AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆ ಸಂಸ್ಥೆಗೆ 4 ರಾಷ್ಟ್ರ ಪ್ರಶಸ್ತಿ; ಅದೇ ಖುಷಿಯಲ್ಲಿ ‘ಕೆಜಿಎಫ್ 3’ ಬಗ್ಗೆ ನಿರ್ಮಾಪಕರ ಮಾತು

‘ಕೆಜಿಎಫ್​: ಚಾಪ್ಟರ್​ 2’ ಮತ್ತು ‘ಕಾಂತಾರ’ ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಹಿರಿಮೆ ಬಂದಿದೆ. ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ ಈ ಸಿನಿಮಾಗಳಿಗೆ ನ್ಯಾಷನಲ್​ ಅವಾರ್ಡ್​ ಸಿಕ್ಕಿದೆ. ಈ ಚಿತ್ರಗಳನ್ನು ನಿರ್ಮಾಣ ಮಾಡಿದ ನಿರ್ಮಾಪಕ ವಿಜಯ್ ಕಿರಗಂದೂರು ಅವರು ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

ಹೊಂಬಾಳೆ ಸಂಸ್ಥೆಗೆ 4 ರಾಷ್ಟ್ರ ಪ್ರಶಸ್ತಿ; ಅದೇ ಖುಷಿಯಲ್ಲಿ ‘ಕೆಜಿಎಫ್ 3’ ಬಗ್ಗೆ ನಿರ್ಮಾಪಕರ ಮಾತು
ಪ್ರಶಸ್ತಿ ಸ್ವೀಕರಿಸಿದ ವಿಜಯ್​ ಕಿರಗಂದೂರು
ಮದನ್​ ಕುಮಾರ್​
|

Updated on: Oct 08, 2024 | 9:57 PM

Share

ದೆಹಲಿಯಲ್ಲಿ ಇಂದು (ಅಕ್ಟೋಬರ್​ 8) 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ಕನ್ನಡ ಸಿನಿಮಾಗಳು ಕೂಡ ಈ ಬಾರಿ ಅಬ್ಬರಿಸಿವೆ. ಅದರಲ್ಲೂ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ನಿರ್ಮಾಣ ಮಾಡಿದ ಸಿನಿಮಾಗಳಿಗೆ ಒಟ್ಟು 4 ಪ್ರಶಸ್ತಿಗಳು ಸಿಕ್ಕಿರುವುದು ಸಂಸ್ಥೆಯ ಪಾಲಿಗೆ ಹೆಮ್ಮೆಯ ವಿಷಯ. ‘ಕೆಜಿಎಫ್​ 2’, ‘ಕಾಂತಾರ’ ಮುಂತಾದ ಸಿನಿಮಾಗಳ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಖುಷಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಅವರು ‘ಕೆಜಿಎಫ್​ 3’ ಕುರಿತು ಕೂಡ ಮಾತನಾಡಿದ್ದಾರೆ.

‘ಕೆಜಿಎಫ್​ 2 ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಬಂದಿರುವುದಕ್ಕೆ ತುಂಬ ಸಂತಸ ಆಗುತ್ತಿದೆ. ಅದೇ ಸಿನಿಮಾಗೆ ಕೆಲಸ ಮಾಡಿದ ಸಾಹಸ ನಿರ್ದೇಶಕರಿಗೂ ಪ್ರಶಸ್ತಿ ಬಂದಿದೆ. ಅದೇ ರೀತಿ ‘ಕಾಂತಾರ’ ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಪ್ರಶಸ್ತಿ ಪಡೆದಿದೆ. ಆ ಸಿನಿಮಾದಲ್ಲಿ ನಟಿಸಿದ್ದಕ್ಕೆ ರಿಷಬ್​ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಹೀಗೆ ಒಂದೇ ವರ್ಷದಲ್ಲಿ ನಮ್ಮ ಎರಡು ಸಿನಿಮಾಗಳಿಂದ 4 ಅವಾರ್ಡ್​ ಸಿಕ್ಕಿದ್ದಕ್ಕೆ ಬಹಳ ಸಂತೋಷ ಆಗುತ್ತಿದೆ’ ಎಂದಿದ್ದಾರೆ ವಿಜಯ್​ ಕಿರಗಂದೂರು.

‘ಕಾಂತಾರ ಮತ್ತು ಕೆಜಿಎಫ್​ 2 ಚಿತ್ರತಂಡದ ಎಲ್ಲರಿಗೂ ಇಲ್ಲಿಂದಲೇ ನಾನು ಸಂತಸ ಹಂಚಲು ಇಷ್ಟಪಡುತ್ತೇನೆ. ಈ ಸಿನಿಮಾಗಳನ್ನು ಪ್ರೋತ್ಸಾಹಿಸಿದ ಕನ್ನಡಿಗರು ಮತ್ತು ಇಡೀ ಭಾರತದ ಪ್ರೇಕ್ಷಕರಿಗೆ ನಾನು ಕೃತಜ್ಞತೆ ಸಲ್ಲಿಸಿತ್ತೇನೆ. ರಾಷ್ಟ್ರ ಪಶಸ್ತಿ ಪಡೆದ ಎಲ್ಲ ಕನ್ನಡಿಗರಿಗೂ ಅಭಿನಂದನೆಗಳು’ ಎಂದು ವಿಜಯ್​ ಕಿರಗಂದೂರು ಅವರು ಹೇಳಿದ್ದಾರೆ. ರಿಷಬ್​ ಶೆಟ್ಟಿ ಅವರು ದೆಹಲಿಯಲ್ಲಿ ಅತ್ಯುತ್ತಮ ನಟ ನ್ಯಾಷನಲ್​ ಅವಾರ್ಡ್​ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಪಂಚೆ ಧರಿಸಿ ವೇದಿಕೆಗೆ ಬಂದು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್​ ಶೆಟ್ಟಿ

‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ಈಗ ‘ಕಾಂತಾರ: ಚಾಪ್ಟರ್​ 2’, ‘ಕೆಜಿಎಫ್​ 3’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಆ ಬಗ್ಗೆಯೂ ವಿಜಯ್ ಕಿರಗಂದೂರು ಅವರು ಮಾತನಾಡಿದ್ದಾರೆ. ‘ಇನ್ನೇನು 4-5 ತಿಂಗಳಲ್ಲಿ ‘ಕೆಜಿಎಫ್​: ಚಾಪ್ಟರ್​ 3’ ಚಿತ್ರದ ಬಗ್ಗೆ ಅಪ್​ಡೇಟ್​ ನೀಡುತ್ತೇವೆ. ‘ಕಾಂತಾರ 2’ ಸಿನಿಮಾಗೆ ತುಂಬ ಚೆನ್ನಾಗಿ ಶೂಟಿಂಗ್​ ಆಗುತ್ತಿದೆ. ರಿಷಬ್​ ಅವರು ನಟನೆ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಇಡೀ ತಂಡ ಕುಂದಾಪುರದಲ್ಲಿ ಕಷ್ಟಪಡುತ್ತಿದೆ. ಮುಂದಿನ ಆಗಸ್ಟ್​ನಲ್ಲಿ ನೀವು ಕಾಂತಾರ ಸಿನಿಮಾವನ್ನು ನಿರೀಕ್ಷಿಸಬಹುದು’ ಎಂದು ವಿಜಯ್​ ಕಿರಗಂದೂರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ