Veeram Movie: ಏ.7ರಂದು ರಿಲೀಸ್​ ಆಗಲಿದೆ ‘ವೀರಂ’; ವಿಷ್ಣುವರ್ಧನ್​ ಅಭಿಮಾನಿಗಳಿಗೆ ಈ ಚಿತ್ರದ ಮೇಲಿದೆ ವಿಶೇಷ ನಿರೀಕ್ಷೆ

Veeram Movie Release Date: ‘ವೀರಂ’ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ ಅವರಿಗೆ ಮಾಸ್​ ಲುಕ್​ ಇದೆ. ಈ ಚಿತ್ರಕ್ಕೆ ಶಶಿಧರ್​ ಕೆ.ಎಂ. ಬಂಡವಾಳ ಹೂಡಿದ್ದು, ಕುಮಾರ್​ ರಾಜ್​ ನಿರ್ದೇಶನ ಮಾಡಿದ್ದಾರೆ.

Veeram Movie: ಏ.7ರಂದು ರಿಲೀಸ್​ ಆಗಲಿದೆ ‘ವೀರಂ’; ವಿಷ್ಣುವರ್ಧನ್​ ಅಭಿಮಾನಿಗಳಿಗೆ ಈ ಚಿತ್ರದ ಮೇಲಿದೆ ವಿಶೇಷ ನಿರೀಕ್ಷೆ
ವೀರಂ ಸಿನಿಮಾ ಪೋಸ್ಟರ್​
Follow us
|

Updated on:Mar 09, 2023 | 7:14 PM

‘ಡೈನಾಮಿಕ್​ ಪ್ರಿನ್ಸ್​’ ಪ್ರಜ್ವಲ್​ ದೇವರಾಜ್ (Prajwal Devaraj)​ ಅವರು ನಟಿಸಿರುವ ‘ವೀರಂ’ ಚಿತ್ರಕ್ಕಾಗಿ ಸಿನಿಪ್ರಿಯರು ಕಾದಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಚಿತ್ರತಂಡದವರು ‘ವೀರಂ’ ಸಿನಿಮಾದ (Veeram Movie) ಬಿಡುಗಡೆ​ ದಿನಾಂಕವನ್ನು ಅನೌನ್ಸ್​ ಮಾಡಿದ್ದಾರೆ. ಏಪ್ರಿಲ್​ 7ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಈಗಾಗಲೇ ಟೀಸರ್​, ಪೋಸ್ಟರ್​ ಮತ್ತು ಹಾಡಿನ ಮೂಲಕ ಈ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಅದರಲ್ಲೂ ‘ಸಾಹಸ ಸಿಂಹ’ ವಿಷ್ಣುವರ್ಧನ್​ (Dr. Vishnuvardhan) ಅಭಿಮಾನಿಗಳು ‘ವೀರಂ’ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ ಅವರು ವಿಷ್ಣುವರ್ಧನ್​ ಫ್ಯಾನ್​ ಆಗಿ ಕಾಣಿಸಿಕೊಂಡಿರುವುದೇ ಅದಕ್ಕೆ ಕಾರಣ. ಅವರ ಕೈ ಮೇಲೆ ಇರುವ ವಿಷ್ಣು ದಾದಾ ಟ್ಯಾಟೂ ಕೂಡ ಗಮನ ಸೆಳೆಯುತ್ತಿದೆ.

ರಿಲೀಸ್​ ಡೇಟ್​ ತಿಳಿಸುವ ಸಲುವಾಗಿ ‘ವೀರಂ’ ಚಿತ್ರತಂಡದವರು ಹೊಸ ಪೋಸ್ಟರ್​ ಹಂಚಿಕೊಂಡಿದ್ದಾರೆ. ಅದು ತುಂಬ ಮಾಸ್​ ಆಗಿದೆ. ಕಾರಿನ ಮೇಲೆ ಪ್ರಜ್ವಲ್​ ದೇವರಾಜ್​ ನಿಂತಿದ್ದಾರೆ. ಸುತ್ತಲೂ ಜನಜಂಗುಳಿ ಇದೆ. ಹಿಂಬದಿಯಲ್ಲಿ ವಿಷ್ಣುವರ್ಧನ್​ ಅಭಿನಯದ ‘ಬಂಧನ’ ಸಿನಿಮಾದ ಪೋಸ್ಟರ್​ ಕಾಣಿಸಿದೆ. ಸಿನಿಮಾದಲ್ಲಿ ಈ ಸೀನ್​ ಹೇಗೆ ಬಂದಿರಬಹುದು ಎಂಬ ಕೌತುಕ ಸೃಷ್ಟಿ ಆಗಿದೆ.

ಇದನ್ನೂ ಓದಿ
Image
Karnataka Ratna Award: ವಿಷ್ಣುವರ್ಧನ್​ಗೆ ‘ಕರ್ನಾಟಕ ರತ್ನ’ ನೀಡಬೇಕು ಎಂಬ ಬೇಡಿಕೆ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
Image
Vishnuvardhan Memorial Inauguration: ‘ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ’; ಶಿವರಾಜ್​ಕುಮಾರ್​
Image
Vishnuvardhan Memorial: ವಿಷ್ಣು​ ಅಭಿಮಾನಿಗಳ ಅನ್ನದಾನ ಕಾರ್ಯಕ್ಕೆ ಅಡೆತಡೆ; ಸ್ಮಾರಕ ಉದ್ಘಾಟನೆ ದಿನವೂ ತಪ್ಪದ ಪರದಾಟ
Image
Vishnuvardhan Memorial: ಬೆಂಗಳೂರಿನಲ್ಲಿ ವಿಷ್ಣುವರ್ಧನ್​ ಅಂತ್ಯ ಸಂಸ್ಕಾರ ಆದರೂ ಮೈಸೂರಿನಲ್ಲಿ ಸ್ಮಾರಕ ಆಗಿದ್ದೇಕೆ? ಇಲ್ಲಿದೆ ವಿವರ

ಇದನ್ನೂ ಓದಿ: Prajwal Devaraj: ಟೈಮ್​ ಲೂಪ್​ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​; ‘ಮಮ್ಮಿ’ ಖ್ಯಾತಿಯ ಲೋಹಿತ್​ ನಿರ್ದೇಶನ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ‘ವೀರಂ’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಕೊವಿಡ್​ ಮುಂತಾದ ಕಾರಣಗಳಿಂದಾಗಿ ರಿಲೀಸ್​ ದಿನಾಂಕ ಮುಂದೂಡುವುದು ಅನಿವಾರ್ಯ ಆಯಿತು. ಈಗ ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡಿರುವ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದ್ದೂರಿಯಾಗಿ ರಿಲೀಸ್​ ಮಾಡಲು ಸಕಲ ರೀತಿಯಲ್ಲಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: Meghana Raj: ಮೇಘನಾ ರಾಜ್​ ಕಮ್​ಬ್ಯಾಕ್​ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​; ಅಭಿಮಾನಿಗಳು ಫುಲ್​ ಖುಷ್​

‘ವೀರಂ’ ಚಿತ್ರಕ್ಕೆ ಶಶಿಧರ್​ ಕೆ.ಎಂ. ಬಂಡವಾಳ ಹೂಡಿದ್ದಾರೆ. ಕುಮಾರ್​ ರಾಜ್​ (ಖದರ್​ ಕುಮಾರ್​) ನಿರ್ದೇಶನ ಮಾಡಿದ್ದಾರೆ. ಲವಿತ್​ ಛಾಯಾಗ್ರಹಣ, ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ, ರವಿಚಂದ್ರನ್​ ಸಂಕಲನ, ಡಿಫರೆಂಡ್​ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ. ಪ್ರಜ್ವಲ್​ ದೇವರಾಜ್​ ಜೊತೆ ಶ್ರುತಿ, ಶ್ರೀನಗರ ಕಿಟ್ಟಿ, ಶಿಷ್ಯ ದೀಪಕ್​, ರಚಿತಾ ರಾಮ್​ ಮುಂತಾದವರು ನಟಿಸಿದ್ದಾರೆ. ತುಂಬ ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದೆ ಎಂಬುದು ಈಗಾಗಲೇ ಟೀಸರ್​ ಮೂಲಕ ಗೊತ್ತಾಗಿದೆ.

‘ವೀರಂ’ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ ಅವರ ಗೆಟಪ್​ ಸಂಪೂರ್ಣ ಬದಲಾಗಿದೆ. ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಅವರು ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳೂ ಈ ಸಿನಿಮಾದಲ್ಲಿ ಇವೆ. ‘ವೀರಂ’ ಚಿತ್ರವನ್ನು ಸ್ವಾಗತಿಸಲು ಅಭಿಮಾನಿಗಳು ಹುಮ್ಮಸ್ಸಿನಿಂದ ಸಜ್ಜಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:14 pm, Thu, 9 March 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ