AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: 37 ವರ್ಷ, 125 ಸಿನಿಮಾ, ಹಲವಾರು ಸೂಪರ್​ ಹಿಟ್​; ಕನ್ನಡ ಚಿತ್ರರಂಗದಲ್ಲಿ ಶಿವಣ್ಣನ ಮೈಲಿಗಲ್ಲು

Shivanna | Kannada Film Industry: ಶಿವರಾಜ್​ಕುಮಾರ್​ ಅವರು ಚಂದನವನಕ್ಕೆ ಕಾಲಿಟ್ಟು 37 ವರ್ಷ ತುಂಬಿದೆ. ಈ ಸುದೀರ್ಘ ಪಯಣದಲ್ಲಿ ಅವರು ನೀಡಿದ ಸೂಪರ್​ ಹಿಟ್​ ಸಿನಿಮಾಗಳು ಒಂದೆರಡಲ್ಲ.

Shivarajkumar: 37 ವರ್ಷ, 125 ಸಿನಿಮಾ, ಹಲವಾರು ಸೂಪರ್​ ಹಿಟ್​; ಕನ್ನಡ ಚಿತ್ರರಂಗದಲ್ಲಿ ಶಿವಣ್ಣನ ಮೈಲಿಗಲ್ಲು
ಶಿವರಾಜ್​ಕುಮಾರ್
ಮದನ್​ ಕುಮಾರ್​
|

Updated on:Feb 19, 2023 | 1:02 PM

Share

ನಟ ಶಿವರಾಜ್​ಕುಮಾರ್​ (Shivarajkumar) ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 37 ವರ್ಷಗಳು ಕಳೆದಿವೆ. ಇಂದಿಗೂ ಅವರು ಬಹುಬೇಡಿಕೆಯ ನಟನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಬಗೆಯ ಪಾತ್ರಗಳ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಇಷ್ಟು ವರ್ಷಗಳು ಉರುಳಿದರೂ ಅವರ ಎನರ್ಜಿ ಕಡಿಮೆ ಆಗಿಲ್ಲ. ಹದಿಹರೆಯದ ಹುಡುಗರನ್ನೂ ನಾಚಿಸುವಂತೆ ಅವರು ಡ್ಯಾನ್ಸ್​ ಮತ್ತು ಫೈಟಿಂಗ್​ ಮಾಡುತ್ತಾರೆ. ಶಿವರಾಜ್​ಕುಮಾರ್​ ಅವರು ಚಂದನವನದಲ್ಲಿ 37 ವರ್ಷಗಳನ್ನು ಪೂರೈಸಿರುವುದಕ್ಕೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಅವರ ಸಿನಿಮಾ (Shivarajkumar Movies) ಜರ್ನಿಯನ್ನು ಫ್ಯಾನ್ಸ್​ ಮೆಲುಕು ಹಾಕುತ್ತಿದ್ದಾರೆ. ಪ್ರಸ್ತುತ ಶಿವರಾಜ್​ಕುಮಾರ್​ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ.

ಶಿವರಾಜ್​ಕುಮಾರ್​ ನಟನೆಯ ಮೊದಲ ಸಿನಿಮಾ ‘ಆನಂದ್​’. ಆ ಚಿತ್ರ ಸೆಟ್ಟೇರಿದ್ದು 1986ರ ಫೆಬ್ರವರಿ 19ರಂದು. ಮೊದಲ ಬಾರಿ ಶಿವಣ್ಣ ಬಣ್ಣ ಹಚ್ಚಿದ್ದು ಈ ದಿನಾಂಕದಲ್ಲಿ. ಇಂದಿಗೆ 37 ವರ್ಷಗಳು ಪೂರ್ಣಗೊಂಡಿವೆ. ಇಷ್ಟು ವರ್ಷಗಳ ಕಾಲ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಳ್ಳುವುದು ಎಂದರೆ ಸುಲಭದ ಮಾತಲ್ಲ. ಈವರೆಗೂ 125 ಸಿನಿಮಾಗಳಲ್ಲಿ ಶಿವಣ್ಣ ನಟಿಸಿದ್ದಾರೆ. 125ನೇ ಚಿತ್ರವಾಗಿ ತೆರೆಕಂಡ ‘ವೇದ’ ಸಿನಿಮಾ ಅಭಿಮಾನಿಗಳಿಗೆ ಇಷ್ಟ ಆಗಿದೆ.

ಇದನ್ನೂ ಓದಿ: ‘ಜೈಲರ್’ ಸಿನಿಮಾ ಸೆಟ್​ನ ಫೋಟೋ ವೈರಲ್; ಬಾಡಿಗಾರ್ಡ್ಸ್​ ಜತೆ ಮಿಂಚಿದ ಶಿವಣ್ಣ, ರಜನಿಕಾಂತ್

ಇದನ್ನೂ ಓದಿ
Image
ಶಿವಣ್ಣ ಜತೆ ನಟಿಸುವ ಚಾನ್ಸ್​ ಸಿಕ್ಕರೂ ಮುಹೂರ್ತಕ್ಕೆ ಪ್ರಭುದೇವ ಬರಲಿಲ್ಲ; ಕಾರಣ ತಿಳಿಸಿ ಕ್ಷಮೆ ಕೇಳಿದ ನಟ
Image
ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ
Image
‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

ಈ ಸುದೀರ್ಘ ಪಯಣದಲ್ಲಿ ಶಿವಣ್ಣ ನೀಡಿದ ಸೂಪರ್​ ಹಿಟ್​ ಸಿನಿಮಾಗಳು ಒಂದೆರಡಲ್ಲ. ‘ಆನಂದ್​’, ‘ಓಂ’, ‘ಎಕೆ 47’, ‘ನಮ್ಮೂರ ಮಂದಾರ ಹೂವೇ’, ‘ಜನುಮದ ಜೋಡಿ’, ‘ಜೋಗಿ’, ‘ಟಗರು’ ಸೇರಿದಂತೆ ಅನೇಕ ಸಿನಿಮಾಗಳ ಮೂಲಕ ಅವರು ಭಿನ್ನ ವಿಭಿನ್ನ ಪಾತ್ರಗಳನ್ನು ಮಾಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ. 60ರ ಪ್ರಾಯದಲ್ಲೂ ಶಿವರಾಜ್​ಕುಮಾರ್​ ಸಖತ್​ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ಹೈದರಾಬಾದ್​ನಲ್ಲಿ ಅಪ್ಪು ನೆನೆದು ಕಣ್ಣೀರು ಹಾಕಿದ ಶಿವಣ್ಣ; ಸಮಾಧಾನ ಮಾಡಿದ ಬಾಲಯ್ಯ

ಶಿವರಾಜ್​ಕುಮಾರ್​ ಅವರ ಎನರ್ಜಿಗೆ ಯಾರೂ ಸರಿಸಾಟಿ ಇಲ್ಲ ಎನ್ನಬಹುದು. ಈ ವಯಸ್ಸಿನಲ್ಲಿ ಕೂಡ ಅವರು ಸಾಹಸ ದೃಶ್ಯಗಳಲ್ಲಿ ಅಭಿನಯಿಸಲು ಹಿಂದೇಟು ಹಾಕುವುದಿಲ್ಲ. ಈ ಉತ್ಸಾಹದ ಕಾರಣದಿಂದಲೇ ಅವರು ನಿರ್ಮಾಪಕರ ಫೇವರಿಟ್​ ನಟನಾಗಿ ಬೇಡಿಕೆ ಉಳಿಸಿಕೊಂಡಿದ್ದಾರೆ. ಬ್ಯಾಕ್ ಟು​ ಬ್ಯಾಕ್​ ಸಿನಿಮಾಗಳಲ್ಲಿ ಶಿವಣ್ಣ ನಟಿಸುತ್ತಿದ್ದಾರೆ. ಹೊಸ ಹೊಸ ಚಿತ್ರಗಳು ಅನೌನ್ಸ್​ ಆಗುತ್ತಿವೆ. ಶಿವರಾತ್ರಿ ಹಬ್ಬದ ಪ್ರಯುಕ್ತ ‘ಬೈರತಿ ರಣಗಲ್​’ ಚಿತ್ರದ ಘೋಷಣೆ ಆಗಿದೆ. ಈ ಚಿತ್ರಕ್ಕೆ ನರ್ತನ್​ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: ‘ನನ್ನ ಎಲ್ಲ ಮೈಲುಗಲ್ಲಿನ ಚಿತ್ರಗಳಲ್ಲಿ ಹೆಣ್ಣಿನ ಕಥೆ’; ಮೊದಲ ಚಿತ್ರದಿಂದ ‘ವೇದ’ ತನಕ ಮಾತಾಡಿದ ಶಿವಣ್ಣ

ಶ್ರೀನಿ ನಿರ್ದೇಶನದ ‘ಘೋಸ್ಟ್​’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ನಟಿಸುತ್ತಿದ್ದಾರೆ. ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾದಲ್ಲೂ ಅವರೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಧನುಷ್​ ಅಭಿನಯದ ‘ಕ್ಯಾಪ್ಟನ್​ ಮಿಲ್ಲರ್​’ ಚಿತ್ರದಲ್ಲೂ ಶಿವಣ್ಣ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳು ಭಾರಿ ನಿರೀಕ್ಷೆ ಸೃಷ್ಟಿ ಮಾಡಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:02 pm, Sun, 19 February 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ