AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೀರ ಮದಕರಿ’ ಚಿತ್ರದಲ್ಲಿ ನಟಿಸಿದ್ದ ಬಾಲ ಕಲಾವಿದೆ ಜೆರುಶಾ ಈಗ ಹೀರೋಯಿನ್​

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮಹೇಶ್​ ಬಾಬು ಅವರು ಈಗಾಗಲೇ ಅನೇಕ ನಾಯಕಿಯರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಆ ಪೈಕಿ ಬಹುತೇಕ ನಟಿಯರು ಯಶಸ್ವಿಯಾಗಿದ್ದಾರೆ. ಮಹೇಶ್​ ಬಾಬು ನಿರ್ದೇಶನದ ಹೊಸ ಸಿನಿಮಾಗೆ ಈಗ ನಟಿ ಜೆರುಶಾ ಅವರು ಹೀರೋಯಿನ್​ ಆಗಿದ್ದಾರೆ. ಮೇ ತಿಂಗಳಿಂದ ಈ ಚಿತ್ರದ ಶೂಟಿಂಗ್​ ಆರಂಭ ಆಗುತ್ತಿದೆ. ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..

‘ವೀರ ಮದಕರಿ’ ಚಿತ್ರದಲ್ಲಿ ನಟಿಸಿದ್ದ ಬಾಲ ಕಲಾವಿದೆ ಜೆರುಶಾ ಈಗ ಹೀರೋಯಿನ್​
ಜೆರುಶಾ, ಸ್ಮೈಲ್​ ಗುರು ರಕ್ಷಿತ್​
ಮದನ್​ ಕುಮಾರ್​
|

Updated on: Apr 21, 2024 | 1:02 PM

Share

ನಿರ್ದೇಶಕ ಮಹೇಶ್ ಬಾಬು (Director Mahesh Babu) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ‘ಆಕಾಶ್’, ‘ಅರಸು’, ‘ಅಭಯ್​’, ‘ಮೆರವಣಿಗೆ’ ಮುಂತಾದ ಸಿನಿಮಾಗೆ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈಗ ಅವರು ಮತ್ತೊಂದು ನೂತನ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಪ್ರತಿ ಬಾರಿ ಮಹೇಶ್​ ಬಾಬು ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಾರೆ. ‘ಅಪರೂಪ’ ಸಿನಿಮಾದಲ್ಲೂ ಅವರು ಯುವ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ (Kannada Film Industry) ಪರಿಚಯಿಸಿದ್ದರು. ಈಗ ಅವರು ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಸ್ಯಾಂಡಲ್​ವುಡ್​ಗೆ ಪರಿಚಯಿಸುತ್ತಿದ್ದಾರೆ. ಇದೇ ಸಿನಿಮಾದಲ್ಲಿ ನಟಿ ಜೆರುಶಾ (Jerusha) ಕೂಡ ಅಭಿನಯಿಸುತ್ತಿದ್ದಾರೆ.

ಡೈರೆಕ್ಟರ್​ ಮಹೇಶ್ ಬಾಬು ಜೊತೆ ರಕ್ಷಿತ್ ಅವರ ಹೊಸ ಸಿನಿಮಾ ಈಗಾಗಲೇ ಘೋಷಣೆ ಆಗಿದೆ. ಈಗಿನ ಹೊಸ ನ್ಯೂಸ್​ ಏನಂದರೆ ಈ ಸಿನಿಮಾದ ಮೂಲಕ ಜೆರುಶಾ ಅವರನ್ನು ನಾಯಕಿಯನ್ನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಲಿದ್ದಾರೆ. ‘ಮೆರವಣಿಗೆ’ ಸಿನಿಮಾದಿಂದ ಐಂದ್ರಿತಾ ರೇ, ‘ಚಿರು’ ಸಿನಿಮಾದಿಂದ ಕೃತಿ ಕರಬಂದ, ‘ಅಜಿತ್’ ಚಿತ್ರದಿಂದ ನಿಕ್ಕಿ ಗಲ್ರಾನಿ, ‘ಕ್ರೇಜಿ ಬಾಯ್’ ಸಿನಿಮಾದ ಮೂಲಕ ಆಶಿಕಾ ರಂಗನಾಥ್ ಹಾಗೂ ‘ಅಪರೂಪ’ ಚಿತ್ರದ ಮೂಲಕ ನಟಿ ಹೃತಿಕಾ ಶ್ರೀನಿವಾಸ್ ಅವರನ್ನು ಪರಿಚಯಿಸಿದ್ದು ಇದೇ ಮಹೇಶ್​ ಬಾಬು. ಈಗ ಮಹೇಶ್ ಬಾಬು ಅವರ ಸಿನಿಮಾ ಮೂಲಕ ಜೆರುಶಾ ಅವರು ಹೀರೋಯಿನ್​ ಆಗಿ ಲಾಂಚ್ ಆಗುತ್ತಿದ್ದಾರೆ.

ನಟಿ ಜೆರುಶಾ ಅವರಿಗೆ ನಟನೆ ಹೊಸದೇನೂ ಅಲ್ಲ. ಈ ಮೊದಲು ಕಿಚ್ಚ ಸುದೀಪ್ ನಟನೆಯ ‘ವೀರ ಮದಕರಿ’ ಸಿನಿಮಾದಲ್ಲಿ ಬಾಲ ನಟಿಯಾಗಿ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು. ಅಲ್ಲದೇ, ಅನೇಕ ಜಾಹೀರಾತುಗಳಲ್ಲೂ ನಟಿಸಿದ್ದರು. ರಂಗಭೂಮಿ ಹಿನ್ನೆಲೆ ಕೂಡ ಅವರಿಗೆ ಇದೆ. ಜೆರುಶಾ ಅವರು ಈಗ ಮಹೇಶ್ ಬಾಬು ನಿರ್ದೇಶನದ ಸಿನಿಮಾದ ಮೂಲಕ ನಾಯಕಿಯಾಗಿ ದೊಡ್ಡಪರದೆಗೆ ಎಂಟ್ರಿ ನೀಡಲು ಸಿದ್ಧರಾಗಿದ್ದಾರೆ.

ಇದನ್ನೂ ಓದಿ: ಒಟಿಟಿಗೆ ಕಾಲಿಟ್ಟ ‘ಗಾಮಿ’ಗೆ ಮೆಚ್ಚುಗೆ; ವಿಶ್ವಕ್ ಸೇನ್ ಸಿನಿಮಾದ ಕಥೆ ಏನು?

ಡ್ಯಾನ್ಸ್ ರಿಯಾಲಿಟಿ ಶೋ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡು ಖ್ಯಾತಿ ಗಳಿಸಿದ ಸ್ಮೈಲ್ ಗುರು ರಕ್ಷಿತ್ ಅವರಿಗೆ ಜೋಡಿಯಾಗಿ ಜೆರುಶಾ ನಟಿಸಲಿದ್ದಾರೆ. ಈ ಸಿನಿಮಾದಲ್ಲಿನ ಮತ್ತೊಂದು ಪ್ರಮುಖ ಪಾತ್ರಕ್ಕೆ ಇನ್ನೋರ್ವ ನಟಿಯ ಆಯ್ಕೆ ಆಗಲಿದೆ. ಆ ಬಗ್ಗೆ ಮಹೇಶ್ ಬಾಬು ಅವರು ಶೀಘ್ರದಲ್ಲೇ ಮಾಹಿತಿ ಹಂಚಿಕೊಳ್ಳಲಿದ್ದಾರೆ.ಈ ಹೊಸ ಚಿತ್ರಕ್ಕೆ ಇನ್ನೂ ಟೈಟಲ್​ ಅಂತಿಮವಾಗಿಲ್ಲ. ಯುವ ಪ್ರೇಕ್ಷಕರಿಗೆ ಇಷ್ಟ ಆಗುವಂತಹ ಕಥಾಹಂದರ ಹೊಂದಿರುವ ಈ ಸಿನಿಮಾವನ್ನು ಚೇತನ್ ಹಾಗೂ ಅನುರಾಗ್ ಅವರು ನಿರ್ಮಾಣ ಮಾಡಲಿದ್ದಾರೆ. ಮೇ ತಿಂಗಳಲ್ಲಿ ಶೂಟಿಂಗ್​ ಆರಂಭ ಆಗಲಿದೆ. ಅನೂಪ್ ಸೀಳಿನ್ ಅವರ ಸಂಗೀತ ನಿರ್ದೇಶನ, ಸತ್ಯ ಅವರ ಛಾಯಾಗ್ರಾಹಣ ಈ ಸಿನಿಮಾಗೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!