AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Love…ಲಿ’ ಮೂಡ್​ನಲ್ಲಿ ವಸಿಷ್ಠ ಸಿಂಹ; ಹೊಸ ಚಿತ್ರಕ್ಕೆ ನೆರವೇರಿತು ಮುಹೂರ್ತ

‘Love...ಲಿ’ ಚಿತ್ರದ ಶೀರ್ಷಿಕೆ ನೋಡಿ ಅಭಿಮಾನಿಗಳ ವಲಯದಲ್ಲಿ ಕುತೂಹಲ ಹುಟ್ಟಿದೆ. ಬೆಂಗಳೂರಿನ ಸರ್ಕಲ್ ಮಾರಮ್ಮ ದೇಗುಲದಲ್ಲಿ ಸರಳವಾಗಿ ಸಿನಿಮಾದ ಮುಹೂರ್ತ ನೆರವೇರಿದೆ.

‘Love...ಲಿ’ ಮೂಡ್​ನಲ್ಲಿ ವಸಿಷ್ಠ ಸಿಂಹ; ಹೊಸ ಚಿತ್ರಕ್ಕೆ ನೆರವೇರಿತು ಮುಹೂರ್ತ
ವಸಿಷ್ಠ ಸಿಂಹ
TV9 Web
| Edited By: |

Updated on:Apr 22, 2022 | 9:23 PM

Share

ನಟ ವಸಿಷ್ಠ ಸಿಂಹ (Vasishta N. Simha) ವಿಲನ್ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡವರು. ಹಾಗಂತ ಅವರು ಆ ರೀತಿಯ ಪಾತ್ರಕ್ಕೆ ಪಾತ್ರ ಸೀಮಿತವಾಗಿಲ್ಲ. ಚಿತ್ರದಿಂದ ಚಿತ್ರಕ್ಕೆ ಹಲವು ಭಿನ್ನ ಪಾತ್ರಗಳನ್ನು ಒಪ್ಪಿಕೊಳ್ಳುತ್ತಾರೆ. ‘ಟಗರು’ ಸಿನಿಮಾದಲ್ಲಿ (Tagaru Movie) ಅವರು ನಟಿಸಿದ ಚಿಟ್ಟೆ ಪಾತ್ರ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತ್ತು. ‘ಕೆಜಿಎಫ್’ ಸರಣಿಯಲ್ಲೂ ವಸಿಷ್ಠ ಸಿಂಹ ನಟಿಸಿ ಗಮನ ಸೆಳೆದಿದ್ದಾರೆ. ಅವರ ಕಂಚಿನ ಕಂಠದಿಂದ ಸಾಕಷ್ಟು ಹಾಡುಗಳು ಮೂಡಿ ಬಂದಿವೆ. ಸದ್ಯ, ವಸಿಷ್ಠ ನಾಯಕನಾಗಿ ನಟಿಸಿರುವ ‘ಕಾಲಚಕ್ರ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಮಧ್ಯೆ ಅವರು ಮತ್ತೊಂದು ಸಿನಿಮಾದಲ್ಲಿ ಹೀರೋ ಆಗಿ ನಟಿಸಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ‘Love…ಲಿ’ (Love Li) ಎನ್ನುವ ಶೀರ್ಷಿಕೆ ಇಡಲಾಗಿದೆ.

‘Love…ಲಿ’ ಚಿತ್ರದ ಶೀರ್ಷಿಕೆ ನೋಡಿ ಅಭಿಮಾನಿಗಳ ವಲಯದಲ್ಲಿ ಕುತೂಹಲ ಹುಟ್ಟಿದೆ. ಬೆಂಗಳೂರಿನ ಸರ್ಕಲ್ ಮಾರಮ್ಮ ದೇಗುಲದಲ್ಲಿ ಸರಳವಾಗಿ ಸಿನಿಮಾದ ಮುಹೂರ್ತ ನೆರವೇರಿದೆ. ಚಿತ್ರತಂಡ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದು, ವಸಿಷ್ಠ ಸಿಂಹ ಅವರು ಬೈಕ್ ಮೇಲೆ ಕುಳಿತು ಧಮ್ ಹೊಡೆಯುತ್ತಿದ್ದಾರೆ. ಸಖತ್ ಸ್ಟೈಲಿಶ್ ಲುಕ್​​ನಲ್ಲಿ ಅವರು ಮಿಂಚಿದ್ದಾರೆ.

‘Love…ಲಿ’ ಚಿತ್ರದಲ್ಲಿ ​ ಲವ್ ಸ್ಟೋರಿ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರೌಡಿಸಂ ಕಥೆಯನ್ನೂ ಸಿನಿಮಾ ಒಳಗೊಂಡಿದೆ. ‘ಮಫ್ತಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಈ ಚಿತ್ರವನ್ನು ನರ್ತನ್ ನಿರ್ದೇಶನ ಮಾಡಿದ್ದರು. ಅವರ ಜತೆ ಕೆಲಸ ಮಾಡಿದ ಅನುಭವ ಇರುವ ಚೇತನ್ ಕೇಶವ್ ‘Love…ಲಿ’ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ವಸಿಷ್ಠ ಸಿಂಹ ಹಾಗೂ ಚೇತನ್​ ಕೇಶವ್​​ಗೆ ಮೊದಲಿನಿಂದಲೂ ಪರಿಚಯ ಇತ್ತು. ಈಗ ಇಬ್ಬರೂ ಒಟ್ಟಾಗಿ ಸಿನಿಮಾ ಮಾಡುತ್ತಿರುವುದು ವಿಶೇಷ. ಮೇ 4ರಿಂದ ಸಿನಿಮಾ ಶೂಟಿಂಗ್​ ಆರಂಭಗೊಳ್ಳಲಿದ್ದು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

ವಸಿಷ್ಠ ಸಿಂಹ ಬತ್ತಳಿಕೆಯಲ್ಲಿ ಸಾಕಷ್ಟು ಪ್ರಾಜೆಕ್ಟ್​​ಗಳಿವೆ. ಜಯರಾಜ್​ ಅವರ ಜೀವನ ಆಧರಿಸಿ ಸಿದ್ಧಗೊಳ್ಳುತ್ತಿರುವ ‘ಹೆಡ್ ಬುಷ್’ ಸಿನಿಮಾದಲ್ಲಿ ವಸಿಷ್ಠ ಅವರು ಬಣ್ಣ ಹಚ್ಚುತ್ತಿದ್ದಾರೆ. ‘ಸಿಂಬಾ’, ‘ಓದೆಲಾ ರೈಲ್ವೇ ಸ್ಟೇಷನ್’ ಸೇರಿ ಹಲವು ಸಿನಿಮಾಗಳಲ್ಲಿ ವಸಿಷ್ಠ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ‘ಹೆಡ್ ​ಬುಷ್​’ ಚಿತ್ರದಲ್ಲಿ ವಸಿಷ್ಠ ಸಿಂಹ ಪಾತ್ರ ಏನು? ಗುಟ್ಟು ಬಿಟ್ಟುಕೊಟ್ಟ ಧನಂಜಯ

‘ನೀನೇ ಬೇಕು ನೀನೇ ಬೇಕು ಎನ್ನುವಂತಾಗಲಿ’: ವಸಿಷ್ಠ ಸಿಂಹ, ಡಾಲಿ ಧನಂಜಯಗೆ ಹಂಸಲೇಖ ಹಾರೈಕೆ

Published On - 6:19 pm, Fri, 22 April 22

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್