AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಪ್ರಕಾಶ್ ಧ್ವನಿಯಲ್ಲಿ ಪರಿಸರದ ಕುರಿತು ಹಾಡು; ‘ಜಲತಾಪ’ ಚಿತ್ರಕ್ಕೆ ಸಾದ್ವಿನಿ ಕೊಪ್ಪ ಸಂಗೀತ ನಿರ್ದೇಶನ

ಚಿತ್ರರಂಗದಲ್ಲಿ ಗಾಯಕಿಯಾಗಿ ಗುರುತಿಸಿಕೊಂಡಿರುವ ಸಾದ್ವಿನಿ ಕೊಪ್ಪ ಅವರು ‘ಜಲಪಾತ’ ಸಿನಿಮಾ ಮೂಲಕ ಮ್ಯೂಸಿಕ್​ ಡೈರೆಕ್ಟರ್​ ಆಗುತ್ತಿದ್ದಾರೆ. ‘ಎದೆಯ ದನಿಯ ಹಾಡು ಕೇಳು..’ ಗೀತೆಯನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ರಜನೀಶ್ ಮತ್ತು ನಾಗಶ್ರೀ ಬೇಗಾರ್ ಅವರು ಈ ಸಿನಿಮಾದಲ್ಲಿ ನಾಯಕ-ನಾಯಕಿ ಆಗಿ ನಟಿಸಿದ್ದಾರೆ. ‘ಜಲಪಾತ’ ಸಿನಿಮಾದ ಬಗ್ಗೆ ಇಲ್ಲಿದೆ ಮಾಹಿತಿ..

ವಿಜಯ್ ಪ್ರಕಾಶ್ ಧ್ವನಿಯಲ್ಲಿ ಪರಿಸರದ ಕುರಿತು ಹಾಡು; ‘ಜಲತಾಪ’ ಚಿತ್ರಕ್ಕೆ ಸಾದ್ವಿನಿ ಕೊಪ್ಪ ಸಂಗೀತ ನಿರ್ದೇಶನ
‘ಜಲಪಾತ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Aug 30, 2023 | 2:03 PM

Share

ಶೀರ್ಷಿಕೆಯ ಕಾರಣದಿಂದ ‘ಜಲಪಾತ’ ಸಿನಿಮಾ (Jalapatha Movie) ಕೌತುಕ ಸೃಷ್ಟಿ ಮಾಡಿದೆ. ಟೈಟಲ್​ಗೆ ತಕ್ಕಂತೆಯೇ ಈ ಸಿನಿಮಾದಲ್ಲಿ ಪರಿಸರ ಕಾಳಜಿ ಇದೆ. ಟಿ.ಸಿ. ರವೀಂದ್ರ ತುಂಬರಮನೆ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಮೇಶ್ ಬೇಗಾರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹೊಸ ಹಾಡು ಬಿಡುಗಡೆ ಮಾಡಲಾಗಿದೆ. ‘ಜಲಪಾತ’ ಸಿನಿಮಾಗಾಗಿ ರಮೇಶ್ ಬೇಗಾರ್ ಅವರು ‘ಎದೆಯ ದನಿಯ ಹಾಡು ಕೇಳು..’ ಎಂಬ ಹಾಡನ್ನು ಬರೆದಿದ್ದಾರೆ. ಈ ಗೀತೆಯು ಪರಿಸರದ ಕುರಿತಾಗಿದೆ. ‘ಎ2 ಮ್ಯೂಸಿಕ್​’ ಮೂಲಕ ಈ ಸಾಂಗ್​​ ರಿಲೀಸ್​ ಮಾಡಲಾಗಿದೆ. ಜನಪ್ರಿಯ ಸಿಂಗರ್​ ವಿಜಯ್ ಪ್ರಕಾಶ್ (Vijay Prakash) ಅವರ ಸುಮಧುರ ಕಂಠದಲ್ಲಿ ‘ಎದೆಯ ದನಿಯ ಹಾಡು ಕೇಳು..’ ಹಾಡು ಮೂಡಿಬಂದಿದೆ. ಈ ಗೀತೆಗೆ ಸಾದ್ವಿನಿ ಕೊಪ್ಪ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಚಿತ್ರರಂಗದಲ್ಲಿ ಗಾಯಕಿಯಾಗಿ ಗುರುತಿಸಿಕೊಂಡಿರುವ ಸಾದ್ವಿನಿ ಕೊಪ್ಪ ಅವರು ‘ಜಲಪಾತ’ ಸಿನಿಮಾ ಮೂಲಕ ಮ್ಯೂಸಿಕ್​ ಡೈರೆಕ್ಟರ್​ ಆಗುತ್ತಿದ್ದಾರೆ ಎಂಬುದು ವಿಶೇಷ. ‘ಎದೆಯ ದನಿಯ ಹಾಡು ಕೇಳು..’ ಹಾಡನ್ನು ಖ್ಯಾತ ಗಾಯಕ ನಗರ ಶ್ರೀನಿವಾಸ ಉಡುಪ ಅವರು ರಿಲೀಸ್​ ಮಾಡಿ ಶುಭ ಹಾರೈಸಿದ್ದಾರೆ. ‘ಈ ಸಿನಿಮಾದಲ್ಲಿ ಮೂರು ಹಾಡುಗಳು ಮತ್ತು ಕೆಲವು ಬಿಟ್ಸ್ ಇವೆ. ಈ ಗೀತೆಯ ಸಾಹಿತ್ಯವನ್ನು ನೋಡಿದ ಬಳಿಕ ವಿಜಯ್ ಪ್ರಕಾಶ್ ಅವರ ಧ್ವನಿಯೇ ಸೂಕ್ತ ಎನಿಸಿತು. ತಮ್ಮ ಕೆಲಸದ ಒತ್ತಡದ ನಡುವೆಯೂ ಈ ಗೀತೆಯನ್ನು ಹಾಡಿದ ವಿಜಯ್ ಪ್ರಕಾಶ್ ಅವರಿಗೆ ನಮ್ಮೆಲ್ಲರ ಕಡೆಯಿಂದ ಧನ್ಯವಾದಗಳು?’ ಎಂದು ಸಂಗೀತ ನಿರ್ದೇಶಕಿ ಸಾದ್ವಿನಿ ಕೊಪ್ಪ ಹೇಳಿದ್ದಾರೆ.

ಇದನ್ನೂ ಓದಿ: ದುಬೈನಲ್ಲಿ ಅದ್ದೂರಿಯಾಗಿ ರಿಲೀಸ್​ ಆಯ್ತು ‘ಕುದ್ರು’ ಹಾಡು; ಈ ಚಿತ್ರದಲ್ಲಿದೆ ಕೋಲ, ಕಂಬಳ, ಯಕ್ಷಗಾನ

‘ಜಲಪಾತ’ ಸಿನಿಮಾ ಕುರಿತು ನಿರ್ದೇಶಕ ರಮೇಶ್ ಬೇಗಾರ್ ಮಾತನಾಡಿದ್ದಾರೆ. ಅವರಿಗೆ ಇದು ಎರಡನೇ ಸಿನಿಮಾ. ‘ಪರಿಸರದ ಬಗ್ಗೆ ಜಗೃತಿ ಮೂಡಿಸುವ ಅನೇಕ ಹಾಡುಗಳು ಈಗಾಗಲೇ ಬಂದಿವೆ. ಆದರೆ ನಮ್ಮ ಸಿನಿಮಾದ ಈ ಗೀತೆ ಸ್ವಲ್ಪ ವಿಭಿನ್ನವಾಗಿದೆ. ಪರಿಸರ ನಮಗೆ ಏನೆಲ್ಲಾ ನೀಡಿದೆ ಮತ್ತು ನಮ್ಮಿಂದ ಪರಿಸರ ಏನಾಗುತ್ತಿದೆ ಎಂಬುದನ್ನು ಈ ಹಾಡಿನಲ್ಲಿ ವಿವರಿಸಲಾಗಿದೆ. ವಿಜಯ್ ಪ್ರಕಾಶ್ ಅವರ ಧ್ವನಿಯಲ್ಲಿ ಈ ಸಾಂಗ್​ ಕೇಳುವುದೇ ಚೆಂದ. ಸಾದ್ವಿನಿ ಅವರ ಸಂಗೀತ ಕೂಡ ತುಂಬ ಚೆನ್ನಾಗಿದೆ’ ಎಂದು ನಿರ್ದೇಶಕರು ಹೇಳಿದ್ದಾರೆ.

ಇದನ್ನೂ ಓದಿ: ‘ಫೈಟರ್​’ ಆಗಿ ಬರ್ತಿದ್ದಾರೆ ಮರಿ ಟೈಗರ್ ವಿನೋದ್ ಪ್ರಭಾಕರ್; ಟೀಸರ್​ ಹೇಗಿದೆ ನೋಡಿದ್ರಾ?

ರಜನೀಶ್ ಮತ್ತು ನಾಗಶ್ರೀ ಬೇಗಾರ್ ಅವರು ‘ಜಲಪಾತ’ ಸಿನಿಮಾದಲ್ಲಿ ನಾಯಕ-ನಾಯಕಿ ಆಗಿ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ ಅವರು ವಿಶೇಷ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಮಲೆನಾಡಿನ ಕೆಲವು ರಂಗಭೂಮಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂಬ ಗುರಿ ಇಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ‘ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ಅವರು ನನ್ನ ಗುರುಗಳು. ಪರಿಸರದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಿನಿಮಾ ನಿರ್ಮಾಣ ಮಾಡಬೇಕು ಎಂಬ ಹಂಬಲದಿಂದ ನಾನು ‘ಜಲಪಾತ’ ಸಿನಿಮಾವನ್ನು ನಿರ್ಮಿಸಿದ್ದೇನೆ. ಮಲೆನಾಡ ಸೊಗಡಿನಿಂದ ಕೂಡಿರುವ ಈ ಸಿನಿಮಾವು ಪ್ರೇಕ್ಷಕರ ಮನಸ್ಸಿಗೆ ಹತ್ತಿರ ಆಗಲಿದೆ’ ಎಂದು ನಿರ್ಮಾಪಕ ರವೀಂದ್ರ ತುಂಬರಮನೆ ಭರವಸೆ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?