AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ

ಪ್ರತಿಮಾ ದೇವಿ ಸುಮಾರು 60ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ಕೃಷ್ಣ ಲೀಲಾ, ಜಗನ್ಮೋಹಿನಿ, ನಾಗಕನ್ಯೆ, ಶಿವಪಾರ್ವತಿ, ಶ್ರೀ ಶ್ರೀನಿವಾಸ ಕಲ್ಯಾಣ ಮುಂತಾದ ಸಿನಿಮಾಗಳು ಪ್ರತಿಮಾ ದೇವಿ ನಟಿಸಿದ ಪ್ರಮುಖ ಸಿನಿಮಾಗಳಾಗಿವೆ.

Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ
ಪ್ರತಿಮಾ ದೇವಿ
TV9 Web
| Edited By: |

Updated on:Apr 05, 2022 | 12:45 PM

Share

ಮೈಸೂರು: ಚಂದನವನದ ಹಿರಿಯ ನಟಿ, 1947 ಸುಮಾರರಿಂದ 2000ನೇ ದಶಕದ ವರೆಗೆ ಕನ್ನಡ ಚಿತ್ರರಂಗದಲ್ಲಿ ಕಲಾಸೇವೆ ಮಾಡಿದ್ದ ಅನುಭವಿ ಕಲಾವಿದೆ ಪ್ರತಿಮಾ ದೇವಿ ಇಂದು (ಏಪ್ರಿಲ್ 6) ನಿಧನ ಹೊಂದಿದ್ದಾರೆ. ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರ ತಾಯಿಯೂ ಆಗಿರುವ, 88 ವರ್ಷ ವಯಸ್ಸಿನ ಪ್ರತಿಮಾ ದೇವಿ ಇಂದು ಮರಣಿಸಿದ್ದಾರೆ. ಮೈಸೂರಿನ ಸರಸ್ವತೀಪುರಂ ನಿವಾಸದಲ್ಲಿ ಅವರ ಪಾರ್ಥಿವ ಶರೀರ ಇರಿಸಲಾಗಿದೆ. ನಾಳೆ (ಏಪ್ರಿಲ್ 7) ಮಧ್ಯಾಹ್ನ 1 ಗಂಟೆಗೆ ಪ್ರತಿಮಾ ದೇವಿ ಅಂತ್ಯಕ್ರಿಯೆ ನಡೆಯಲಿದೆ. ನಾಳೆ ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪ್ರತಿಮಾ ದೇವಿ ಸುಮಾರು 60ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ಕೃಷ್ಣ ಲೀಲಾ, ಜಗನ್ಮೋಹಿನಿ, ನಾಗಕನ್ಯೆ, ಶಿವಪಾರ್ವತಿ, ಶ್ರೀ ಶ್ರೀನಿವಾಸ ಕಲ್ಯಾಣ ಮುಂತಾದ ಸಿನಿಮಾಗಳು ಪ್ರತಿಮಾ ದೇವಿ ನಟಿಸಿದ ಪ್ರಮುಖ ಸಿನಿಮಾಗಳಾಗಿವೆ. ಕನ್ನಡದ ಮೊದಲ ಸೂಪರ್ ಹಿಟ್‌ ಸಿನಿಮಾ ಜಗನ್ಮೋಹಿನಿಯ ನಾಯಕಿಯಾಗಿಯೂ ಪ್ರತಿಮಾ ದೇವಿ ಖ್ಯಾತಿಗಳಿಸಿದ್ದರು.

ನಿರ್ದೇಶಕ ಶಂಕರ್ ಸಿಂಗ್​ರನ್ನು ಪ್ರತಿಮಾ ದೇವಿ ವರಿಸಿದ್ದರು. ಪ್ರತಿಮಾ ದೇವಿ ಪುತ್ರ ಎಸ್.ವಿ.ರಾಜೇಂದ್ರಸಿಂಗ್ ಬಾಬು ಕೂಡ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾಗಿದ್ದಾರೆ. ಪ್ರತಿಮಾ ದೇವಿ ಪುತ್ರಿ ವಿಜಯಲಕ್ಷ್ಮೀ ಸಿಂಗ್ ನಟಿ ಹಾಗೂ ನಿರ್ಮಾಪಕಿಯಾಗಿದ್ದಾರೆ.

ಚಲನಚಿತ್ರ ರಂಗಕ್ಕೆ ಪ್ರತಿಮಾ ದೇವಿ ನೀಡಿದ ಕೊಡುಗೆಗಳನ್ನು ಪರಿಗಣಿಸಿದ ಕರ್ನಾಟಕ ರಾಜ್ಯ ಸರ್ಕಾರ 2001-02ರ ಅವಧಿಯಲ್ಲಿ ಡಾ. ರಾಜ್​ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ.

ಇದನ್ನೂ ಓದಿ: ಧಾರವಾಡದ ಹಿರಿಯ ಸಿತಾರ್​ವಾದಕ ಪಂಡಿತ್ ಶಿವಾನಂದ ತರಲಗಟ್ಟಿ ನಿಧನ

ಇದನ್ನೂ ಓದಿ: ಬರಾಕ್ ಒಬಾಮ ಅಜ್ಜಿ, 99 ವರ್ಷದ ಸಾರಾ ಒಬಾಮ ನಿಧನ; ಭಾವುಕ ಪೋಸ್ಟ್ ಹಂಚಿಕೊಂಡ ಅಮೆರಿಕ ಮಾಜಿ ಅಧ್ಯಕ್ಷ

Published On - 8:01 pm, Tue, 6 April 21

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?