AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

K Shivaram Passes Away: ನಟ, ರಾಜಕಾರಣಿ ಕೆ. ಶಿವರಾಮ್ ನಿಧನ; ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹೀರೋ

ಖ್ಯಾತ ನಟ, ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ್‌ ನಿಧನ: ಶಿವರಾಮ್ ಅವರಿಗೆ ಇತ್ತೀಚೆಗೆ ಹೃದಯಾಘಾತ ಆಯಿತು. ಹೀಗಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಸಾವಿಗೂ ಮುನ್ನ ಅವರ ಮಿದುಳು ಕೂಡ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿಬಿಟ್ಟಿತ್ತು. ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಪ್ರಯೋಜನ ಆಗಿಲ್ಲ.

K Shivaram Passes Away: ನಟ, ರಾಜಕಾರಣಿ ಕೆ. ಶಿವರಾಮ್ ನಿಧನ; ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹೀರೋ
ಶಿವರಾಮ್
ರಾಜೇಶ್ ದುಗ್ಗುಮನೆ
| Edited By: |

Updated on: Feb 29, 2024 | 5:55 PM

Share

ಖ್ಯಾತ ನಟ, ಮಾಜಿ ಐಎಎಸ್​ ಅಧಿಕಾರಿ, ರಾಜಕಾರಣಿ ಕೆ. ಶಿವರಾಮ್ (K Shivaram) ಅವರು ಇಂದು (ಫೆಬ್ರವರಿ 29) ನಿಧನ ಹೊಂದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಗಣ್ಯರು ಹಾಗು ರಾಜಕಾರಣಿಗಳು ಕೋರುತ್ತಿದ್ದಾರೆ. ನಿಧನ ಹೊಂದುವುದಕ್ಕೂ ಮೊದಲು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ವೈದ್ಯರು ಎಷ್ಟೇ ಪ್ರಯತ್ನಿಸದರೂ ಶಿವರಾಮ್ ಅವರನ್ನು ಬದುಕಿಸಲು ಸಾಧ್ಯವಾಗಿಲ್ಲ.

ಶಿವರಾಮ್ ಅವರಿಗೆ 15 ದಿನಗಳ ಹಿಂದೆ ಅಧಿಕ ರಕ್ತದೊತ್ತಡದಿಂದ ಸಮಸ್ಯೆ ಆಗಿತ್ತು. ಇತ್ತೀಚೆಗೆ ಹೃದಯಾಘಾತ ಆಯಿತು. ಹೀಗಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಸಾವಿಗೂ ಮುನ್ನ ಅವರ ಮಿದುಳು ಕೂಡ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿಬಿಟ್ಟಿತ್ತು. ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಯಿತು. ಈಗ ಅವರು ಮೃತಪಟ್ಟಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ಶಿವರಾಮ್ ಅವರು ಜನಿಸಿದ್ದು, 1953ರ ಏಪ್ರಿಲ್ 6ರಂದು. ರಾಮನಗರ ಅವರ ಹುಟ್ಟೂರು. ತಮ್ಮ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಪ್ರೌಢ ಶಿಕ್ಷಣ ಪಡೆಯಲು ಬೆಂಗಳೂರಿಗೆ ಬಂದರು. 1985ರಲ್ಲಿ ಅವರು ಕೆಎಎಸ್ ಪಾಸ್ ಮಾಡಿ, ಡಿಎಸ್​ಪಿ ಆದರು. ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವಾಗಲೇ ಯುಪಿಎಸ್​​ಸಿ ಪಾಸ್ ಮಾಡಿದರು. ಈ ಮೂಲಕ ಐಎಎಸ್​ ಅಧಿಕಾರಿ ಆದರು. ಕನ್ನಡ ಭಾಷೆಯಲ್ಲಿ ಐಎಎಸ್ ಪಾಸ್ ಮಾಡಿದ ಮೊದಲ ವ್ಯಕ್ತಿ ಎನ್ನುವ ಹೆಮ್ಮೆ ಶಿವರಾಮ್​ಗೆ ಇದೆ. 1986ರಿಂದ 2013ರವರೆಗೆ ಅವರು ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಕೆ. ಶಿವರಾಮ್ ನೋಡಲು ಆಸ್ಪತ್ರೆಗೆ ಬಂದ ಮಾಜಿ ಸಿಎಂ ಯಡಿಯೂರಪ್ಪ

ಈ ಮಧ್ಯೆ ಶಿವರಾಮ್ ಅವರಿಗೆ ಸಿನಿಮಾಸಕ್ತಿಯೂ ಬೆಳೆದಿತ್ತು. 1993ರ ಸೂಪರ್ ಹಿಟ್ ಸಿನಿಮಾ ‘ಬಾ ನಲ್ಲೆ ಮಧುಚಂದ್ರಕೆ’ ಚಿತ್ರದಲ್ಲಿ ನಟಿಸಿ ಗೆಲುವು ಕಂಡರು. ನಂತರ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. 2017ರಲ್ಲಿ ರಿಲೀಸ್ ಆದ ‘ಟೈಗರ್’ ಅವರ ನಟನೆಯ ಕೊನೆಯ ಸಿನಿಮಾ.

ರಾಜಕೀಯ ಬದುಕು

2013ರಲ್ಲಿ ಶಿವರಾಮ್ ಅವರು ಕಾಂಗ್ರೆಸ್ ಸೇರಿದರು. 2014ರಲ್ಲಿ ಜೆಡಿಎಸ್ ಸೇರಿದ ಅವರು, ಬಿಜಾಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದರು. ರಮೇಶ್ ಜಿಗಜಿಣಗಿ ವಿರುದ್ಧ ಸೋತರು.   ಅದೇ ವರ್ಷ ಅವರು ಮರಳಿ ಕಾಂಗ್ರೆಸ್​ಗೆ ಬಂದರು. ಅದೇ ವರ್ಷ ಅಕ್ಟೋಬರ್ ತಿಂಗಳಲ್ಲಿ ಬಿಜೆಪಿ ಸೇರಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ