AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಸಮಾಧಿ ಪಕ್ಕ ಮಲಗಿದ ನಟ ಧ್ರುವ ಸರ್ಜಾ: ವಿಡಿಯೋ ವೈರಲ್

Dhruva Sarja: ಅಣ್ಣ ಚಿರಂಜೀವಿ ಸರ್ಜಾ ಸಮಾಧಿ ಪಕ್ಕದಲ್ಲಿ ಮಲಗಿರುವ ಧ್ರುವ ಸರ್ಜಾರ ವಿಡಿಯೋ ವೈರಲ್ ಆಗಿದೆ. ತಮ್ಮದೇ ಫಾರಂ ಹೌಸ್​ನಲ್ಲಿ ಅಣ್ಣನ ಸಮಾಧಿಯನ್ನು ಧ್ರುವ ಸರ್ಜಾ ನಿರ್ಮಿಸಿದ್ದು, ಅಲ್ಲಿಯೇ ಸಮಾಧಿ ಪಕ್ಕದಲ್ಲಿ ಧ್ರುವ ಮಲಗಿದ್ದಾರೆ.

ಅಣ್ಣನ ಸಮಾಧಿ ಪಕ್ಕ ಮಲಗಿದ ನಟ ಧ್ರುವ ಸರ್ಜಾ: ವಿಡಿಯೋ ವೈರಲ್
ಧ್ರುವ ಸರ್ಜಾ-ಚಿರು ಸರ್ಜಾ
ಮಂಜುನಾಥ ಸಿ.
|

Updated on: Sep 08, 2023 | 9:01 PM

Share

ಚಿರಂಜೀವಿ ಸರ್ಜಾ (Chiranjeevi Sarja) ಅಗಲಿ ಮೂರು ವರ್ಷಗಳಿಗೂ ಹೆಚ್ಚು ಸಮಯವಾಗಿದೆ. ಅವರ ಅಭಿಮಾನಿಗಳು, ಅವರ ಕುಟುಂಬಸ್ಥರು ಚಿರು ಅಗಲಿಕೆಯ ನೋವಿನಿಂದ ಇನ್ನೂ ಹೊರಬಂದಿಲ್ಲ. ಚಿರು ಪತ್ನಿ ಮೇಘನಾ ರಾಜ್ ನೋವನ್ನೆಲ್ಲ ನುಂಗಿಕೊಂಡು ಮತ್ತೆ ಶಕ್ತಿತುಂಬಿಕೊಂಡು ಮಗನ ಭವಿಷ್ಯಕ್ಕಾಗಿ ಮತ್ತೆ ಸಿನಿಮಾ ಹಾಗೂ ಕಿರುತೆರೆಗೆ ಮರಳಿದ್ದಾರೆ. ಧ್ರುವ ಸರ್ಜಾ (Dhruva Sarja) ಸಹ ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರಾದರೂ ಅಣ್ಣನ ಕೊರತೆ ಮನದ ಮೂಲೆಯಲ್ಲಿ ಇದ್ದೇ ಇದೆ. ಚಿರಂಜೀವಿ ಹಾಗೂ ಧ್ರುವ ಬಹಳ ಅನ್ಯೋನ್ಯವಾಗಿದ್ದರು. ಇದೀಗ ಧ್ರುವ ಸರ್ಜಾರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಧ್ರುವ ಸರ್ಜಾ ತಮ್ಮ ಅಣ್ಣನನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಆ ವಿಡಿಯೋ ಸಾಕ್ಷಿಯಾಗಿದೆ.

ವಿಡಿಯೋನಲ್ಲಿ ಚಿರಂಜೀವಿ ಸರ್ಜಾ ಸಮಾಧಿಯ ಪಕ್ಕದಲ್ಲಿ ಧ್ರುವ ಸರ್ಜಾ ಮಲಗಿಕೊಂಡಿದ್ದಾರೆ. ಗಾಢ ನಿದ್ದೆಯಲ್ಲಿರುವ ಚಿರಂಜೀವಿ ಸರ್ಜಾ ಅನ್ನು ಅಭಿಮಾನಿಗಳು ಬಂದು ಎಬ್ಬಿಸಿದ್ದಾರೆ. ಆ ಅಭಿಮಾನಿಗಳೇ ಈ ವಿಡಿಯೋವನ್ನು ಸಹ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಧ್ರುವ ಸರ್ಜಾ ತಮ್ಮ ಅಣ್ಣನನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನು ಈ ವಿಡಿಯೋ ಸಾಕ್ಷಿಯಾಗಿದೆ.

ಇದನ್ನೂ ಓದಿ:ಭರ್ಜರಿಯಾಗಿ ರೆಡಿಯಾಗುತ್ತಿದೆ ಧ್ರುವ ಸರ್ಜಾ ಮಾರ್ಟಿನ್, ಫೈಟ್​ಗೆ 9 ಕೋಟಿ, ಒಂದು ಹಾಡಿಗೆ 3 ಕೋಟಿ

ಧ್ರುವ ಸರ್ಜಾ ತಮ್ಮ ಫಾರಂ ಹೌಸ್​ನಲ್ಲಿಯೇ ಅಣ್ಣನ ಸಮಾಧಿ ಮಾಡಿದ್ದಾರೆ. ಕನಕಪುರ ಬಳಿಯ ನೆಲಗುಳಿಯಲ್ಲಿ ಧ್ರುವ ಸರ್ಜಾ ಫಾರಂ ಹೌಸ್ ಇದ್ದು ಅಲ್ಲಿಯೇ ಚಿರಂಜೀವಿ ಸರ್ಜಾ ಸಮಾಧಿ ನಿರ್ಮಿಸಲಾಗಿದೆ. ಧ್ರುವ ಸರ್ಜಾ ಅಲ್ಲಿಯೇ ಅಣ್ಣನ ಸಮಾಧಿ ಬದಿಯಲ್ಲಿ ಮಲಗಿದ್ದರು. ಧ್ರುವ ಒಬ್ಬರೇ ಅಣ್ಣನ ಸಮಾಧಿ ಬದಿಯಲ್ಲಿ ಮಲಗಿರುವ ಬಗ್ಗೆ ಹಲವು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದು, ಹಲವರು ಭಾವುಕರಾಗಿ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ.

ಅಕ್ಟೋಬರ್ 6 ರಂದು ಚಿರಂಜೀವಿ ಸರ್ಜಾ ಹುಟ್ಟುಹಬ್ಬವಿದೆ. ಅದೇ ದಿನ ಚಿರಂಜೀವಿ ಸರ್ಜಾರ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅಣ್ಣನ ಪಾತ್ರಕ್ಕೆ ಧ್ರುವ ಸರ್ಜಾ ಧ್ವನಿ ನೀಡಿದ್ದಾರೆ. ಸಿನಿಮಾ ಬಿಡುಗಡೆಗೆ ಸಹಾಯವನ್ನೂ ಮಾಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೆ, ಚಿರಂಜೀವಿ ಪತ್ನಿ ಮೇಘನಾ ರಾಜ್​ರ ಹೊಸ ಸಿನಿಮಾದ ಟ್ರೈಲರ್ ಬಿಡುಗಡೆ ಆಯ್ತು, ಆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಧ್ರುವ ಸರ್ಜಾ, ಅತ್ತಿಗೆಗೆ ಬೆಂಬಲ ನೀಡಿದರು. ಅಲ್ಲಿಯೂ ಅಣ್ಣನನ್ನು ಮತ್ತೊಮ್ಮೆ ನೆನಪು ಮಾಡಿಕೊಂಡರು.

ಇನ್ನು ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾದಲ್ಲಿ ನಟಿಸಿದ್ದು ಆ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅದ್ಧೂರಿಯಾಗಿ ‘ಮಾರ್ಟಿನ್’ ಸಿನಿಮಾವನ್ನು ನಿರ್ಮಾಣ ಮಾಡಲಾಗಿದ್ದು ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದಲ್ಲಿಯೂ ಧ್ರುವ ಸರ್ಜಾ ನಟಿಸುತ್ತಿದ್ದಾರೆ. 70ರ ದಶಕದ ರೌಡಿಸಂ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಸೇರಿದಂತೆ ಇನ್ನೂ ಇತರೆ ಭಾಷೆಗಳ ಸ್ಟಾರ್ ನಟರು ಸಹ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ