AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು’; AnanthnagForPadma ಆಂದೋಲನದ ಬಗ್ಗೆ ಅನಂತ್​ನಾಗ್​ ಪ್ರತಿಕ್ರಿಯೆ

#AnanthnagForPadma ಎಂಬ ಹ್ಯಾಷ್​ಟ್ಯಾಗ್​ನಡಿ ಟ್ವಿಟ್ಟರ್​ನಲ್ಲಿ ಅಭಿಯಾನ ನಡೆಯುತ್ತಿದೆ. ಸ್ಯಾಂಡಲ್​ವುಡ್ ನಿರ್ದೇಶಕ, ನಟರಾದ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಪುನೀತ್​ ರಾಜ್​ಕುಮಾರ್​ ಕೂಡ ಈ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. 

‘ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು’; AnanthnagForPadma ಆಂದೋಲನದ ಬಗ್ಗೆ ಅನಂತ್​ನಾಗ್​ ಪ್ರತಿಕ್ರಿಯೆ
‘ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು’; AnanthnagForPadma ಆಂದೋಲನದ ಬಗ್ಗೆ ಅನಂತ್​ನಾಗ್​ ಪ್ರತಿಕ್ರಿಯೆ
TV9 Web
| Edited By: |

Updated on: Jul 15, 2021 | 9:58 PM

Share

ಕನ್ನಡದ ಹಿರಿಯ ನಟ ಅನಂತ್​ ನಾಗ್​ ಅವರಿಗೆ ಪದ್ಮ ಪ್ರಶಸ್ತಿ ದೊರೆಯಬೇಕು ಎನ್ನುವ ಒತ್ತಾಯ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ. ಈ ಬಗ್ಗೆ ಸಾಕಷ್ಟು ಜನರು, ಸೆಲೆಬ್ರಿಟಿಗಳು ಟ್ವೀಟ್​ ಮಾಡುವ ಮೂಲಕ ತಮ್ಮ ಹಕ್ಕೊತ್ತಾಯ ಮಾಡಿದ್ದಾರೆ. ಈಗ ಈ ಅಭಿಯಾನದ ಬಗ್ಗೆ ಸ್ವತಃ ಅನಂತ್​ ನಾಗ್​ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳಿದ್ದೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬರಹಗಾರ ಜೋಗಿ ಹಾಗೂ ಅವರ ತಂಡ ನಡೆಸುತ್ತಿರುವ ಕ್ಲಬ್​ ಹೌಸ್​ನ ಹಾಲ್ಫ್​ ಸರ್ಕಲ್​ನಲ್ಲಿ ಮಾತನಾಡಿರುವ ಅನಂತ್​ ನಾಗ್​, ‘ನನಗೆ ಪ್ರಶಸ್ತಿ ಸಿಕ್ಕರೆ ಖುಷಿ ಆಗುತ್ತದೆ. ಅದು ಒಂದು ದಿನ ಮಾತ್ರ. ನಂತರ ಈ ಪ್ರಶಸ್ತಿ ಶೋಕೇಸ್​ ಸೇರುತ್ತದೆ. ಈ ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು. ಇದನ್ನು ನಾನು ಉಳಿಸಿಕೊಳ್ಳುವ ಪ್ರಯತ್ನ ಮಾಡ್ತೀನಿ’ ಎಂದಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಯೇ ದೊಡ್ಡದು ಎಂದು ಹೇಳಿದ್ದಾರೆ.

#AnanthnagForPadma ಎಂಬ ಹ್ಯಾಷ್​ಟ್ಯಾಗ್​ನಡಿ ಟ್ವಿಟ್ಟರ್​ನಲ್ಲಿ ಅಭಿಯಾನ ನಡೆಯುತ್ತಿದೆ. ಸ್ಯಾಂಡಲ್​ವುಡ್ ನಿರ್ದೇಶಕ, ನಟರಾದ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಪುನೀತ್​ ರಾಜ್​ಕುಮಾರ್​ ಕೂಡ ಈ ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

‘ನನ್ನ ನೆಚ್ಚಿನ ನಟರಲ್ಲಿ ಒಬ್ಬರಾದ ಅನಂತ್​​ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂಬುದು ನಮ್ಮೆಲ್ಲರ ಆಸೆ. ನಾನು ಅವರ ದೊಡ್ಡ ಅಭಿಮಾನಿ. ಸಿನಿಮಾ ರಂಗಕ್ಕೆ ಅನಂತನಾಗ್ ಕೊಡುಗೆ ಅಪಾರ’ ಎಂದಿದ್ದಾರೆ.

1973ರಲ್ಲಿ ತೆರೆಗೆ ಬಂದಿದ್ದ ‘ಸಂಕಲ್ಪ’ ಸಿನಿಮಾ ಮೂಲಕ ಅನಂತ್​ ನಾಗ್​ ಚಿತ್ರರಂಗಕ್ಕೆ ಕಾಲಿಟ್ಟರು. ಅವರ ವೃತ್ತಿ ಜೀವನದಲ್ಲಿ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದು ಅವರ ಹೆಚ್ಚುಗಾರಿಕೆ.ಅದ್ಭುತ ನಟನೆ ಮೂಲಕ ಅನಂತ್​ ನಾಗ್​ ಎಲ್ಲರ ಗಮನ ಸೆಳೆದಿದ್ದಾರೆ. ಪೋಷಕ ಪಾತ್ರದಲ್ಲಿ ನಟಿಸೋಕೆ ಅವರಿಗೆ ಭಾರೀ ಬೇಡಿಕೆ ಇದೆ.

ಇದನ್ನೂ ಓದಿ: Padma Awards: ಅನಂತ್ ​ನಾಗ್​ಗೆ ಪದ್ಮ ಪ್ರಶಸ್ತಿ ನೀಡಿ; ಸೆಲೆಬ್ರಿಟಿಗಳಿಂದಲೂ ಶುರುವಾಯ್ತು ಟ್ವಿಟ್ಟರ್​ ಅಭಿಯಾನ

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ