Rashmika Mandanna: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿರೋದು ನಿಜ; ವಿಡಿಯೋ ಸಾಕ್ಷಿ ತಂದ ಫ್ಯಾನ್ಸ್

ರಶ್ಮಿಕಾ ಎಂಗೇಜ್​ಮೆಂಟ್ ಮುರಿದು ಬೀಳಲು ವಿಜಯ್ ಕಾರಣ ಎಂಬುದು ಅನೇಕರ ವಾದ. ಆದರೆ, ಇದನ್ನು ರಶ್ಮಿಕಾ ಒಪ್ಪಿಕೊಂಡಿಲ್ಲ.

Rashmika Mandanna: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿರೋದು ನಿಜ; ವಿಡಿಯೋ ಸಾಕ್ಷಿ ತಂದ ಫ್ಯಾನ್ಸ್
ವಿಜಯ್-ರಶ್ಮಿಕಾ
Follow us
|

Updated on: Jun 24, 2023 | 11:03 AM

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಮಧ್ಯೆ ಪ್ರೀತಿ ಹುಟ್ಟಿದೆ ಎಂಬ ಸುದ್ದಿ ಹುಟ್ಟಿಕೊಂಡಿದ್ದು ಬಹಳ ವರ್ಷಗಳ ಹಿಂದೆಯೇ. ಆದರೆ, ಈವರೆಗೂ ಇದನ್ನು ಜೋಡಿ ಅಧಿಕೃತ ಮಾಡಿಲ್ಲ. ‘ನಾವಿಬ್ಬರೂ ಗೆಳೆಯರಷ್ಟೇ’ ಎಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ಹೇಳಿಕೊಂಡು ಬರುತ್ತಲೇ ಇದ್ದಾರೆ. ಈಗ ರಶ್ಮಿಕಾ ಅವರು ವಿಜಯ್ ಜೊತೆ ಲಂಚ್ ಡೇಟ್ ತೆರಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದು ‘ಗೀತ ಗೋವಿಂದಂ’ ಸಿನಿಮಾದಲ್ಲಿ ಇಬ್ಬರ ಮಧ್ಯೆ ಕಿಸ್ಸಿಂಗ್ ದೃಶ್ಯಗಳು ಕೂಡ ಇತ್ತು. ರಶ್ಮಿಕಾ ಎಂಗೇಜ್​ಮೆಂಟ್ ಮುರಿದು ಬೀಳಲು ಇದು ಕೂಡ ಕಾರಣ ಎಂಬುದು ಅನೇಕರ ವಾದ. ಆದರೆ, ಇದನ್ನು ರಶ್ಮಿಕಾ ಒಪ್ಪಿಕೊಂಡಿಲ್ಲ. ಆ ಬಳಿಕ ವಿಜಯ್ ಹಾಗೂ ರಶ್ಮಿಕಾ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡರು.

ವಿಜಯ್ ಹಾಗೂ ರಶ್ಮಿಕಾ ಸಂಬಂಧ ಮುರಿದು ಬಿದ್ದ ಬಗ್ಗೆ ಈ ಮೊದಲು ವರದಿ ಆಗಿತ್ತು. ಬಳಿಕ ಇಬ್ಬರೂ ಪ್ಯಾಚಪ್ ಮಾಡಿಕೊಂಡರು ಎನ್ನಲಾಯಿತು. ಈಗ ವಿಜಯ್-ರಶ್ಮಿಕಾ ಮಧ್ಯೆ ಎಲ್ಲವೂ ಸರಿಯಾಗಿದೆ. ವಿಜಯ್ ಹಾಗೂ ರಶ್ಮಿಕಾ ರೆಸ್ಟೋರೆಂಟ್ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಇವರ ಕುಟುಂಬದವರು ಕೂಡ ಇದ್ದರು ಅನ್ನೋದು ವಿಶೇಷ.

Vijay D and Rashmika spotted with their friends & family. So they are actually dating. by u/Muted-Expression-109 in BollyBlindsNGossip

ಇದನ್ನೂ ಓದಿ: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

ರಶ್ಮಿಕಾ-ವಿಜಯ್ ಮದುವೆ ಆಗಬೇಕು ಎಂಬುದು ಅನೇಕ ಅಭಿಮಾನಿಗಳ ಕೋರಿಕೆ. ಇದು ಮುಂದೊಂದು ದಿನ ನಿಜವಾದರೂ ಅಚ್ಚರಿ ಏನಿಲ್ಲ. ರಶ್ಮಿಕಾ ಹಾಗೂ ವಿಜಯ್ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಇವರ ಜನಪ್ರಿಯತೆ ಸದ್ಯಕ್ಕಂತೂ ಕಡಿಮೆ ಆಗುವಂಥದ್ದಲ್ಲ. ‘ಲೈಗರ್’ ಬಳಿಕ ವಿಜಯ್ ಅವರು ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಒಪ್ಪಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಕೈಯಲ್ಲಿ ‘ಪುಷ್ಪ 2’ ಸೇರಿ ಕೆಲವು ಮಹತ್ವದ ಪ್ರಾಜೆಕ್ಟ್​ಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ