AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಕುಟುಂಬ ಸಮೇತ ‘ಕಾಂತಾರ’ ನೋಡಲಿರುವ ವೀರೇಂದ್ರ ಹೆಗ್ಗಡೆ; ಮುಖ್ಯವಾಗಲಿದೆ ಇವರ ಅಭಿಪ್ರಾಯ

Veerendra Heggade | Rishab Shetty: ಹಲವು ಕಾರಣದಿಂದ ‘ಕಾಂತಾರ’ ಚಿತ್ರದ ಬಗ್ಗೆ ಚರ್ಚೆ ಆಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರು ಈ ಸಿನಿಮಾ ನೋಡಿದ ಬಳಿಕ ಏನು ಹೇಳಲಿದ್ದಾರೆ ಎಂಬುದನ್ನು ತಿಳಿಯಲು ಎಲ್ಲರೂ ಕಾದಿದ್ದಾರೆ.

Kantara: ಕುಟುಂಬ ಸಮೇತ ‘ಕಾಂತಾರ’ ನೋಡಲಿರುವ ವೀರೇಂದ್ರ ಹೆಗ್ಗಡೆ; ಮುಖ್ಯವಾಗಲಿದೆ ಇವರ ಅಭಿಪ್ರಾಯ
ವೀರೇಂದ್ರ ಹೆಗ್ಗಡೆ, ಕಾಂತಾರ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on:Oct 21, 2022 | 2:58 PM

ಎಲ್ಲ ಕ್ಷೇತ್ರದವರನ್ನೂ ‘ಕಾಂತಾರ’ (Kantara) ಸಿನಿಮಾ ಆಕರ್ಷಿಸಿದೆ. ಪರಭಾಷೆ ಮಂದಿ ಕೂಡ ಈ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಹಲವು ಆಯಾಮಗಳಿಂದ ಈ ಸಿನಿಮಾವನ್ನು ನೋಡಲಾಗುತ್ತಿದೆ. ಪ್ರಭಾಸ್​, ಅನುಷ್ಕಾ ಶೆಟ್ಟಿ, ಕಂಗನಾ ರಣಾವತ್​ ಸೇರಿದಂತೆ ಹಲವರು ತಮ್ಮ ಪ್ರಶಂಸೆ ವ್ಯಕ್ತಪಡಿಸಿದ್ದಾಗಿದೆ. ಈಗ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆ (Veerendra Heggade) ಅವರು ಕೂಡ ‘ಕಾಂತಾರ’ ನೋಡುತ್ತಾರೆ ಎಂಬ ಮಾಹಿತಿ ಸಿಕ್ಕಿದೆ. ಇಂದು (ಅ.21) ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್​ ಚಿತ್ರಮಂದಿರದಲ್ಲಿ ಕುಟುಂಬ ಸಮೇತರಾಗಿ ಸಿನಿಮಾ ವೀಕ್ಷಿಸಲಿದ್ದಾರೆ. ಚಿತ್ರ ನೋಡಿದ ಬಳಿಕ ಅವರು ಯಾವ ರೀತಿಯ ಅಭಿಪ್ರಾಯ ತಿಳಿಸಲಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಹೆಚ್ಚಿದೆ. ರಿಷಬ್​ ಶೆಟ್ಟಿ (Rishab Shetty) ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದಿರುವ ಈ ಚಿತ್ರ ಹಲವು ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಇತ್ತೀಚೆಗೆ ‘ಕಾಂತಾರ’ ಸಿನಿಮಾ ಬಗ್ಗೆ ಬೇರೊಂದು ರೀತಿಯ ಚರ್ಚೆ ಶುರುವಾಗಿತ್ತು. ಈ ಚಿತ್ರದಲ್ಲಿ ತೋರಿಸಲಾದ ಭೂತಕೋಲವು ಹಿಂದು ಧರ್ಮಕ್ಕೆ ಸೇರಿದ್ದಲ್ಲ ಎಂದು ‘ಆ ದಿನಗಳು’ ಚೇತನ್​ ಅವರು ತಕರಾರು ತೆಗೆದಿದ್ದರು. ಆ ಕುರಿತು ಪರ-ವಿರೋಧದ ಚರ್ಚೆ ಹುಟ್ಟಿಕೊಂಡಿತ್ತು. ದೈವ ನರ್ತಕರು, ಧಾರ್ಮಿಕ ಮುಖಂಡರು, ಭಕ್ತರು ಸೇರಿದಂತೆ ಅನೇಕರು ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಈ ವೇಳೆ ವೀರೇಂದ್ರ ಹೆಗ್ಗಡೆ ಅವರು ತಿಳಿಸಲಿರುವ ಅಭಿಪ್ರಾಯ ತುಂಬ ಮುಖ್ಯವಾಗಲಿದೆ.

ತುಳುನಾಡಿನ ಸಂಸ್ಕೃತಿಯನ್ನು ‘ಕಾಂತಾರ’ ಸಿನಿಮಾದಲ್ಲಿ ತೋರಿಸಲಾಗಿದೆ. ಭೂತಾರಾಧನೆಗೆ ಸಂಬಂಧಿಸಿದಂತೆ ಈ ಚಿತ್ರದಲ್ಲಿ ಹಲವು ದೃಶ್ಯಗಳಿವೆ. ಈ ಸನ್ನಿವೇಶಗಳನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಆದರೆ ಇದು ಹಿಂದು ಧರ್ಮದ ಆಚರಣೆ ಅಲ್ಲ ಎಂದು ಹೇಳಿಕೆ ನೀಡುವ ಮೂಲಕ ನಟ ಚೇತನ್​ ಅಂಹಿಸಾ ಅವರು ಚರ್ಚೆ ಹುಟ್ಟುಹಾಕಿದ್ದಾರೆ. ವೀರೇಂದ್ರ ಹೆಗ್ಗಡೆ ಅವರು ಸಿನಿಮಾ ನೋಡಿದ ಬಳಿಕ ಏನು ಹೇಳಲಿದ್ದಾರೆ ಎಂಬುದರ ಮೇಲೆ ಈ ಚರ್ಚೆಗೆ ಹೊಸ ಆಯಾಮ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ಪರಭಾಷೆಗೂ ಡಬ್​ ಆಗಿ ಬಿಡುಗಡೆ ಆಗಿದ್ದು, ಭರ್ಜರಿ ಕಲೆಕ್ಷನ್​ ಆಗುತ್ತಿದೆ. ಇದರಿಂದ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಗೆ ಸಖತ್​ ಲಾಭ ಆಗಿದೆ. ರಿಷಬ್​ ಶೆಟ್ಟಿ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಪರಭಾಷೆಯಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:57 pm, Fri, 21 October 22

ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ