AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SK Bhagavan Funeral: ವಿಲ್ಸನ್​ ಗಾರ್ಡನ್​ನಲ್ಲಿ ಎಸ್​.ಕೆ. ಭಗವಾನ್​ ಅಂತ್ಯಕ್ರಿಯೆ; ಅಂತಿಮ ವಿದಾಯ ಹೇಳಿದ ಸೆಲೆಬ್ರಿಟಿಗಳು

SK Bhagavan | Dorai Bhagavan Funeral: ಅಯ್ಯಂಗಾರ್​ ಸಂಪ್ರದಾಯದಂತೆ ಎಸ್​.ಕೆ. ಭಗವಾನ್​ ಅವರ ಪುತ್ರರು ಅಂತಿಮ ವಿಧಿ ವಿಧಾನ ನೆರವೇರಿಸಿದರು. ವಿಲ್ಸನ್​ ಗಾರ್ಡನ್​ ವಿದ್ಯುತ್​ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

SK Bhagavan Funeral: ವಿಲ್ಸನ್​ ಗಾರ್ಡನ್​ನಲ್ಲಿ ಎಸ್​.ಕೆ. ಭಗವಾನ್​ ಅಂತ್ಯಕ್ರಿಯೆ; ಅಂತಿಮ ವಿದಾಯ ಹೇಳಿದ ಸೆಲೆಬ್ರಿಟಿಗಳು
ಎಸ್.ಕೆ. ಭಗವಾನ್
ಮದನ್​ ಕುಮಾರ್​
|

Updated on:Feb 20, 2023 | 6:10 PM

Share

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್​.ಕೆ. ಭಗವಾನ್​ (SK Bhagavan) ಅವರನ್ನು ಕಳೆದುಕೊಂಡಿರುವುದು ನೋವಿನ ಸಂಗತಿ. ಇಂದು (ಫೆ.20) ನಿಧನರಾದ ಅವರಿಗೆ ಚಂದನವನದ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಹಾಗೂ ಕುಟುಂಬದವರು ಅಂತಿಮ ವಿದಾಯ ಹೇಳಿದ್ದಾರೆ. ವಿಲ್ಸನ್​ ಗಾರ್ಡನ್​ ಚಿತಾಗಾರದಲ್ಲಿ ಎಸ್​.ಕೆ. ಭಗವಾನ್​ ಅವರ ಅಂತ್ಯಕ್ರಿಯೆ (SK Bhagavan Funeral) ನಡೆದಿದೆ. ಸಂಜೆ 5 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಗಿದ್ದು, ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ದೊರೈ-ಭಗವಾನ್​ (Dorai Bhagavan) ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಹಲವು ಸೂಪರ್​ ಹಿಟ್​ ಸಿನಿಮಾಗಳ ಮೂಲಕ ಅವರು ಚಂದನವನವನ್ನು ಶ್ರೀಮಂತಗೊಳಿಸಿದ್ದರು.

ಎಸ್​.ಕೆ. ಭಗವಾನ್​ ಅವರಿಗೆ 90 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಜಾನೆ 6 ಗಂಟೆಗೆ ಕೊನೆಯುಸಿರು ಎಳೆದರು. ಅವರ ನಿಧನದ ಸುದ್ದಿ ತಿಳಿದು ಅನೇಕ ಗಣ್ಯರು ಸಂತಾಪ ಸೂಚಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಕಂಬನಿ ಮಿಡಿದರು.

ಇದನ್ನೂ ಓದಿ: SK Bhagavan: ಖ್ಯಾತ ಹಿರಿಯ ನಿರ್ದೇಶಕ ಎಸ್​ಕೆ ಭಗವಾನ್​ ದೊರೈ ಭಗವಾನ್​​ ಆಗಿದ್ದು ಹೇಗೆ? ಇಲ್ಲಿದೆ ಕುತೂಹಲಕಾರಿ ಸಂಗತಿ

ಇದನ್ನೂ ಓದಿ
Image
Dorai Bhagavan: ‘ಡಾ. ರಾಜ್​​ ಕುಟುಂಬಕ್ಕೆ ಬಲಗೈ ಬಂಟ ಆಗಿದ್ದರು’: ಎಸ್​.ಕೆ. ಭಗವಾನ್​​ ಕುರಿತ ನೆನಪು ತೆರೆದಿಟ್ಟ ಚಿನ್ನೇಗೌಡ
Image
SK Bhagavan: ಕನ್ನಡದಲ್ಲಿ ಮೊಟ್ಟಮೊದಲ ಬಾಂಡ್ ಶೈಲಿ ಸಿನಿಮಾ ತಯಾರಿಸಿದ ದೊರೆ-ಭಗವಾನ್ ಜೋಡಿಯ ಭಗವಾನ್ ಇನ್ನಿಲ್ಲ
Image
SK Bhagavan: ಖ್ಯಾತ ಹಿರಿಯ ನಿರ್ದೇಶಕ ಎಸ್​ಕೆ ಭಗವಾನ್​ ದೊರೈ ಭಗವಾನ್​​ ಆಗಿದ್ದು ಹೇಗೆ? ಇಲ್ಲಿದೆ ಕುತೂಹಲಕಾರಿ ಸಂಗತಿ
Image
SK Bhagavan: ಚಿತ್ರರಂಗದಲ್ಲಿ ಮುಗಿಯಿತು ಭಗವಾನ್ ಅಧ್ಯಾಯ; ಖ್ಯಾತ ನಿರ್ದೇಶಕ ನಿಧನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್​.ಕೆ. ಭಗವಾನ್​ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಬಂದು ಅಂತಿಮ ನಮನ ಸಲ್ಲಿಸಿದರು. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​, ಸುಂದರ್​ ರಾಜ್​, ಅನಂತ್​ ನಾಗ್​, ಗಣೇಶ್​ ಮುಂತಾದ ಕಲಾವಿದರು ಹಿರಿಯ ನಿರ್ದೇಶಕನ ಅಂತಿಮ ದರ್ಶನ ಪಡೆದರು.

ಇದನ್ನೂ ಓದಿ: Dorai Bhagavan: ‘ಡಾ. ರಾಜ್​​ ಕುಟುಂಬಕ್ಕೆ ಬಲಗೈ ಬಂಟ ಆಗಿದ್ದರು’: ಎಸ್​.ಕೆ. ಭಗವಾನ್​​ ಕುರಿತ ನೆನಪು ತೆರೆದಿಟ್ಟ ಚಿನ್ನೇಗೌಡ

ಸಂಜೆ ನಾಲ್ಕು ಗಂಟೆಗೆ ರವೀಂದ್ರ ಕಲಾಕ್ಷೇತ್ರದಿಂದ ವಿಲ್ಸನ್​ ಗಾರ್ಡನ್​ ಚಿತಾಗಾರಕ್ಕೆ ಎಸ್​.ಕೆ. ಭಗವಾನ್​ ಅವರ ಪಾರ್ಥೀವ ಶರೀರವನ್ನು ತರಲಾಯಿತು. ಅಯ್ಯಂಗಾರ್​ ಸಂಪ್ರದಾಯದಂತೆ ಪುತ್ರರು ಅಂತಿಮ ವಿಧಿ ವಿಧಾನ ಕಾರ್ಯಗಳನ್ನು ನೆರವೇರಿಸಿದರು. ವಿದ್ಯುತ್​ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

ನೇತ್ರದಾನ ಮಾಡಿದ ನಿರ್ದೇಶಕ ಭಗವಾನ್​:

ಎಸ್​.ಕೆ. ಭಗವಾನ್​ ಅವರು ಡಾ. ರಾಜ್​ಕುಮಾರ್​ ಅವರಿಗೆ ತುಂಬ ಆಪ್ತರಾಗಿದ್ದರು. ಅಣ್ಣಾವ್ರ ರೀತಿಯೇ ಭಗವಾನ್​ ಕೂಡ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ. ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ. ಬಹಳ ಹಿಂದೆಯೇ ಅವರು ನೇತ್ರದಾನಕ್ಕೆ ನೋಂದಣಿ ಮಾಡಿದ್ದರು. ಇದರಿಂದ ನಾಲ್ಕು ಮಂದಿಗೆ ದೃಷ್ಟಿ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:10 pm, Mon, 20 February 23

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?