AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಕುಟುಂಬ ಸಮೇತ ‘ಕಾಂತಾರ’ ನೋಡಲಿರುವ ವೀರೇಂದ್ರ ಹೆಗ್ಗಡೆ; ಮುಖ್ಯವಾಗಲಿದೆ ಇವರ ಅಭಿಪ್ರಾಯ

Veerendra Heggade | Rishab Shetty: ಹಲವು ಕಾರಣದಿಂದ ‘ಕಾಂತಾರ’ ಚಿತ್ರದ ಬಗ್ಗೆ ಚರ್ಚೆ ಆಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರು ಈ ಸಿನಿಮಾ ನೋಡಿದ ಬಳಿಕ ಏನು ಹೇಳಲಿದ್ದಾರೆ ಎಂಬುದನ್ನು ತಿಳಿಯಲು ಎಲ್ಲರೂ ಕಾದಿದ್ದಾರೆ.

Kantara: ಕುಟುಂಬ ಸಮೇತ ‘ಕಾಂತಾರ’ ನೋಡಲಿರುವ ವೀರೇಂದ್ರ ಹೆಗ್ಗಡೆ; ಮುಖ್ಯವಾಗಲಿದೆ ಇವರ ಅಭಿಪ್ರಾಯ
ವೀರೇಂದ್ರ ಹೆಗ್ಗಡೆ, ಕಾಂತಾರ ಪೋಸ್ಟರ್​
TV9 Web
| Edited By: |

Updated on:Oct 21, 2022 | 2:58 PM

Share

ಎಲ್ಲ ಕ್ಷೇತ್ರದವರನ್ನೂ ‘ಕಾಂತಾರ’ (Kantara) ಸಿನಿಮಾ ಆಕರ್ಷಿಸಿದೆ. ಪರಭಾಷೆ ಮಂದಿ ಕೂಡ ಈ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಹಲವು ಆಯಾಮಗಳಿಂದ ಈ ಸಿನಿಮಾವನ್ನು ನೋಡಲಾಗುತ್ತಿದೆ. ಪ್ರಭಾಸ್​, ಅನುಷ್ಕಾ ಶೆಟ್ಟಿ, ಕಂಗನಾ ರಣಾವತ್​ ಸೇರಿದಂತೆ ಹಲವರು ತಮ್ಮ ಪ್ರಶಂಸೆ ವ್ಯಕ್ತಪಡಿಸಿದ್ದಾಗಿದೆ. ಈಗ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆ (Veerendra Heggade) ಅವರು ಕೂಡ ‘ಕಾಂತಾರ’ ನೋಡುತ್ತಾರೆ ಎಂಬ ಮಾಹಿತಿ ಸಿಕ್ಕಿದೆ. ಇಂದು (ಅ.21) ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್​ ಚಿತ್ರಮಂದಿರದಲ್ಲಿ ಕುಟುಂಬ ಸಮೇತರಾಗಿ ಸಿನಿಮಾ ವೀಕ್ಷಿಸಲಿದ್ದಾರೆ. ಚಿತ್ರ ನೋಡಿದ ಬಳಿಕ ಅವರು ಯಾವ ರೀತಿಯ ಅಭಿಪ್ರಾಯ ತಿಳಿಸಲಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಹೆಚ್ಚಿದೆ. ರಿಷಬ್​ ಶೆಟ್ಟಿ (Rishab Shetty) ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದಿರುವ ಈ ಚಿತ್ರ ಹಲವು ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಇತ್ತೀಚೆಗೆ ‘ಕಾಂತಾರ’ ಸಿನಿಮಾ ಬಗ್ಗೆ ಬೇರೊಂದು ರೀತಿಯ ಚರ್ಚೆ ಶುರುವಾಗಿತ್ತು. ಈ ಚಿತ್ರದಲ್ಲಿ ತೋರಿಸಲಾದ ಭೂತಕೋಲವು ಹಿಂದು ಧರ್ಮಕ್ಕೆ ಸೇರಿದ್ದಲ್ಲ ಎಂದು ‘ಆ ದಿನಗಳು’ ಚೇತನ್​ ಅವರು ತಕರಾರು ತೆಗೆದಿದ್ದರು. ಆ ಕುರಿತು ಪರ-ವಿರೋಧದ ಚರ್ಚೆ ಹುಟ್ಟಿಕೊಂಡಿತ್ತು. ದೈವ ನರ್ತಕರು, ಧಾರ್ಮಿಕ ಮುಖಂಡರು, ಭಕ್ತರು ಸೇರಿದಂತೆ ಅನೇಕರು ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಈ ವೇಳೆ ವೀರೇಂದ್ರ ಹೆಗ್ಗಡೆ ಅವರು ತಿಳಿಸಲಿರುವ ಅಭಿಪ್ರಾಯ ತುಂಬ ಮುಖ್ಯವಾಗಲಿದೆ.

ತುಳುನಾಡಿನ ಸಂಸ್ಕೃತಿಯನ್ನು ‘ಕಾಂತಾರ’ ಸಿನಿಮಾದಲ್ಲಿ ತೋರಿಸಲಾಗಿದೆ. ಭೂತಾರಾಧನೆಗೆ ಸಂಬಂಧಿಸಿದಂತೆ ಈ ಚಿತ್ರದಲ್ಲಿ ಹಲವು ದೃಶ್ಯಗಳಿವೆ. ಈ ಸನ್ನಿವೇಶಗಳನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಆದರೆ ಇದು ಹಿಂದು ಧರ್ಮದ ಆಚರಣೆ ಅಲ್ಲ ಎಂದು ಹೇಳಿಕೆ ನೀಡುವ ಮೂಲಕ ನಟ ಚೇತನ್​ ಅಂಹಿಸಾ ಅವರು ಚರ್ಚೆ ಹುಟ್ಟುಹಾಕಿದ್ದಾರೆ. ವೀರೇಂದ್ರ ಹೆಗ್ಗಡೆ ಅವರು ಸಿನಿಮಾ ನೋಡಿದ ಬಳಿಕ ಏನು ಹೇಳಲಿದ್ದಾರೆ ಎಂಬುದರ ಮೇಲೆ ಈ ಚರ್ಚೆಗೆ ಹೊಸ ಆಯಾಮ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ಪರಭಾಷೆಗೂ ಡಬ್​ ಆಗಿ ಬಿಡುಗಡೆ ಆಗಿದ್ದು, ಭರ್ಜರಿ ಕಲೆಕ್ಷನ್​ ಆಗುತ್ತಿದೆ. ಇದರಿಂದ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಗೆ ಸಖತ್​ ಲಾಭ ಆಗಿದೆ. ರಿಷಬ್​ ಶೆಟ್ಟಿ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಪರಭಾಷೆಯಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:57 pm, Fri, 21 October 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್