AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ನಿರ್ಮಾಣದ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರದಲ್ಲಿ ವಾಸುಕಿ ವೈಭವ್; ಏನಿದು ಗುಡ್​ ನ್ಯೂಸ್​?

ಪುನೀತ್​ ರಾಜ್​ಕುಮಾರ್​ ಅವರ ಪಿಆರ್​ಕೆ ಪ್ರೊಡಕ್ಷನ್ಸ್​, ಸತ್ಯ & ಮಯೂರ ಪಿಕ್ಚರ್ಸ್​ ಜೊತೆಗೂಡಿ ಈ ಸಿನಿಮಾ ನಿರ್ಮಿಸುತ್ತಿವೆ. ವಾಸುಕಿ ವೈಭವ್ ವಿಶೇಷ ಪಾತ್ರದ ಜೊತೆಗೆ​ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ.

ಪುನೀತ್​ ನಿರ್ಮಾಣದ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರದಲ್ಲಿ ವಾಸುಕಿ ವೈಭವ್; ಏನಿದು ಗುಡ್​ ನ್ಯೂಸ್​?
ಪುನೀತ್​ ನಿರ್ಮಾಣದ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರದಲ್ಲಿ ವಾಸುಕಿ ವೈಭವ್
TV9 Web
| Edited By: |

Updated on: Jul 30, 2021 | 8:56 AM

Share

ನಟ, ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ (Vasuki Vaibhav)​ ಅವರನ್ನು ಬಹುಮುಖ ಪ್ರತಿಭೆ ಎಂದೇ ಹೇಳಬೇಕು. ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಸ್ಪರ್ಧಿಸಿ ಬಂದ ಬಳಿಕ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತು. ಹಲವು ಸಿನಿಮಾಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಅದರ ನಡುವೆ ಅವರು ‘ಮ್ಯಾನ್​ ಆಫ್​ ದಿ ಮ್ಯಾಚ್’​ ಆಗಿದ್ದಾರೆ. ಅಂದರೆ, ಡಿ. ಸತ್ಯಪ್ರಕಾಶ್​ ನಿರ್ದೇಶನ ಮಾಡುತ್ತಿರುವ ‘ಮ್ಯಾನ್​ ಆಫ್​ ದಿ ಮ್ಯಾಚ್​’ (Man Of The Match) ಸಿನಿಮಾದಲ್ಲಿ ವಾಸುಕಿ ವೈಭವ್​ ನಟಿಸಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಖಷಿ ನೀಡಿದೆ.

‘ರಾಮಾ ರಾಮಾ ರೇ’ ಖ್ಯಾತಿಯ ಸತ್ಯಪ್ರಕಾಶ್​ ಅವರು ನಿರ್ದೇಶನ ಮಾಡುತ್ತಿರುವ ಮೂರನೇ ಸಿನಿಮಾ ‘ಮ್ಯಾನ್​ ಆಫ್​ ದಿ ಮ್ಯಾಚ್​’. ಈ ಚಿತ್ರಕ್ಕೆ ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಬಂಡವಾಳ ಹೂಡುತ್ತಿದ್ದಾರೆ. ಶೂಟಿಂಗ್​ ಪೂರ್ಣಗೊಳಿಸಿರುವ ಈ ಸಿನಿಮಾದಲ್ಲಿ ವಾಸುಕಿ ವೈಭವ್​ ಒಂದು ವಿಶೇಷ ಪಾತ್ರದಲ್ಲಿ ನಟಿಸಿರುವುದು ಮಾತ್ರವಲ್ಲದೆ, ಸಂಗೀತ ನಿರ್ದೇಶನ ಮಾಡಿದ್ದಾರೆ. ಒಂದು ಹಾಡಿನಲ್ಲಿ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.​

ಹಲವಾರು ಸೂಪರ್​ ಹಿಟ್​ ಹಾಡುಗಳನ್ನು ಬರೆದಿರುವ ನಿರ್ದೇಶಕ ಯೋಗರಾಜ್​ ಭಟ್​ ಅವರ ಬತ್ತಳಿಕೆಯಿಂದಲೇ ಈ ಗೀತೆ ಹೊರಬಂದಿದೆ. ಅವರಿಗೆ ಸತ್ಯಪ್ರಕಾಶ್​ ಕೂಡ ಸಾಥ್​ ನೀಡಿದ್ದಾರೆ. ಇವರಿಬ್ಬರು ಜಂಟಿಯಾಗಿ ರಚಿಸಿರುವ ಈ ಹಾಡಿಗೆ ಸ್ವತಃ ಸತ್ಯಪ್ರಕಾಶ್​ ಕೊರಿಯೋಗ್ರಫಿ ಮಾಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಮ್ಯಾನ್​ ಆಫ್​ ದಿ ಮ್ಯಾಚ್’ ಸಿನಿಮಾದ ಮರುಗು ಹೆಚ್ಚಿದೆ.

ಪುನೀತ್​ ರಾಜ್​ಕುಮಾರ್​ ಅವರ ಪಿಆರ್​ಕೆ ಪ್ರೊಡಕ್ಷನ್ಸ್​, ಸತ್ಯ & ಮಯೂರ ಪಿಕ್ಚರ್ಸ್​ ಜೊತೆಗೂಡಿ ಈ ಸಿನಿಮಾ ನಿರ್ಮಿಸುತ್ತಿವೆ. ಸತ್ಯಪ್ರಕಾಶ್​ ಅವರ ಜೊತೆ ಕೆಲಸ ಮಾಡುತ್ತಿರುವುದಕ್ಕೆ ಪುನೀತ್​ ರಾಜ್ ಕುಮಾರ್​ ಸಂತಸ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಬಹುತೇಕ ಹೊಸ ಕಲಾವಿದರೇ ನಟಿಸಿರುವುದು ವಿಶೇಷ. 50ಕ್ಕೂ ಹೆಚ್ಚು ಮಂದಿ ಹೊಸಬರಿಗೆ ಇದರಲ್ಲಿ ಅವಕಾಶ ನೀಡಿಲಾಗಿದೆ. ‘ರಾಮಾ ರಾಮಾ ರೇ’ ಚಿತ್ರದಲ್ಲಿದ್ದ ಧರ್ಮಣ್ಣ ಕಡೂರು ಮತ್ತು ನಟರಾಜ್​ ಅವರು ‘ಮ್ಯಾನ್ ಆಫ್​ ದಿ ಮ್ಯಾಚ್​​’ನಲ್ಲೂ ಅಭಿನಯಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಪುನೀತ್​ ರಾಜ್​ಕುಮಾರ್​ ನಟನೆಯ ಒಂದು ಚಿತ್ರಕ್ಕೆ ಸತ್ಯಪ್ರಕಾಶ್​ ನಿರ್ದೇಶನ ಮಾಡಬೇಕಿತ್ತು. ಆದರೆ ಕಾರಣಾಂತರ ಆ ಪ್ರಾಜೆಕ್ಟ್​ ಮುಂದಕ್ಕೆ ಹೋಗಿದೆ.

ಇದನ್ನೂ ಓದಿ:

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!