AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್, ಉಪೇಂದ್ರ, ಸುದೀಪ್​ಗೆ ನನ್ನ ನೆನಪಿಲ್ಲ; ಬೇಸರ ಹೊರಹಾಕಿದ್ದ ಬ್ಯಾಂಕ್ ಜನಾರ್ಧನ್

ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು ನಿಧನರಾಗುವ ಮುನ್ನ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರ ಅವಗಣನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದರು. ದರ್ಶನ್, ಉಪೇಂದ್ರ, ಸುದೀಪ್ ಮುಂತಾದ ನಟರು ತಮ್ಮನ್ನು ಮರೆತುಬಿಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದರು. ಹೊಸ ಪೀಳಿಗೆಯ ನಿರ್ದೇಶಕರು ಹಿರಿಯರಿಗೆ ಅವಕಾಶ ನೀಡದಿರುವುದರಿಂದ ದುಡಿಯುವುದು ಕಷ್ಟವಾಗಿದೆ ಎಂದು ಅವರು ಹೇಳಿದ್ದರು.

ದರ್ಶನ್, ಉಪೇಂದ್ರ, ಸುದೀಪ್​ಗೆ ನನ್ನ ನೆನಪಿಲ್ಲ; ಬೇಸರ ಹೊರಹಾಕಿದ್ದ ಬ್ಯಾಂಕ್ ಜನಾರ್ಧನ್
ದರ್ಶನ್, ಉಪೇಂದ್ರ, ಸುದೀಪ್​ಗೆ ನನ್ನ ನೆನಪಿಲ್ಲ; ಬೇಸರ ಹೊರಹಾಕಿದ್ದ ಬ್ಯಾಂಕ್ ಜನಾರ್ಧನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Apr 22, 2025 | 11:30 AM

ಹಲವು ಹಿರಿಯ ಕಲಾವಿದರು ಮೂಲೆ ಗುಂಪಾಗಿದ್ದಾರೆ. ಹೊಸ ಜನರೇಶನ್ ನಿರ್ದೇಶಕರು ಹಾಗೂ ನಿರ್ಮಾಪಕರು ಚಿತ್ರರಂಗಕ್ಕೆ ಬರುತ್ತಿದ್ದು, ಹಿಂದಿನ ಕಾಲದವರಿಗೆ ಅವಕಾಶವೇ ಇಲ್ಲದಂತೆ ಆಗಿದೆ. ಹಿರಿಯ ನಟ ಬ್ಯಾಂಕ್ ಜನಾರ್ಧನ್ (Bank Janardhan) ಅವರಿಗೂ ಇದೇ ಪರಿಸ್ಥಿತಿ ನಿರ್ಮಾಣ ಆಗಿತ್ತು. ಇಂದು (ಏಪ್ರಿಲ್ 14) ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದು, ಸಾಯುವುದಕ್ಕೂ ಮೊದಲು ಕೆಲ ನಟರ ಬಗ್ಗೆ ಅವರು ಬೇಸರ ಹೊರಹಾಕಿದ್ದರು. ‘ಕಲಾ ಮಾಧ್ಯಮ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಅವರು ಮಾತನಾಡಿದ್ದರು

‘ಗಣೇಶ್​ ಉದಯ ಟಿವಿಯಲ್ಲಿ ಕಾರ್ಯಕ್ರಮ ಮಾಡಿ ಫೇಮಸ್ ಆದವನು. ಅವನು ಬರೋದಕ್ಕೂ ಮೊದಲು ಆ ಕಾರ್ಯಕ್ರಮ ನಾನು ಮಾಡ್ತಾ ಇದ್ದೆ. ಚಾನೆಲ್​ನವರು ಹೊಸ ಹುಡುಗ ಗಣೇಶ್ ಇದನ್ನು ಮಾಡ್ತಾನೆ ನಿಮಗೇನು ತೊಂದರೆ ಇಲ್ಲವ ಎಂದು ಕೇಳಿದ್ದರು. ನಾನು ಇಲ್ಲ ಎಂದು ಹೇಳಿದ್ದೆ. ಹಾಗಾಗಿ, ಆ ಕಾರ್ಯಕ್ರಮ ಗಣೇಶ್​ಗೆ ಸಿಕ್ತು. ಉಪೇಂದ್ರ ಜೊತೆ ನಾನು ಅವಾಗ ಸಮಯ ಕಳೆಯುತ್ತಿದ್ದೆ. ದರ್ಶನ್, ಸುದೀಪ್ ಜೊತೆಯೂ ನಾನು ಕೆಲಸ ಮಾಡಿದ್ದೇನೆ. ಅವರು ಯಾರಿಗೂ ನನ್ನ ನೆನಪಿಲ್ಲ’ ಎಂದಿದ್ದರು ಜನಾರ್ಧನ್.

ಇದನ್ನೂ ಓದಿ
Image
860 ಸಿನಿಮಾ ಮಾಡಿದರೂ ಬ್ಯಾಂಕ್ ಬ್ಯಾಲೆನ್ಸ್ ಇಲ್ಲ; ಮರುಗಿದ್ದ ನಟ
Image
ಬ್ಯಾಂಕ್ ಜನಾರ್ಧನ್ ವೃತ್ತಿ ಜೀವನ ಬದಲಿಸಿದ್ದು ಆ ಇಬ್ಬರು ವ್ಯಕ್ತಿಗಳು
Image
ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ  
Image
ಫಿಲ್ಮ್ ಫೆಸ್ಟಿವಲ್​ಗಳಲ್ಲಿ ಗಮನ ಸೆಳೆದ ‘ಗ್ರೀನ್’ ಸಿನಿಮಾ

‘ಸ್ವಂತ ಬ್ಯಾನರ್ ಸಿನಿಮಾ ಮಾಡಿದಾಗ ಮಾತ್ರ ಉಪೇಂದ್ರ ನನ್ನನ್ನು ಕರೆಯುತ್ತಾರೆ. ಉಳಿದ ಸಯಮದಲ್ಲಿ ಅವರಿಗೆ ನನ್ನ ನೆನಪು ಇರುವುದಿಲ್ಲ. ಅವರು ಅಂತ ಮಾತ್ರವಲ್ಲ ಗಣೇಶ್, ಸುದೀಪ್, ದರ್ಶನ್ ಹೀಗೆ ಯಾರೂ ನಮ್ಮನ್ನು ನೆನಪಿಸಿಕೊಳ್ಳಲ್ಲ. ಜನಾರ್ಧನ್ ಜೊತೆ ನಟಿಸಿದ್ದೇವೆ, ಅವರಿಗೆ ಒಂದು ಪಾತ್ರ ಕೊಡೋಣ ಎಂದು ಯಾವಾಗಲೂ ಅವರಿಗೆ ಅನಿಸಿಲ್ಲ. ಡಿಂಗ್ರಿ ನಾಗರಾಜ್, ಬಿರಾದಾರ್, ನಾನು ಎಲ್ಲರೂ ಹಿಂದೆ ಸರಿದು ಹೋಗುತ್ತಿದ್ದೇವೆ’ ಎಂದಿದ್ದರು ಅವರು.

‘ಈಗ ಬರುತ್ತಿದ್ದವರೆಲ್ಲರೂ ಯುವ ನಿರ್ದೇಶಕರು. ಇತ್ತೀಚೆಗೆ ಯುವ ನಿರ್ದೇಶಕರು ನನಗೆ ಕರೆ ಮಾಡಿ ಫೋಟೋ ಕೇಳಿದರು. ಏನು ಹೇಳಬೇಕು ಎಂಬುದೇ ಗೊತ್ತಾಗಿಲ್ಲ. ನಟನೆ ಮಾಡುತ್ತಿರುವ ವಿಡಿಯೋ ಕಳುಹಿಸಿ ಎಂದರು. ನಾನು ಉದಯ ಟಿವಿ ಹಾಕಿ, ಅದರಲ್ಲಿ ಯಾವುದೇ ಸಿನಿಮಾ ನೋಡಿದರೂ ನಾನು ಇರುತ್ತೇನೆ ಎಂದೆ. ಆದಾಗ್ಯೂ ಅವರು ಕೇಳಲಿಲ್ಲ. ವಿಡಿಯೋ ಕಳಿಸಿ ಎಂದರು. ವಿಡಿಯೋ ಕಳುಹಿಸಿ ಚಾನ್ಸ್ ತೆಗೆದುಕೊಳ್ಳುವ ಸ್ಥಿತಿ ನನಗೆ ಇಲ್ಲ ಎಂದು ಅವರಿಗೆ ಹೇಳಿದ್ದೆ’ ಎಂದು ವಿವರಿಸಿದ್ದರು ಜನಾರ್ಧನ್.

ಇದನ್ನೂ ಓದಿ: ಬ್ಯಾಂಕ್ ಜನಾರ್ಧನ್ 860 ಸಿನಿಮಾ ಮಾಡಿದರೂ ಬ್ಯಾಂಕ್ ಬ್ಯಾಲೆನ್ಸ್ ಇಲ್ಲ; ತಪ್ಪಿನ ಬಗ್ಗೆ ಮರುಗಿದ್ದ ನಟ

‘ಇವತ್ತಿಗೂ ದುಡಿಮೆ ಬೇಕು. ಕೊರೊನಾ ಬಂದು ಮುಂದೇನು ಎನ್ನುವ ಪರಿಸ್ಥಿತಿ ಬಂದಿದೆ. ನಾವು ಸಿನಿಮಾ ಮಾಡುವಾಗ ನಿರ್ದೇಶಕರು ಈಗ ಇಲ್ಲ. ಅವರಿಗೆ ಕೆಲಸವೇ ಇಲ್ಲದಂತೆ ಆಗಿದೆ. ಅವರಿಗೆ ಕೆಲಸ ಇದ್ದಿದ್ದರೆ ನಮ್ಮನ್ನು ಕರೆಯುತ್ತಿದ್ದರು. ರಾಜ್​ಕುಮಾರ್ ಜೊತೆ ಆರು ಸಿನಿಮಾ ಮಾಡಿದೆ. ನನಗೆ ಅತೀವ ಖುಷಿ ಇತ್ತು. ಧನ್ಯತಾ ಭಾವನೆ ಕಾಡಿತು’ ಎಂದಿದ್ದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:56 am, Mon, 14 April 25

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ