AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ

ಪ್ರತಿಮಾ ದೇವಿ ಸುಮಾರು 60ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ಕೃಷ್ಣ ಲೀಲಾ, ಜಗನ್ಮೋಹಿನಿ, ನಾಗಕನ್ಯೆ, ಶಿವಪಾರ್ವತಿ, ಶ್ರೀ ಶ್ರೀನಿವಾಸ ಕಲ್ಯಾಣ ಮುಂತಾದ ಸಿನಿಮಾಗಳು ಪ್ರತಿಮಾ ದೇವಿ ನಟಿಸಿದ ಪ್ರಮುಖ ಸಿನಿಮಾಗಳಾಗಿವೆ.

Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ
ಪ್ರತಿಮಾ ದೇವಿ
TV9 Web
| Edited By: |

Updated on:Apr 05, 2022 | 12:45 PM

Share

ಮೈಸೂರು: ಚಂದನವನದ ಹಿರಿಯ ನಟಿ, 1947 ಸುಮಾರರಿಂದ 2000ನೇ ದಶಕದ ವರೆಗೆ ಕನ್ನಡ ಚಿತ್ರರಂಗದಲ್ಲಿ ಕಲಾಸೇವೆ ಮಾಡಿದ್ದ ಅನುಭವಿ ಕಲಾವಿದೆ ಪ್ರತಿಮಾ ದೇವಿ ಇಂದು (ಏಪ್ರಿಲ್ 6) ನಿಧನ ಹೊಂದಿದ್ದಾರೆ. ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರ ತಾಯಿಯೂ ಆಗಿರುವ, 88 ವರ್ಷ ವಯಸ್ಸಿನ ಪ್ರತಿಮಾ ದೇವಿ ಇಂದು ಮರಣಿಸಿದ್ದಾರೆ. ಮೈಸೂರಿನ ಸರಸ್ವತೀಪುರಂ ನಿವಾಸದಲ್ಲಿ ಅವರ ಪಾರ್ಥಿವ ಶರೀರ ಇರಿಸಲಾಗಿದೆ. ನಾಳೆ (ಏಪ್ರಿಲ್ 7) ಮಧ್ಯಾಹ್ನ 1 ಗಂಟೆಗೆ ಪ್ರತಿಮಾ ದೇವಿ ಅಂತ್ಯಕ್ರಿಯೆ ನಡೆಯಲಿದೆ. ನಾಳೆ ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪ್ರತಿಮಾ ದೇವಿ ಸುಮಾರು 60ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ಕೃಷ್ಣ ಲೀಲಾ, ಜಗನ್ಮೋಹಿನಿ, ನಾಗಕನ್ಯೆ, ಶಿವಪಾರ್ವತಿ, ಶ್ರೀ ಶ್ರೀನಿವಾಸ ಕಲ್ಯಾಣ ಮುಂತಾದ ಸಿನಿಮಾಗಳು ಪ್ರತಿಮಾ ದೇವಿ ನಟಿಸಿದ ಪ್ರಮುಖ ಸಿನಿಮಾಗಳಾಗಿವೆ. ಕನ್ನಡದ ಮೊದಲ ಸೂಪರ್ ಹಿಟ್‌ ಸಿನಿಮಾ ಜಗನ್ಮೋಹಿನಿಯ ನಾಯಕಿಯಾಗಿಯೂ ಪ್ರತಿಮಾ ದೇವಿ ಖ್ಯಾತಿಗಳಿಸಿದ್ದರು.

ನಿರ್ದೇಶಕ ಶಂಕರ್ ಸಿಂಗ್​ರನ್ನು ಪ್ರತಿಮಾ ದೇವಿ ವರಿಸಿದ್ದರು. ಪ್ರತಿಮಾ ದೇವಿ ಪುತ್ರ ಎಸ್.ವಿ.ರಾಜೇಂದ್ರಸಿಂಗ್ ಬಾಬು ಕೂಡ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾಗಿದ್ದಾರೆ. ಪ್ರತಿಮಾ ದೇವಿ ಪುತ್ರಿ ವಿಜಯಲಕ್ಷ್ಮೀ ಸಿಂಗ್ ನಟಿ ಹಾಗೂ ನಿರ್ಮಾಪಕಿಯಾಗಿದ್ದಾರೆ.

ಚಲನಚಿತ್ರ ರಂಗಕ್ಕೆ ಪ್ರತಿಮಾ ದೇವಿ ನೀಡಿದ ಕೊಡುಗೆಗಳನ್ನು ಪರಿಗಣಿಸಿದ ಕರ್ನಾಟಕ ರಾಜ್ಯ ಸರ್ಕಾರ 2001-02ರ ಅವಧಿಯಲ್ಲಿ ಡಾ. ರಾಜ್​ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ.

ಇದನ್ನೂ ಓದಿ: ಧಾರವಾಡದ ಹಿರಿಯ ಸಿತಾರ್​ವಾದಕ ಪಂಡಿತ್ ಶಿವಾನಂದ ತರಲಗಟ್ಟಿ ನಿಧನ

ಇದನ್ನೂ ಓದಿ: ಬರಾಕ್ ಒಬಾಮ ಅಜ್ಜಿ, 99 ವರ್ಷದ ಸಾರಾ ಒಬಾಮ ನಿಧನ; ಭಾವುಕ ಪೋಸ್ಟ್ ಹಂಚಿಕೊಂಡ ಅಮೆರಿಕ ಮಾಜಿ ಅಧ್ಯಕ್ಷ

Published On - 8:01 pm, Tue, 6 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ