AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಬೆನ್ನಲ್ಲೇ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತ ಹೊಂಬಾಳೆ‌ ಫಿಲ್ಮ್ಸ್​

ಕಾರ್ಮಿಕ ಒಕ್ಕೂಟದ ಎಲ್ಲ ವಿಭಾಗದ ಕಾರ್ಮಿಕರಿಗೆ ಸಹಾಯ ಆಗುವಂತೆ ಹಣ ನೀಡಲಾಗಿದೆ. 21 ವಿಭಾಗದ 3,200 ಕಾರ್ಮಿಕರಿಗೆ ಸಹಾಯ ಆಗುವಂತೆ ಹಣ ನೀಡಲಾಗಿದೆ. ಪ್ರತಿಯೊಬ್ಬ ಕಾರ್ಮಿಕರಿಗೂ 1,000 ರೂ ತಲುಪುಲಿದೆ.

ಯಶ್​ ಬೆನ್ನಲ್ಲೇ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತ ಹೊಂಬಾಳೆ‌ ಫಿಲ್ಮ್ಸ್​
ವಿಜಯ್ ಕಿರಗಂದೂರು
ರಾಜೇಶ್ ದುಗ್ಗುಮನೆ
|

Updated on: Jun 07, 2021 | 7:17 PM

Share

ಕೊವಿಡ್​ ಎರಡನೇ ಅಲೆ ಸೃಷ್ಟಿಸಿದ ತೊಂದರೆಗಳು ಒಂದೆರಡಲ್ಲ. ಸರ್ಕಾರ ಹೂಡಿರುವ ಲಾಕ್​ಡೌನ್​ನಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಕೆಲಸಗಳು ನಿಂತಿರುವ ಕಾರಣ ಚಿತ್ರರಂಗದ ಕಾರ್ಮಿಕರು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಹೀಗಾಗಿ, ಸಾಕಷ್ಟು ಸೆಲೆಬ್ರಿಟಿಗಳು ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತಿದ್ದಾರೆ. ಈಗ ಸ್ಯಾಂಡಲ್​ವುಡ್​ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಸಹಾಯಕ್ಕೆ ಮುಂದಾಗಿದ್ದು, ಚಲನ ಚಿತ್ರ ಕಾರ್ಮಿಕರ ಒಕ್ಕೂಟಕ್ಕೆ 32 ಲಕ್ಷ ಹಣ ನೀಡಿದೆ.

ಕಾರ್ಮಿಕ ಒಕ್ಕೂಟದ ಎಲ್ಲಾ ವಿಭಾಗದ ಕಾರ್ಮಿಕರಿಗೆ ಸಹಾಯ ಆಗುವಂತೆ ಹಣ ನೀಡಲಾಗಿದೆ. 21 ವಿಭಾಗದ 3,200 ಕಾರ್ಮಿಕರಿಗೆ ತಲಾ 1,000 ರೂ ಸಿಗಲಿದೆ. ಈ ಮೂಲಕ ಹೊಂಬಾಳೆ ಫಿಲ್ಮ್ಸ್​ನ ವಿಜಯ್ ಕಿರಗಂದೂರ್ ಸಹಾಯಕ್ಕೆ ಮುಂದಾಗಿದ್ದಾರೆ.

ಸಿನಿಮಾ ಇಂಡಸ್ಟ್ರಿ ಪರವಾಗಿ ಕರ್ನಾಟಕ ಚಲಚನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾಗೊವಿಂದು ಹಾಗೂ ಚಲನ ಚಿತ್ರ ಒಕ್ಕೂಟದ ಕಾರ್ಯದರ್ಶಿ ರವೀಂದ್ರನಾಥ್, ವಿಜಯ್​ ಕೆಲಸಕ್ಕೆ ಧನ್ಯವಾದ ಹೇಳಿದ್ದಾರೆ. ಇತ್ತೀಚೆಗೆ ಪುನೀತ್​ ರಾಜ್​ಕುಮಾರ್​ ಅವರು ಕಾರ್ಮಿಕ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡಿದ್ದರು. ಯಶ್​ ಕೂಡ ಕಷ್ಟದಲ್ಲಿರುವ ಸಿನಿಮಾ ತಂತ್ರಜ್ಞರ ಸಹಾಯಕ್ಕೆ ಮುಂದಾಗಿದ್ದರು. 3000 ತಂತ್ರಜ್ಞರಿಗೆ ತಲಾ 5000 ರೂಪಾಯಿ ನೀಡುವ ಬಗ್ಗೆ ಅವರು ಘೋಷಣೆ ಮಾಡಿದ್ದರು.

ಹೈ ಬಜೆಟ್​ ಸಿನಿಮಾಗಳ ಯಶಸ್ವಿ ನಿರ್ಮಾಪಕನಾಗಿ ಮಾತ್ರವಲ್ಲದೇ ಹೃದಯ ಶ್ರೀಮಂತಿಕೆಯ ಕಾರಣದಿಂದಲೂ ವಿಜಯ್​ ಕಿರಗಂದೂರು ಜನಮೆಚ್ಚುಗೆ ಗಳಿಸುತ್ತಿದ್ದಾರೆ. ಸದ್ಯ ಅವರ ನಿರ್ಮಾಣದಲ್ಲಿ ‘ಕೆಜಿಎಫ್​: ಚಾಪ್ಟರ್​ 2’, ಪ್ರಭಾಸ್​ ನಟನೆಯ ‘ಸಲಾರ್​’ ಸಿನಿಮಾಗಳು ಸಿದ್ಧವಾಗುತ್ತಿವೆ. ಈ ಚಿತ್ರಗಳ ಮೇಲೆ ಬಹುಭಾಷೆಯ ಸಿನಿಪ್ರಿಯರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದೇ ರೀತಿ ಕನ್ನಡ ಚಿತ್ರರಂಗದಲ್ಲಿ ಉಪೇಂದ್ರ, ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಸೇರಿದಂತೆ ಹಲವರು ಜನಪರ ಕಾರ್ಯ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು