎಲ್ಲರ ಮನ ಗೆದ್ದಿದ್ದಾರೆ. ಈಗ ಅವರು ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ತಮ್ಮದೇ ಆಡಿಯೋ ಲೇಬಲ್ ಲಾಂಚ್ ಮಾಡಿದ್ದಾರೆ. ಈ ವಿಚಾರವನ್ನು ವಸಿಷ್ಠ ಸಿಂಹ ಅವರೇ ಅಧಿಕೃತ ಘೋಷಣೆ ಮಾಡಿದ್ದಾರೆ.

‘ಸಿಂಹ ಆಡಿಯೋ’ (Simmhaa Audio) ಲೇಬಲ್​ಅನ್ನು ವಸಿಸ್ಠ ಸಿಂಹ ಆರಂಭಿಸಿದ್ದಾರೆ. ಅವರ ನಟನೆಯ ‘ಕಾಲಚಕ್ರ’ ಸಿನಿಮಾದ ‘ನೀನೆ ಬೇಕು..’ ಹಾಡು ‘ಸಿಂಹ ಆಡಿಯೋ’ ಮೂಲಕ ಇಂದು (ಏಪ್ರಿಲ್​ 4) ಸಂಜೆ 6 ಗಂಟೆಗೆ ರಿಲೀಸ್ ಆಗಲಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಎಲ್ಲರೂ ವಸಿಷ್ಠ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಜತೆಗೆ ಈ ಆಡಿಯೋ ಲೇಬಲ್​ನಿಂದ ಹೆಚ್ಚೆಚ್ಚು ಸಾಂಗ್​ಗಳು ರಿಲೀಸ್​ ಆಗಲಿ ಎಂದು ಶುಭ ಹಾರೈಸಿದ್ದಾರೆ.

‘ಕಾಲಚಕ್ರ’ ಸಿನಿಮಾ ಬಗ್ಗೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ವಿವಿಧ ಗೆಟಪ್​ನಲ್ಲಿ ವಸಿಷ್ಠ ಸಿಂಹ ಕಾಣಿಸಿಕೊಂಡಿದ್ದಾರೆ. ಸುಮಂತ್​ ಕ್ರಾಂತಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ರಶ್ಮಿ ಕೆ. ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಕ್ಷಾ, ಸುಚೇಂದ್ರ ಪ್ರಸಾದ್, ದೀಪಕ್​ ಶೆಟ್ಟಿ ಮೊದಲಾದವರು ನಟಿಸಿರುವ ಈ ಸಿನಿಮಾ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿದೆ.

ವಸಿಷ್ಠ ಸಿಂಹ ಅವರು ಗಾಯಕರಾಗಿಯೂ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ‘ಕಿರಿಕ್ ಪಾರ್ಟಿ’ ಸಿನಿಮಾದ ‘ನೀಚ ಸುಳ್ಳು ಸುತ್ತೋ ನಾಲಿಗೆ..’, ‘ದಯವಿಟ್ಟು ಗಮನಿಸಿ..’ ಸಿನಿಮಾದ ‘ಮರೆತೇ ಹೋದೆನು..’ ಸೇರಿ ಹಲವು ಹಾಡುಗಳನ್ನು ಅವರು ಹಾಡಿದ್ದಾರೆ. ಅವರಿಗೆ ಸಂಗೀತದ ಮೇಲೂ ಆಸಕ್ತಿ ಇರುವುದರಿಂದ ಆಡಿಯೋ ಸಂಸ್ಥೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.

‘ಕಾಲಚಕ್ರ’ ಮಾತ್ರವಲ್ಲದೆ, ‘ಪಂಥ’ ಸಿನಿಮಾದಲ್ಲೂ ವಸಿಷ್ಠ ನಟಿಸುತ್ತಿದ್ದಾರೆ. ಏಪ್ರಿಲ್​ 14ರಂದು ಬಿಡುಗಡೆ ಆಗುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ನಲ್ಲಿ ವಸಿಷ್ಠ ಸಿಂಹ ನಟಿಸಿದ್ದಾರೆ. ಮೊದಲ ಪಾರ್ಟ್​ನಲ್ಲಿ ಕಮಲ್​ ಆಗಿ ಕಾಣಿಸಿಕೊಂಡಿದ್ದ ವಸಿಷ್ಠ ಸಿಂಹ ಅವರ ಪಾತ್ರ ಪಾರ್ಟ್​ 2ನಲ್ಲೂ ಮುಂದುವರಿದಿದೆ.

ಇದನ್ನೂ ಓದಿ: ನ್ಯೂ ಇಯರ್​ ದಿನದಂದು.. ಸಿಂಹದ ಮರಿಯನ್ನು ದತ್ತು ಪಡೆದ ‘ಚಿಟ್ಟೆ’ ವಸಿಷ್ಠ ಸಿಂಹ

‘ಹೆಡ್ ​ಬುಷ್​’ ಚಿತ್ರದಲ್ಲಿ ವಸಿಷ್ಠ ಸಿಂಹ ಪಾತ್ರ ಏನು? ಗುಟ್ಟು ಬಿಟ್ಟುಕೊಟ್ಟ ಧನಂಜಯ

Published On - 4:44 pm, Mon, 4 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!