AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು’; AnanthnagForPadma ಆಂದೋಲನದ ಬಗ್ಗೆ ಅನಂತ್​ನಾಗ್​ ಪ್ರತಿಕ್ರಿಯೆ

#AnanthnagForPadma ಎಂಬ ಹ್ಯಾಷ್​ಟ್ಯಾಗ್​ನಡಿ ಟ್ವಿಟ್ಟರ್​ನಲ್ಲಿ ಅಭಿಯಾನ ನಡೆಯುತ್ತಿದೆ. ಸ್ಯಾಂಡಲ್​ವುಡ್ ನಿರ್ದೇಶಕ, ನಟರಾದ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಪುನೀತ್​ ರಾಜ್​ಕುಮಾರ್​ ಕೂಡ ಈ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. 

‘ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು’; AnanthnagForPadma ಆಂದೋಲನದ ಬಗ್ಗೆ ಅನಂತ್​ನಾಗ್​ ಪ್ರತಿಕ್ರಿಯೆ
‘ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು’; AnanthnagForPadma ಆಂದೋಲನದ ಬಗ್ಗೆ ಅನಂತ್​ನಾಗ್​ ಪ್ರತಿಕ್ರಿಯೆ
TV9 Web
| Edited By: |

Updated on: Jul 15, 2021 | 9:58 PM

Share

ಕನ್ನಡದ ಹಿರಿಯ ನಟ ಅನಂತ್​ ನಾಗ್​ ಅವರಿಗೆ ಪದ್ಮ ಪ್ರಶಸ್ತಿ ದೊರೆಯಬೇಕು ಎನ್ನುವ ಒತ್ತಾಯ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ. ಈ ಬಗ್ಗೆ ಸಾಕಷ್ಟು ಜನರು, ಸೆಲೆಬ್ರಿಟಿಗಳು ಟ್ವೀಟ್​ ಮಾಡುವ ಮೂಲಕ ತಮ್ಮ ಹಕ್ಕೊತ್ತಾಯ ಮಾಡಿದ್ದಾರೆ. ಈಗ ಈ ಅಭಿಯಾನದ ಬಗ್ಗೆ ಸ್ವತಃ ಅನಂತ್​ ನಾಗ್​ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳಿದ್ದೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬರಹಗಾರ ಜೋಗಿ ಹಾಗೂ ಅವರ ತಂಡ ನಡೆಸುತ್ತಿರುವ ಕ್ಲಬ್​ ಹೌಸ್​ನ ಹಾಲ್ಫ್​ ಸರ್ಕಲ್​ನಲ್ಲಿ ಮಾತನಾಡಿರುವ ಅನಂತ್​ ನಾಗ್​, ‘ನನಗೆ ಪ್ರಶಸ್ತಿ ಸಿಕ್ಕರೆ ಖುಷಿ ಆಗುತ್ತದೆ. ಅದು ಒಂದು ದಿನ ಮಾತ್ರ. ನಂತರ ಈ ಪ್ರಶಸ್ತಿ ಶೋಕೇಸ್​ ಸೇರುತ್ತದೆ. ಈ ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು. ಇದನ್ನು ನಾನು ಉಳಿಸಿಕೊಳ್ಳುವ ಪ್ರಯತ್ನ ಮಾಡ್ತೀನಿ’ ಎಂದಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಯೇ ದೊಡ್ಡದು ಎಂದು ಹೇಳಿದ್ದಾರೆ.

#AnanthnagForPadma ಎಂಬ ಹ್ಯಾಷ್​ಟ್ಯಾಗ್​ನಡಿ ಟ್ವಿಟ್ಟರ್​ನಲ್ಲಿ ಅಭಿಯಾನ ನಡೆಯುತ್ತಿದೆ. ಸ್ಯಾಂಡಲ್​ವುಡ್ ನಿರ್ದೇಶಕ, ನಟರಾದ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಪುನೀತ್​ ರಾಜ್​ಕುಮಾರ್​ ಕೂಡ ಈ ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

‘ನನ್ನ ನೆಚ್ಚಿನ ನಟರಲ್ಲಿ ಒಬ್ಬರಾದ ಅನಂತ್​​ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂಬುದು ನಮ್ಮೆಲ್ಲರ ಆಸೆ. ನಾನು ಅವರ ದೊಡ್ಡ ಅಭಿಮಾನಿ. ಸಿನಿಮಾ ರಂಗಕ್ಕೆ ಅನಂತನಾಗ್ ಕೊಡುಗೆ ಅಪಾರ’ ಎಂದಿದ್ದಾರೆ.

1973ರಲ್ಲಿ ತೆರೆಗೆ ಬಂದಿದ್ದ ‘ಸಂಕಲ್ಪ’ ಸಿನಿಮಾ ಮೂಲಕ ಅನಂತ್​ ನಾಗ್​ ಚಿತ್ರರಂಗಕ್ಕೆ ಕಾಲಿಟ್ಟರು. ಅವರ ವೃತ್ತಿ ಜೀವನದಲ್ಲಿ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದು ಅವರ ಹೆಚ್ಚುಗಾರಿಕೆ.ಅದ್ಭುತ ನಟನೆ ಮೂಲಕ ಅನಂತ್​ ನಾಗ್​ ಎಲ್ಲರ ಗಮನ ಸೆಳೆದಿದ್ದಾರೆ. ಪೋಷಕ ಪಾತ್ರದಲ್ಲಿ ನಟಿಸೋಕೆ ಅವರಿಗೆ ಭಾರೀ ಬೇಡಿಕೆ ಇದೆ.

ಇದನ್ನೂ ಓದಿ: Padma Awards: ಅನಂತ್ ​ನಾಗ್​ಗೆ ಪದ್ಮ ಪ್ರಶಸ್ತಿ ನೀಡಿ; ಸೆಲೆಬ್ರಿಟಿಗಳಿಂದಲೂ ಶುರುವಾಯ್ತು ಟ್ವಿಟ್ಟರ್​ ಅಭಿಯಾನ

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!