ಹಿರಿಯ ಸಂಗೀತ ನಿರ್ದೇಶಕ ಆರ್‌. ರತ್ನ ನಿಧನ: ನಾಳೆ ಬೆಂಗಳೂರಲ್ಲಿ ಅಂತ್ಯಕ್ರಿಯೆ

ರತ್ನ ಅವರಿಗೆ ಕನ್ನಡ ಹಾಗೂ ಕರ್ನಾಟಕದ ಮೇಲೆ ಸಾಕಷ್ಟು ಅಭಿಮಾನ ಇತ್ತು. ಹೀಗಾಗಿ, ಕರ್ನಾಟಕದಲ್ಲೇ ಅಂತ್ಯಕ್ರಿಯೆ ಆಗಬೇಕು ಅನ್ನೋದು ಅವರ ಕೊನೆ ಆಸೆಯಾಗಿತ್ತು.

ಹಿರಿಯ ಸಂಗೀತ ನಿರ್ದೇಶಕ ಆರ್‌. ರತ್ನ ನಿಧನ: ನಾಳೆ ಬೆಂಗಳೂರಲ್ಲಿ ಅಂತ್ಯಕ್ರಿಯೆ
ಆರ್​ ರತ್ನ

Updated on: Jan 09, 2021 | 5:02 PM

ಚೆನ್ನೈ: ಅಮ್ಮನಿನ್ನ ತೋಳಿನಲ್ಲಿ ಕಂದ ನಾನು… ಸೇರಿ ಕನ್ನಡದಲ್ಲಿ ಸಾಕಷ್ಟು ಹಿಟ್ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ಆರ್​. ರತ್ನ (97) ಇಂದು ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಆರ್​. ರತ್ನ ಬಳಲುತಿದ್ದರು. ಇಂದು ಬೆಳಗ್ಗೆ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.  ‘ಹೋಗದಿರಿ ಸಹೋದರರೇ…’ ‘ಜಲಲ ಜಲಲ ಜಲಧಾರೆ…’, ‘ಅಮ್ಮನಿನ್ನ ತೋಳಿನಲ್ಲಿ ಕಂದ ನಾನು…’ ಸೇರಿದಂತೆ ಅನೇಕ ಸೂಪರ್ ಹಿಟ್ ಹಾಡುಗಳನ್ನ ರತ್ನ ನೀಡಿದ್ದಾರೆ.

ರತ್ನ ಅವರಿಗೆ ಕನ್ನಡ ಹಾಗೂ ಕರ್ನಾಟಕದ ಮೇಲೆ ಸಾಕಷ್ಟು ಅಭಿಮಾನ ಇತ್ತು. ಹೀಗಾಗಿ, ಕರ್ನಾಟಕದಲ್ಲೇ ಅಂತ್ಯಕ್ರಿಯೆ ಆಗಬೇಕು ಅನ್ನೋದು ಅವರ ಕೊನೆ ಆಸೆಯಾಗಿತ್ತು. ಅವರ ಪುತ್ರ ವೆಂಕಟ ರಾಮಯ್ಯ ಅವರಿಂದ ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

 

ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ

Published On - 5:01 pm, Sat, 9 January 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us