AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಬೆನ್ನಲ್ಲೇ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತ ಹೊಂಬಾಳೆ‌ ಫಿಲ್ಮ್ಸ್​

ಕಾರ್ಮಿಕ ಒಕ್ಕೂಟದ ಎಲ್ಲ ವಿಭಾಗದ ಕಾರ್ಮಿಕರಿಗೆ ಸಹಾಯ ಆಗುವಂತೆ ಹಣ ನೀಡಲಾಗಿದೆ. 21 ವಿಭಾಗದ 3,200 ಕಾರ್ಮಿಕರಿಗೆ ಸಹಾಯ ಆಗುವಂತೆ ಹಣ ನೀಡಲಾಗಿದೆ. ಪ್ರತಿಯೊಬ್ಬ ಕಾರ್ಮಿಕರಿಗೂ 1,000 ರೂ ತಲುಪುಲಿದೆ.

ಯಶ್​ ಬೆನ್ನಲ್ಲೇ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತ ಹೊಂಬಾಳೆ‌ ಫಿಲ್ಮ್ಸ್​
ವಿಜಯ್ ಕಿರಗಂದೂರು
ರಾಜೇಶ್ ದುಗ್ಗುಮನೆ
|

Updated on: Jun 07, 2021 | 7:17 PM

Share

ಕೊವಿಡ್​ ಎರಡನೇ ಅಲೆ ಸೃಷ್ಟಿಸಿದ ತೊಂದರೆಗಳು ಒಂದೆರಡಲ್ಲ. ಸರ್ಕಾರ ಹೂಡಿರುವ ಲಾಕ್​ಡೌನ್​ನಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಕೆಲಸಗಳು ನಿಂತಿರುವ ಕಾರಣ ಚಿತ್ರರಂಗದ ಕಾರ್ಮಿಕರು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಹೀಗಾಗಿ, ಸಾಕಷ್ಟು ಸೆಲೆಬ್ರಿಟಿಗಳು ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತಿದ್ದಾರೆ. ಈಗ ಸ್ಯಾಂಡಲ್​ವುಡ್​ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಸಹಾಯಕ್ಕೆ ಮುಂದಾಗಿದ್ದು, ಚಲನ ಚಿತ್ರ ಕಾರ್ಮಿಕರ ಒಕ್ಕೂಟಕ್ಕೆ 32 ಲಕ್ಷ ಹಣ ನೀಡಿದೆ.

ಕಾರ್ಮಿಕ ಒಕ್ಕೂಟದ ಎಲ್ಲಾ ವಿಭಾಗದ ಕಾರ್ಮಿಕರಿಗೆ ಸಹಾಯ ಆಗುವಂತೆ ಹಣ ನೀಡಲಾಗಿದೆ. 21 ವಿಭಾಗದ 3,200 ಕಾರ್ಮಿಕರಿಗೆ ತಲಾ 1,000 ರೂ ಸಿಗಲಿದೆ. ಈ ಮೂಲಕ ಹೊಂಬಾಳೆ ಫಿಲ್ಮ್ಸ್​ನ ವಿಜಯ್ ಕಿರಗಂದೂರ್ ಸಹಾಯಕ್ಕೆ ಮುಂದಾಗಿದ್ದಾರೆ.

ಸಿನಿಮಾ ಇಂಡಸ್ಟ್ರಿ ಪರವಾಗಿ ಕರ್ನಾಟಕ ಚಲಚನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾಗೊವಿಂದು ಹಾಗೂ ಚಲನ ಚಿತ್ರ ಒಕ್ಕೂಟದ ಕಾರ್ಯದರ್ಶಿ ರವೀಂದ್ರನಾಥ್, ವಿಜಯ್​ ಕೆಲಸಕ್ಕೆ ಧನ್ಯವಾದ ಹೇಳಿದ್ದಾರೆ. ಇತ್ತೀಚೆಗೆ ಪುನೀತ್​ ರಾಜ್​ಕುಮಾರ್​ ಅವರು ಕಾರ್ಮಿಕ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡಿದ್ದರು. ಯಶ್​ ಕೂಡ ಕಷ್ಟದಲ್ಲಿರುವ ಸಿನಿಮಾ ತಂತ್ರಜ್ಞರ ಸಹಾಯಕ್ಕೆ ಮುಂದಾಗಿದ್ದರು. 3000 ತಂತ್ರಜ್ಞರಿಗೆ ತಲಾ 5000 ರೂಪಾಯಿ ನೀಡುವ ಬಗ್ಗೆ ಅವರು ಘೋಷಣೆ ಮಾಡಿದ್ದರು.

ಹೈ ಬಜೆಟ್​ ಸಿನಿಮಾಗಳ ಯಶಸ್ವಿ ನಿರ್ಮಾಪಕನಾಗಿ ಮಾತ್ರವಲ್ಲದೇ ಹೃದಯ ಶ್ರೀಮಂತಿಕೆಯ ಕಾರಣದಿಂದಲೂ ವಿಜಯ್​ ಕಿರಗಂದೂರು ಜನಮೆಚ್ಚುಗೆ ಗಳಿಸುತ್ತಿದ್ದಾರೆ. ಸದ್ಯ ಅವರ ನಿರ್ಮಾಣದಲ್ಲಿ ‘ಕೆಜಿಎಫ್​: ಚಾಪ್ಟರ್​ 2’, ಪ್ರಭಾಸ್​ ನಟನೆಯ ‘ಸಲಾರ್​’ ಸಿನಿಮಾಗಳು ಸಿದ್ಧವಾಗುತ್ತಿವೆ. ಈ ಚಿತ್ರಗಳ ಮೇಲೆ ಬಹುಭಾಷೆಯ ಸಿನಿಪ್ರಿಯರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದೇ ರೀತಿ ಕನ್ನಡ ಚಿತ್ರರಂಗದಲ್ಲಿ ಉಪೇಂದ್ರ, ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಸೇರಿದಂತೆ ಹಲವರು ಜನಪರ ಕಾರ್ಯ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ