AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಹಾಸಿನಿ ಸರಳತೆಗೆ ಅವರೇ ಸಾಟಿ; ಬೀದಿ ಬದಿ ಕಲಾವಿದನ ಹಾಡನ್ನು ಶ್ರದ್ಧೆಯಿಂದ ಕೇಳಿ ಮೆಚ್ಚಿದ ನಟಿ

ಪ್ರಸಿದ್ಧ ನಟಿ ಸುಹಾಸಿನಿ ಅವರ ಸರಳತೆ ಮತ್ತು ಕಲಾವಿದರನ್ನು ಗೌರವಿಸುವ ರೀತಿ ಜನರನ್ನು ಸೆಳೆದಿದೆ. ದಾರಿಯಲ್ಲಿ ಹಾಡುವ ಕಲಾವಿದನಿಗೆ ಗೌರವ ತೋರಿದ ವಿಡಿಯೋ ವೈರಲ್ ಆಗಿದೆ.ಇದರಿಂದ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಜನಪ್ರಿಯರಾಗಿದ್ದಾರೆ. ಕನ್ನಡದಲ್ಲಿ ಅವರು ‘ಬಂಧನ’, ‘ಮುತ್ತಿನ ಹಾರ’ ರೀತಿಯ ಸಿನಿಮಾಗಳನ್ನು ನೀಡಿದರು.

ಸುಹಾಸಿನಿ ಸರಳತೆಗೆ ಅವರೇ ಸಾಟಿ; ಬೀದಿ ಬದಿ ಕಲಾವಿದನ ಹಾಡನ್ನು ಶ್ರದ್ಧೆಯಿಂದ ಕೇಳಿ ಮೆಚ್ಚಿದ ನಟಿ
ಸುಹಾಸಿನಿ
ರಾಜೇಶ್ ದುಗ್ಗುಮನೆ
|

Updated on: May 30, 2025 | 7:10 AM

Share

ಹಿರಿಯ ನಟಿ ಸುಹಾಸಿನಿ (Suhasini) ಅವರು ಕನ್ನಡ, ತಮಿಳು ಸೇರಿದಂತೆ ಅನೇಕ ಭಾಷಿಗರಿಗೆ ಪರಿಚಯ ಇದ್ದಾರೆ. ಅವರು ಯಾವಾಗಲೂ ತಮ್ಮ ಸರಳತೆಯ ಕಾರಣದಿಂದ ಪ್ರೇಕ್ಷಕರಿಗೆ ಇಷ್ಟ ಆಗುತ್ತಾರೆ. ಈಗ ಅವರ ಸರಳತೆಗೆ ಮತ್ತು ಕಲಾವಿದರನ್ನು ಗೌರವಿಸುವ ರೀತಿಗೆ ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ನಟಿ ಸುಹಾಸಿನಿ ಸರಳತೆಯನ್ನು ನೋಡಿ ಎಲ್ಲರೂ ಕೊಂಡಾಡುತ್ತಿದ್ದಾರೆ.

ಸಾಮಾನ್ಯವಾಗಿ ದೊಡ್ಡ ಸೆಲೆಬ್ರಿಟಿಗಳು ಹಾಗೆಲ್ಲ ಕೈಗೆ ಸಿಗೋದಿಲ್ಲ. ದೊಡ್ಡ ದೊಡ್ಡ ಕಾರ್ಯಕ್ರಮದಲ್ಲಿ ಅವರು ಕಾಣ ಸಿಗುತ್ತಾರೆ. ಸುಹಾಸಿನಿ ಅವರು ಎಷ್ಟೇ ಜನಪ್ರಿಯತೆ ಪಡೆದಿದ್ದರು, ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಪತಿ ಎನಿಸಿಕೊಂಡರೂ ಜನ ಸಾಮಾನ್ಯರನ್ನು ಭೇಟಿ ಆಗುತ್ತಾರೆ. ವಿಮಾನ ನಿಲ್ದಾಣದಲ್ಲಿ ಅವರು ಭೇಟಿ ಆದರೆ ಅಭಿಮಾನಿಗಳ ಬಳಿ ಮಾತನಾಡುತ್ತಾರೆ, ಆಟೋಗ್ರಾಫ್​ ನೀಡುತ್ತಾರೆ, ಸೆಲ್ಫಿಗೆ ಪೋಸ್ ಕೊಡುತ್ತಾರೆ. ಇದು ಅವರ ಸರಳತೆಗೆ ಹಿಡಿದ ಕನ್ನಡಿ.

ಇದನ್ನೂ ಓದಿ: ‘ನಾನು ನಿಮ್ಮ ದೊಡ್ಡ ಅಭಿಮಾನಿ’; ಮಣಿರತ್ನಂನಿಂದ ಸಾಯಿ ಪಲ್ಲವಿಗೆ ವಿಶೇಷ ಮೆಚ್ಚುಗೆ

ಇದನ್ನೂ ಓದಿ
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?
Image
ಕಿಚ್ಚ ಸುದೀಪ್-ರಾಜೇಶ್ ಕೃಷ್ಣನ್ ಹಾಡಿನ್ ಜುಗಲ್​ಬಂದಿ; ಅಪರೂಪದ ವಿಡಿಯೋ
Image
ಎ,ಓಂ ಚಿತ್ರವನ್ನು ನಾನು ಮಾಡಿದ್ದರೆ ನಿವೃತ್ತಿ ಪಡೆಯುತ್ತಿದ್ದೆ; ಸುಕುಮಾರ್
Image
ಪವನ್ ಕಲ್ಯಾಣ್ ನಟನೆಯ ‘ಒಜಿ’ ಚಿತ್ರಕ್ಕೆ ಸೊಳ್ಳೆ ಕಾಟ; ಶೂಟಿಂಗ್ ಸ್ಥಗಿತ

ಇತ್ತೀಚೆಗೆ ಸುಹಾಸಿನಿ ಅವರು ದಾರಿಬದಿಯಲ್ಲಿ ನಿಂತು ಹನುಮಂತನ ವೇಷ ಧರಿಸಿ ಬಂದ ವ್ಯಕ್ತಿಯ ಹಾಡನ್ನು ಕೇಳಿದ್ದಾರೆ. ಈ ಹಾಡಿಗೆ ಅವರು ತಲೆದೂಗಿದ್ದಾರೆ. ಅತ್ಯಂತ ಶ್ರದ್ಧೆಯಿಂದ ಹಾಡನ್ನು ಆಲಿಸಿದ ಬಳಿಕ ಅವರು ಕಲಾವಿದನಿಗೆ ಧನ್ಯವಾದ ಹೇಳಿದ್ದಾರೆ. ಸುಹಾಸಿನಿ ಅವರು ಸಣ್ಣ ಕಲಾವಿದರನ್ನೂ ಎಷ್ಟು ಗೌರವಿಸುತ್ತಾರೆ ಎಂಬುದಕ್ಕೆ ಇದು ಒಂದು ಒಳ್ಳೆಯ ನಿದರ್ಶನ. ಈ ವಿಡಿಯೋ ಸಾಕಷ್ಟು ಲೈಕ್ಸ್ ಪಡೆದುಕೊಂಡಿದೆ.

ಸುಹಾಸಿನಿ ಹುಟ್ಟಿದ್ದು ತಮಿಳುನಾಡಿನಲ್ಲಿ. ಅವರು 1980ರಲ್ಲಿ ‘ನೆಂಜತಾಯ್ ಕಿಲ್ಲತ್ತೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಬಂದರು. 1981ರಲ್ಲಿ  ‘ಕೊತ್ತ ಜೀವಿತಲು’ ಸಿನಿಮಾದ ಮೂಲಕ ತೆಲುಗು ರಂಗ ಪ್ರವೇಶಿಸಿದರು. 1983ರಲ್ಲಿ ‘ಬೆಂಕಿಯಲ್ಲಿ ಅರಳಿದ ಹೂವು’ ಸಿನಿಮಾ ಮೂಲಕ ಕನ್ನಡಕ್ಕೆ ಪರಿಚಯ ಆದರು. ಕನ್ನಡದಲ್ಲಿ ಅವರು ‘ಬಂಧನ’, ‘ಮುತ್ತಿನ ಹಾರ’ ರೀತಿಯ ಸಿನಿಮಾಗಳನ್ನು ನೀಡಿದರು. 1997ರಲ್ಲಿ ಬಂದ ‘ಅಮೃತವರ್ಷಿಣಿ’ ಚಿತ್ರ ಈಗಲೂ ಅನೇಕರ ಫೇವರಿಟ್ ಸಿನಿಮಾ. ಈ ಚಿತ್ರದಲ್ಲಿ ಸುಹಾಸಿನಿ, ರಮೇಶ್ ಅರವಿಂದ್ ಹಾಗೂ ಶರತ್ ಬಾಬು ನಟಿಸಿದ್ದರು. 1988ರಲ್ಲಿ ಸುಹಾಸಿನಿ ಮಣಿರತ್ನಂ ಅವರನ್ನು ವಿವಾಹ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!