AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ಟೋರಿಯಾ ಮಾನ್ಷನ್’ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಮಾಡಿದ ಶಿವರಾಜ್‌ಕುಮಾರ್

ಬೆಂಗಳೂರು, ಮೂಡಬಿದ್ರಿ, ಮಂಗಳೂರು, ಚಿಕ್ಕಮಗಳೂರು, ಬೇಲೂರು ಮುಂತಾದ ಕಡೆಗಳಲ್ಲಿ ‘ವಿಕ್ಟೋರಿಯಾ ಮಾನ್ಷನ್’ ಸಿನಿಮಾಗೆ ಶೂಟಿಂಗ್​ ಮಾಡಲಾಗಿದೆ. ಈಗಾಗಲೇ ಶೇಕಡ 90ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಶೀಘ್ರದಲ್ಲೇ ಶೂಟಿಂಗ್​ ಮುಕ್ತಾಯ ಆಗಲಿದೆ. ‘ವಿಕ್ಟೋರಿಯಾ ಮಾನ್ಷನ್’ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಶಿವರಾಜ್​ಕುಮಾರ್​ ಬಿಡುಗಡೆ ಮಾಡಿದ್ದಾರೆ.

‘ವಿಕ್ಟೋರಿಯಾ ಮಾನ್ಷನ್’ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಮಾಡಿದ ಶಿವರಾಜ್‌ಕುಮಾರ್
ವಿಕ್ಟೋರಿಯಾ ಮಾನ್ಷನ್​ ಚಿತ್ರತಂಡದ ಜೊತೆ ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Apr 05, 2024 | 6:28 PM

Share

ನಟ ಶಿವರಾಜ್​ಕುಮಾರ್​ (Shivarajkumar) ಅವರು ಹೊಸಬರ ಸಿನಿಮಾಗಳಿಗೆ ಯಾವಾಗಲೂ ಪ್ರೋತ್ಸಾಹ ನೀಡುತ್ತಾರೆ. ಈಗ ಅವರು ‘ವಿಕ್ಟೋರಿಯಾ ಮಾನ್ಷನ್’ (Victoria Mansion) ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ. ಹೌದು, ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅವರು ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಿದ್ದಾರೆ. ಆ ಮೂಲಕ ಅವರು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ವೇಳೆ ಮಾತನಾಡಿದ ಶಿವಣ್ಣ (Shivanna), ‘ಕನ್ನಡ ಚಿತ್ರರಂಗಕ್ಕೆ ಹೊಸ ಪ್ರತಿಭೆಗಳು ಬರಬೇಕು. ಆಗಲೇ ವಿನೂತನ ಕಥೆ, ಪ್ರಯತ್ನಗಳು ಬರುತ್ತದೆ. ಈ ಸಿನಿಮಾದ ತುಣುಕುಗಳು ಚೆನ್ನಾಗಿ ಮೂಡಿಬಂದಿವೆ. ಇದು ಹೊಸಬರ ಸಿನಿಮಾ ಎನಿಸುವುದಿಲ್ಲ. ನಿಮ್ಮಈ ಪ್ರಯತ್ನ ನಿರಂತರವಾಗಿ ಸಾಗುತ್ತಿರಲಿ. ವಿಕ್ಟೋರಿಯಾ ಮಾನ್ಷನ್ ಚಿತ್ರಕ್ಕೆ ಯಶಸ್ಸು ಸಿಗಲಿ’ ಎಂದು ಹಾರೈಸಿದರು.

ಶಿವಣ್ಣ ‘ವಿಕ್ಟೋರಿಯಾ ಮಾನ್ಷನ್’ ಫಸ್ಟ್​ ಲುಕ್​ ಅನಾವರಣ ಮಾಡಿದಾಗ ಆರ್. ಚಂದ್ರು ಕೂಡ ಹಾಜರಿದ್ದರು. ಆರ್. ಚಂದ್ರು ಅವರ ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಉಮೇಶ್ ಕೆ.ಎನ್. ಅವರು ‘ವಿಕ್ಟೋರಿಯಾ ಮಾನ್ಷನ್’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಶ್ರೀ ಪದ್ಮಾವತಿ ಪ್ರೊಡಕ್ಷನ್’ ಬ್ಯಾನರ್‌ ಮೂಲಕ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ರಾಜೇಶ್‌ ಬಲಿಪ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: ಅಶ್ವಿನಿ ಪುನೀತ್​-ಶೋಭಾ ಕರಂದ್ಲಾಜೆ ಭೇಟಿ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ

ಸಿನಿಮಾದ ಕಥೆಯ ಬಗ್ಗೆಯೂ ‘ವಿಕ್ಟೋರಿಯಾ ಮಾನ್ಷನ್’ ತಂಡ ಮಾಹಿತಿ ಹಂಚಿಕೊಂಡಿದೆ. 1900ನೇ ಇಸವಿಯಲ್ಲಿ ಹನುಮಗಿರಿ ಎನ್ನುವ ಸಣ್ಣ ಊರಿನಲ್ಲಿ ಭೀಕರ ಘಟನೆಗಳು ಜರುಗುತ್ತಿರುತ್ತವೆ. ಅಲ್ಲಿನ ಜನರು ಪಾಲಿಸುತ್ತಿದ್ದ ಒಂದಷ್ಟು ವಿಚಿತ್ರ ಆಚರಣೆಗಳ ಬಗ್ಗೆ ಹಾಗೂ ಎಷ್ಟೋ ಶತಮಾನಗಳಿಂದ ನಿಗೂಢವಾಗಿ ಉಳಿದ ರಹಸ್ಯಗಳನ್ನು ಪುರಾತತ್ವ ಶಾಸ್ತ್ರ ಇಲಾಖೆಯವರು ಭೇದಿಸುತ್ತಾರೆ. ಇದನ್ನು ಥ್ರಿಲ್ಲರ್ ಅಂಶಗಳ ಮೂಲಕ ತೋರಿಸಲಾಗುತ್ತಿದೆ ಎಂದು ‘ವಿಕ್ಟೋರಿಯಾ ಮಾನ್ಷನ್’ ಚಿತ್ರತಂಡ ಹೇಳಿದೆ.

ಇದನ್ನೂ ಓದಿ: ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಿದ ಆರ್ ಚಂದ್ರು; ಮೂಡಿತು ಕುತೂಹಲ

ಈ ಸಿನಿಮಾದಲ್ಲಿ ರಾಜೇಶ್ ಅವರು ನಾಯಕನಾಗಿ ನಟಿಸಿದ್ದು, ಕಾಶೀಮಾ ಅವರು ನಾಯಕಿಯಾಗಿದ್ದಾರೆ. ಮಿಮಿಕ್ರಿ ಗೋಪಿ, ಶ್ರೀಧರ್, ಮಠ ಕೊಪ್ಪಳ, ಬಾಲರಾಜ ವಾಡಿ, ಉಮೇಶ್, ಗುರುದೇವ್‌ ನಾಗರಾಜ್, ಮದನ್, ಹಿತೇಶ್, ಅಂಜಿ, ಪಲ್ಟಿ ಗೋವಿಂದ್, ಕೀರ್ತನಾ, ಶೈಲಜಾ ಮುಂತಾದ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಕಿರಣ್‌ ರವೀಂದ್ರನಾಥ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವೀರೇಶ್‌ ಬುಗುಡೆ ಅವರ ಛಾಯಾಗ್ರಹಣ, ನಾನಿ ಕೃಷ್ಣ ಅವರ ಸಂಕಲನ, ಅಶೋಕ್ ಅವರ ಸಾಹಸ ನಿರ್ದೇಶಕ ಈ ಚಿತ್ರಕ್ಕೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್