AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಷಮಿಸಿ, ಆ ರೀತಿಯ ಭಾಷೆ ಬಳಕೆ ಮಾಡಬಾರದಿತ್ತು’; ‘ಕೆಜಿಎಫ್ 2’ ಬಗ್ಗೆ ಟೀಕೆ ಮಾಡಿ ಕ್ಷಮೆ ಕೇಳಿದ ತೆಲುಗು ನಿರ್ದೇಶಕ

Venkatesh Maha: ‘ಪ್ರೇಮಾ ದಿ ಜರ್ನಲಿಸ್ಟ್’ ಯೂಟ್ಯೂಬ್​ ಚಾನೆಲ್​ನಲ್ಲಿ ವೆಂಕಟೇಶ್ ಮಹಾ ಸೇರಿ ಅನೇಕರು ಭಾಗಿ ಆಗಿದ್ದರು. ಸಂದರ್ಶನದಲ್ಲಿ ಮಾತನಾಡುತ್ತಾ ಅವರು ‘ಕೆಜಿಎಫ್ 2’ ಚಿತ್ರದ ಬಗ್ಗೆ ಹಗುರವಾಗಿ ಮಾತನಾಡಿದ್ದರು.

‘ಕ್ಷಮಿಸಿ, ಆ ರೀತಿಯ ಭಾಷೆ ಬಳಕೆ ಮಾಡಬಾರದಿತ್ತು’; ‘ಕೆಜಿಎಫ್ 2’ ಬಗ್ಗೆ ಟೀಕೆ ಮಾಡಿ ಕ್ಷಮೆ ಕೇಳಿದ ತೆಲುಗು ನಿರ್ದೇಶಕ
ಯಶ್​-ವೆಂಕಟೇಶ್ ಮಹಾ
ರಾಜೇಶ್ ದುಗ್ಗುಮನೆ
|

Updated on:Mar 07, 2023 | 7:29 AM

Share

ಸೆಲೆಬ್ರಿಟಿಗಳು ಕೆಲ ವಿಚಾರಗಳ ಬಗ್ಗೆ ಮಾತನಾಡುವಾಗ, ಕೆಲ ವಿಷಯಗಳ ಕುರಿತು ಹೇಳಿಕೆ ನೀಡುವಾಗ ಅವರಿಗೆ ಮುಂದೇನಾಗುತ್ತದೆ ಎಂಬುದರ ಕಲ್ಪನೆ ಇರುವುದಿಲ್ಲ. ನಂತರ ವಿರೋಧ ವ್ಯಕ್ತವಾದ ಬಳಿಕ ಕ್ಷಮೆ ಕೇಳುತ್ತಾರೆ. ತೆಲುಗಿನ ನಿರ್ದೇಶಕ ವೆಂಕಟೇಶ್​ ಮಹಾ (Venkatesh Maha) ಕೂಡ ‘ಕೆಜಿಎಫ್ 2’ ಚಿತ್ರದ (KGF Chapter 2) ಬಗ್ಗೆ ಕೆಟ್ಟ ಶಬ್ದಗಳ ಪ್ರಯೋಗ ಮಾಡಿದ್ದರು. ಈ ಬಗ್ಗೆ ಸಾಕಷ್ಟು ವಿರೋಧ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಅವರು ಕ್ಷಮೆ ಕೇಳಿದ್ದಾರೆ. ಹೇಳಿಕೆಗೆ ಬದ್ಧವಾಗಿರುವುದಾಗಿ ಹೇಳಿರುವ ವೆಂಕಟೇಶ್​, ಬಳಕೆ ಮಾಡಿದ ಭಾಷೆಗೆ ಕ್ಷಮೆ ಕೇಳಿದ್ದಾರೆ.

‘ಪ್ರೇಮಾ ದಿ ಜರ್ನಲಿಸ್ಟ್’ ಯೂಟ್ಯೂಬ್​ ಚಾನೆಲ್​ನಲ್ಲಿ ವೆಂಕಟೇಶ್ ಮಹಾ ಸೇರಿ ಅನೇಕರು ಭಾಗಿ ಆಗಿದ್ದರು. ಸಂದರ್ಶನದಲ್ಲಿ ಮಾತನಾಡುತ್ತಾ ಅವರು ‘ಕೆಜಿಎಫ್ 2’ ಚಿತ್ರದ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಅವರು ಬಳಕೆ ಮಾಡಿದ ಶಬ್ದಕ್ಕೆ ಅನೇಕ ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಯಶ್ ಫ್ಯಾನ್ಸ್ ಸಿಟ್ಟಿಗೆದ್ದಿದ್ದರು. ನಿರ್ದೇಶಕನ ವಿರುದ್ಧ ಟ್ವೀಟ್​ಗಳ ಮೂಲಕ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದರು. ಈ ಬೆನ್ನಲ್ಲೇ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿ ಕ್ಷಮೆ ಕೇಳಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ಒಂದು ಸಂದರ್ಶನದಲ್ಲಿ ನಾನು ಎಕ್ಸ್​ಪ್ರೆಸ್​ ಮಾಡಿದ ನನ್ನ ಅಭಿಪ್ರಾಯ ಆಕ್ಷೇಪಾರ್ಹ ಎನಿಸಿದೆ. ಆ ವಿಚಾರದ ಬಗ್ಗೆ ಮಾತನಾಡುವುದಕ್ಕೆ ಬಂದಿದ್ದೇನೆ. ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನನ್ನ ಹೇಳಿಕೆಯನ್ನು ನಾನು ಹಿಂತೆಗೆದುಕೊಳ್ಳುತ್ತಿಲ್ಲ. ನಾನು ಆಡಿದ ಮಾತು ಸರಿ ಇರಲಿಲ್ಲ. ಜವಾಬ್ದಾರಿಯುತ ನಿರ್ದೇಶಕನಾಗಿ ಆ ರೀತಿಯ ಭಾಷೆ ಬಳಕೆ ಮಾಡಬಾರದಿತ್ತು’ ಎಂದು ಒಪ್ಪಿಕೊಂಡಿದ್ದಾರೆ ವೆಂಕಟೇಶ್.

ಇದನ್ನೂ ಓದಿ: Venkatesh Maha: ‘ಕೆಜಿಎಫ್​’ ಸಿನಿಮಾ ಬಗ್ಗೆ ಕೆಟ್ಟ ಪದಗಳಿಂದ ಟೀಕಿಸಿದ ತೆಲುಗು ನಿರ್ದೇಶಕ: ವಿಡಿಯೋ ವೈರಲ್​

‘ಅಭಿಮಾನಿಗಳಿಗೆ, ಸಿನಿಪ್ರಿಯರಿಗೆ ಭಾಷೆ ಸರಿ ಇಲ್ಲ ಎನಿಸಿಸುತ್ತಿದೆ. ನನ್ನ ಅಭಿಪ್ರಾಯವನ್ನು ಹೊರಹಾಕಲು ಬಳಕೆ ಮಾಡಿದ ಭಾಷೆ ವಿಚಾರವಾಗಿ ಕ್ಷಮೆ ಕೇಳುತ್ತಿದ್ದೇನೆ. ಇದು ಸಿನಿಮಾ ವಿಚಾರದ ಕುರಿತ ಚರ್ಚೆ ಆಗಿತ್ತು. ಅದೇ ಸಂದರ್ಶನದಲ್ಲಿ ಕನ್ನಡ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದೇನೆ. ನನಗೆ ನನ್ನ ಅಭಿಪ್ರಾಯ ಹೊರಹಾಕುವ ಹಕ್ಕು ಇದೆ. ಆದರೆ ಬಳಕೆ ಮಾಡಿದ ಭಾಷೆ ತಪ್ಪು ಎಂದಿದ್ದಾರೆ’ ವೆಂಕಟೇಶ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:20 am, Tue, 7 March 23

Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ