AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿರೋದು ನಿಜ; ವಿಡಿಯೋ ಸಾಕ್ಷಿ ತಂದ ಫ್ಯಾನ್ಸ್

ರಶ್ಮಿಕಾ ಎಂಗೇಜ್​ಮೆಂಟ್ ಮುರಿದು ಬೀಳಲು ವಿಜಯ್ ಕಾರಣ ಎಂಬುದು ಅನೇಕರ ವಾದ. ಆದರೆ, ಇದನ್ನು ರಶ್ಮಿಕಾ ಒಪ್ಪಿಕೊಂಡಿಲ್ಲ.

Rashmika Mandanna: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿರೋದು ನಿಜ; ವಿಡಿಯೋ ಸಾಕ್ಷಿ ತಂದ ಫ್ಯಾನ್ಸ್
ವಿಜಯ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jun 24, 2023 | 11:03 AM

Share

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಮಧ್ಯೆ ಪ್ರೀತಿ ಹುಟ್ಟಿದೆ ಎಂಬ ಸುದ್ದಿ ಹುಟ್ಟಿಕೊಂಡಿದ್ದು ಬಹಳ ವರ್ಷಗಳ ಹಿಂದೆಯೇ. ಆದರೆ, ಈವರೆಗೂ ಇದನ್ನು ಜೋಡಿ ಅಧಿಕೃತ ಮಾಡಿಲ್ಲ. ‘ನಾವಿಬ್ಬರೂ ಗೆಳೆಯರಷ್ಟೇ’ ಎಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ಹೇಳಿಕೊಂಡು ಬರುತ್ತಲೇ ಇದ್ದಾರೆ. ಈಗ ರಶ್ಮಿಕಾ ಅವರು ವಿಜಯ್ ಜೊತೆ ಲಂಚ್ ಡೇಟ್ ತೆರಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದು ‘ಗೀತ ಗೋವಿಂದಂ’ ಸಿನಿಮಾದಲ್ಲಿ ಇಬ್ಬರ ಮಧ್ಯೆ ಕಿಸ್ಸಿಂಗ್ ದೃಶ್ಯಗಳು ಕೂಡ ಇತ್ತು. ರಶ್ಮಿಕಾ ಎಂಗೇಜ್​ಮೆಂಟ್ ಮುರಿದು ಬೀಳಲು ಇದು ಕೂಡ ಕಾರಣ ಎಂಬುದು ಅನೇಕರ ವಾದ. ಆದರೆ, ಇದನ್ನು ರಶ್ಮಿಕಾ ಒಪ್ಪಿಕೊಂಡಿಲ್ಲ. ಆ ಬಳಿಕ ವಿಜಯ್ ಹಾಗೂ ರಶ್ಮಿಕಾ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡರು.

ವಿಜಯ್ ಹಾಗೂ ರಶ್ಮಿಕಾ ಸಂಬಂಧ ಮುರಿದು ಬಿದ್ದ ಬಗ್ಗೆ ಈ ಮೊದಲು ವರದಿ ಆಗಿತ್ತು. ಬಳಿಕ ಇಬ್ಬರೂ ಪ್ಯಾಚಪ್ ಮಾಡಿಕೊಂಡರು ಎನ್ನಲಾಯಿತು. ಈಗ ವಿಜಯ್-ರಶ್ಮಿಕಾ ಮಧ್ಯೆ ಎಲ್ಲವೂ ಸರಿಯಾಗಿದೆ. ವಿಜಯ್ ಹಾಗೂ ರಶ್ಮಿಕಾ ರೆಸ್ಟೋರೆಂಟ್ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಇವರ ಕುಟುಂಬದವರು ಕೂಡ ಇದ್ದರು ಅನ್ನೋದು ವಿಶೇಷ.

Vijay D and Rashmika spotted with their friends & family. So they are actually dating. by u/Muted-Expression-109 in BollyBlindsNGossip

ಇದನ್ನೂ ಓದಿ: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

ರಶ್ಮಿಕಾ-ವಿಜಯ್ ಮದುವೆ ಆಗಬೇಕು ಎಂಬುದು ಅನೇಕ ಅಭಿಮಾನಿಗಳ ಕೋರಿಕೆ. ಇದು ಮುಂದೊಂದು ದಿನ ನಿಜವಾದರೂ ಅಚ್ಚರಿ ಏನಿಲ್ಲ. ರಶ್ಮಿಕಾ ಹಾಗೂ ವಿಜಯ್ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಇವರ ಜನಪ್ರಿಯತೆ ಸದ್ಯಕ್ಕಂತೂ ಕಡಿಮೆ ಆಗುವಂಥದ್ದಲ್ಲ. ‘ಲೈಗರ್’ ಬಳಿಕ ವಿಜಯ್ ಅವರು ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಒಪ್ಪಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಕೈಯಲ್ಲಿ ‘ಪುಷ್ಪ 2’ ಸೇರಿ ಕೆಲವು ಮಹತ್ವದ ಪ್ರಾಜೆಕ್ಟ್​ಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!