AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್‌ ಭೇಟಿಮಾಡಿದ ಬಳಿಕ ಅನುಪಮ್ ಖೇರ್ ಫುಲ್ ಖುಷ್; ‘ಟಾಕ್ಸಿಕ್’ ಚಿತ್ರಕ್ಕೆ ಶುಭಹಾರೈಕೆ

ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಅವರು ರಾಕಿಂಗ್ ಸ್ಟಾರ್ ಯಶ್ ಅವರನ್ನು ಭೇಟಿಯಾಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಯಶ್ ಅವರ ವಿನಮ್ರ ವ್ಯಕ್ತಿತ್ವ ಹಾಗೂ ಸಿನಿಮಾ ಪಯಣವನ್ನು ಶ್ಲಾಘಿಸಿರುವ ಅವರು, ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಭಾರಿ ಯಶಸ್ಸು ಕಾಣಲಿ ಎಂದು ಪ್ರೀತಿಯಿಂದ ಶುಭಹಾರೈಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಯಶ್‌ ಭೇಟಿಮಾಡಿದ ಬಳಿಕ ಅನುಪಮ್ ಖೇರ್ ಫುಲ್ ಖುಷ್; ‘ಟಾಕ್ಸಿಕ್’ ಚಿತ್ರಕ್ಕೆ ಶುಭಹಾರೈಕೆ
ಯಶ್-ಅನುಪಮ್
ರಾಜೇಶ್ ದುಗ್ಗುಮನೆ
|

Updated on: Aug 24, 2026 | 12:41 PM

Share

ಮುಖ್ಯಾಂಶಗಳು

  • ರಾಕಿಂಗ್ ಸ್ಟಾರ್ ಯಶ್ ಭೇಟಿಯಾದ ಅನುಪಮ್ ಖೇರ್
  • ‘ಸ್ಕ್ರೀನ್ ಮೇಲೆ ಮಾಸ್, ರಿಯಲ್ ಲೈಫ್‌ನಲ್ಲಿ ವಿನಮ್ರ’
  • ‘ಟಾಕ್ಸಿಕ್’ ಸಿನಿಮಾಗೆ ಬಾಲಿವುಡ್ ದಿಗ್ಗಜನ ಆಶೀರ್ವಾದ 

ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಅವರು ಇತ್ತೀಚೆಗೆ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು (Yash) ಭೇಟಿಯಾಗಿದ್ದು, ಈ ಸುಂದರ ಕ್ಷಣಗಳ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಯಶ್ ಅವರನ್ನು ಭೇಟಿಯಾಗಿದ್ದು ತಮಗೆ ಅತ್ಯಂತ ಸಂತೋಷ ತಂದಿದೆ ಎಂದು ಬರೆದುಕೊಂಡಿರುವ ಅನುಪಮ್ ಖೇರ್, ಅವರೊಂದಿಗಿನ ಸಂಭಾಷಣೆ ಹಾಗೂ ಯಶ್ ಅವರ ವ್ಯಕ್ತಿತ್ವವನ್ನು ಮುಕ್ತಕಂಠದಿಂದ ಹೊಗಳಿದ್ದಾರೆ.

ಸ್ಟುಡಿಯೋ ಒಂದರಲ್ಲಿ ನಡೆದ ಈ ಆತ್ಮೀಯ ಭೇಟಿಯಲ್ಲಿ ಇಬ್ಬರೂ ನಟರು ಸಿನಿಮಾ, ಜೀವನ, ಹೆತ್ತವರು, ಕುಟುಂಬ ಹಾಗೂ ಕನಸುಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ. ‘ಕೆಜಿಎಫ್’ ಸರಣಿಯ ಮೂಲಕ ರಾಕಿ ಭಾಯ್ ಪಾತ್ರಕ್ಕೆ ಯಶ್ ಜೀವ ತುಂಬಿದ ರೀತಿಯನ್ನು ಶ್ಲಾಘಿಸಿದ್ದಾರೆ.

ತೆರೆಮೇಲೆ ಅಷ್ಟೊಂದು ಪವರ್‌ಫುಲ್ ಆಗಿ ಕಾಣಿಸುವ ಯಶ್ ನಿಜಜೀವನದಲ್ಲಿ ಅತ್ಯಂತ ವಿನಮ್ರ ಹಾಗೂ ಚಿಂತನಶೀಲ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಹೊಸ ತಲೆಮಾರಿನ ಪ್ರತಿಭಾವಂತ ನಟರ ಉತ್ಸಾಹ ಮತ್ತು ಶ್ರಮ ತಮಗೂ ಹೊಸ ಶಕ್ತಿ ನೀಡುತ್ತದೆ ಎಂದು ಅವರು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಚೆನ್ನೈನಲ್ಲಿ ‘ಟಾಕ್ಸಿಕ್’ ಪ್ರೀ-ರಿಲೀಸ್ ಈವೆಂಟ್; ತಮಿಳುನಾಡಿನಲ್ಲೂ ಯಶ್ ಹವಾ

ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಅತ್ಯಂತ ದೊಡ್ಡ ಯಶಸ್ಸು ಕಾಣಲಿ ಮತ್ತು ಪ್ರೇಕ್ಷಕರಿಂದ ಅಪಾರ ಪ್ರೀತಿ ಗಳಿಸಲಿ ಎಂದು ಅನುಪಮ್ ಖೇರ್ ಆಶೀರ್ವದಿಸಿ ಶುಭಹಾರೈಸಿದ್ದಾರೆ. ಈ ದಿಗ್ಗಜ ನಟರ ಭೇಟಿಯ ಫೋಟೋಗಳು ಹಾಗೂ ಅನುಪಮ್ ಖೇರ್ ಅವರ ಸಾಲುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಲೈಕ್ಸ್ ಹಾಗೂ ಕಾಮೆಂಟ್‌ಗಳ ಮೂಲಕ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್