AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SK Bhagavan Funeral: ವಿಲ್ಸನ್​ ಗಾರ್ಡನ್​ನಲ್ಲಿ ಎಸ್​.ಕೆ. ಭಗವಾನ್​ ಅಂತ್ಯಕ್ರಿಯೆ; ಅಂತಿಮ ವಿದಾಯ ಹೇಳಿದ ಸೆಲೆಬ್ರಿಟಿಗಳು

SK Bhagavan | Dorai Bhagavan Funeral: ಅಯ್ಯಂಗಾರ್​ ಸಂಪ್ರದಾಯದಂತೆ ಎಸ್​.ಕೆ. ಭಗವಾನ್​ ಅವರ ಪುತ್ರರು ಅಂತಿಮ ವಿಧಿ ವಿಧಾನ ನೆರವೇರಿಸಿದರು. ವಿಲ್ಸನ್​ ಗಾರ್ಡನ್​ ವಿದ್ಯುತ್​ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

SK Bhagavan Funeral: ವಿಲ್ಸನ್​ ಗಾರ್ಡನ್​ನಲ್ಲಿ ಎಸ್​.ಕೆ. ಭಗವಾನ್​ ಅಂತ್ಯಕ್ರಿಯೆ; ಅಂತಿಮ ವಿದಾಯ ಹೇಳಿದ ಸೆಲೆಬ್ರಿಟಿಗಳು
ಎಸ್.ಕೆ. ಭಗವಾನ್
ಮದನ್​ ಕುಮಾರ್​
|

Updated on:Feb 20, 2023 | 6:10 PM

Share

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್​.ಕೆ. ಭಗವಾನ್​ (SK Bhagavan) ಅವರನ್ನು ಕಳೆದುಕೊಂಡಿರುವುದು ನೋವಿನ ಸಂಗತಿ. ಇಂದು (ಫೆ.20) ನಿಧನರಾದ ಅವರಿಗೆ ಚಂದನವನದ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಹಾಗೂ ಕುಟುಂಬದವರು ಅಂತಿಮ ವಿದಾಯ ಹೇಳಿದ್ದಾರೆ. ವಿಲ್ಸನ್​ ಗಾರ್ಡನ್​ ಚಿತಾಗಾರದಲ್ಲಿ ಎಸ್​.ಕೆ. ಭಗವಾನ್​ ಅವರ ಅಂತ್ಯಕ್ರಿಯೆ (SK Bhagavan Funeral) ನಡೆದಿದೆ. ಸಂಜೆ 5 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಗಿದ್ದು, ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ದೊರೈ-ಭಗವಾನ್​ (Dorai Bhagavan) ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಹಲವು ಸೂಪರ್​ ಹಿಟ್​ ಸಿನಿಮಾಗಳ ಮೂಲಕ ಅವರು ಚಂದನವನವನ್ನು ಶ್ರೀಮಂತಗೊಳಿಸಿದ್ದರು.

ಎಸ್​.ಕೆ. ಭಗವಾನ್​ ಅವರಿಗೆ 90 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಜಾನೆ 6 ಗಂಟೆಗೆ ಕೊನೆಯುಸಿರು ಎಳೆದರು. ಅವರ ನಿಧನದ ಸುದ್ದಿ ತಿಳಿದು ಅನೇಕ ಗಣ್ಯರು ಸಂತಾಪ ಸೂಚಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಕಂಬನಿ ಮಿಡಿದರು.

ಇದನ್ನೂ ಓದಿ: SK Bhagavan: ಖ್ಯಾತ ಹಿರಿಯ ನಿರ್ದೇಶಕ ಎಸ್​ಕೆ ಭಗವಾನ್​ ದೊರೈ ಭಗವಾನ್​​ ಆಗಿದ್ದು ಹೇಗೆ? ಇಲ್ಲಿದೆ ಕುತೂಹಲಕಾರಿ ಸಂಗತಿ

ಇದನ್ನೂ ಓದಿ
Image
Dorai Bhagavan: ‘ಡಾ. ರಾಜ್​​ ಕುಟುಂಬಕ್ಕೆ ಬಲಗೈ ಬಂಟ ಆಗಿದ್ದರು’: ಎಸ್​.ಕೆ. ಭಗವಾನ್​​ ಕುರಿತ ನೆನಪು ತೆರೆದಿಟ್ಟ ಚಿನ್ನೇಗೌಡ
Image
SK Bhagavan: ಕನ್ನಡದಲ್ಲಿ ಮೊಟ್ಟಮೊದಲ ಬಾಂಡ್ ಶೈಲಿ ಸಿನಿಮಾ ತಯಾರಿಸಿದ ದೊರೆ-ಭಗವಾನ್ ಜೋಡಿಯ ಭಗವಾನ್ ಇನ್ನಿಲ್ಲ
Image
SK Bhagavan: ಖ್ಯಾತ ಹಿರಿಯ ನಿರ್ದೇಶಕ ಎಸ್​ಕೆ ಭಗವಾನ್​ ದೊರೈ ಭಗವಾನ್​​ ಆಗಿದ್ದು ಹೇಗೆ? ಇಲ್ಲಿದೆ ಕುತೂಹಲಕಾರಿ ಸಂಗತಿ
Image
SK Bhagavan: ಚಿತ್ರರಂಗದಲ್ಲಿ ಮುಗಿಯಿತು ಭಗವಾನ್ ಅಧ್ಯಾಯ; ಖ್ಯಾತ ನಿರ್ದೇಶಕ ನಿಧನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್​.ಕೆ. ಭಗವಾನ್​ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಬಂದು ಅಂತಿಮ ನಮನ ಸಲ್ಲಿಸಿದರು. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​, ಸುಂದರ್​ ರಾಜ್​, ಅನಂತ್​ ನಾಗ್​, ಗಣೇಶ್​ ಮುಂತಾದ ಕಲಾವಿದರು ಹಿರಿಯ ನಿರ್ದೇಶಕನ ಅಂತಿಮ ದರ್ಶನ ಪಡೆದರು.

ಇದನ್ನೂ ಓದಿ: Dorai Bhagavan: ‘ಡಾ. ರಾಜ್​​ ಕುಟುಂಬಕ್ಕೆ ಬಲಗೈ ಬಂಟ ಆಗಿದ್ದರು’: ಎಸ್​.ಕೆ. ಭಗವಾನ್​​ ಕುರಿತ ನೆನಪು ತೆರೆದಿಟ್ಟ ಚಿನ್ನೇಗೌಡ

ಸಂಜೆ ನಾಲ್ಕು ಗಂಟೆಗೆ ರವೀಂದ್ರ ಕಲಾಕ್ಷೇತ್ರದಿಂದ ವಿಲ್ಸನ್​ ಗಾರ್ಡನ್​ ಚಿತಾಗಾರಕ್ಕೆ ಎಸ್​.ಕೆ. ಭಗವಾನ್​ ಅವರ ಪಾರ್ಥೀವ ಶರೀರವನ್ನು ತರಲಾಯಿತು. ಅಯ್ಯಂಗಾರ್​ ಸಂಪ್ರದಾಯದಂತೆ ಪುತ್ರರು ಅಂತಿಮ ವಿಧಿ ವಿಧಾನ ಕಾರ್ಯಗಳನ್ನು ನೆರವೇರಿಸಿದರು. ವಿದ್ಯುತ್​ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

ನೇತ್ರದಾನ ಮಾಡಿದ ನಿರ್ದೇಶಕ ಭಗವಾನ್​:

ಎಸ್​.ಕೆ. ಭಗವಾನ್​ ಅವರು ಡಾ. ರಾಜ್​ಕುಮಾರ್​ ಅವರಿಗೆ ತುಂಬ ಆಪ್ತರಾಗಿದ್ದರು. ಅಣ್ಣಾವ್ರ ರೀತಿಯೇ ಭಗವಾನ್​ ಕೂಡ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ. ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ. ಬಹಳ ಹಿಂದೆಯೇ ಅವರು ನೇತ್ರದಾನಕ್ಕೆ ನೋಂದಣಿ ಮಾಡಿದ್ದರು. ಇದರಿಂದ ನಾಲ್ಕು ಮಂದಿಗೆ ದೃಷ್ಟಿ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:10 pm, Mon, 20 February 23

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ