AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಪ್ರಕಾಶ್ ಧ್ವನಿಯಲ್ಲಿ ಬಂದ ಹಳೆಯ ಜಾಹೀರಾತಿ​ಗೆ ಈಗಲೂ ಬೇಡಿಕೆ

ವಿಜಯ್ ಪ್ರಕಾಶ್ ಅವರು ಗಾಯಕನಾಗಿ ಮೊದಲು ಬಣ್ಣದ ಬದುಕಿಗೆ ಕಾಲಿಟ್ಟಿರಲಿಲ್ಲ. ಅವರು ಮೊದಲು ಗಮನ ಸೆಳೆದಿದ್ದು ಜಿಂಗಲ್ಸ್​ಗಳಿಂದ. ಅಂದರೆ, ಜಾಹೀರಾತುಗಳಿಗೆ ಅವರು ಧ್ವನಿ ಆಗುತ್ತಿದ್ದರು. ಅವರು ತಮ್ಮ ವೃತ್ತಿ ಜೀವನದಲ್ಲಿ 3000 ಸಾವಿರಕ್ಕೂ ಅಧಿಕ ಜಿಂಗಲ್ಸ್​ನ ಹಾಡಿದ್ದಾರೆ.

ವಿಜಯ್ ಪ್ರಕಾಶ್ ಧ್ವನಿಯಲ್ಲಿ ಬಂದ ಹಳೆಯ ಜಾಹೀರಾತಿ​ಗೆ ಈಗಲೂ ಬೇಡಿಕೆ
ವಿಜಯ್ ಪ್ರಕಾಶ್ ಧ್ವನಿಯಲ್ಲಿ ಬಂದ ಹಳೆಯ ಜಾಹೀರಾತಿ​ಗೆ ಈಗಲೂ ಬೇಡಿಕೆ
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 25, 2024 | 9:09 AM

Share

ವಿಜಯ್ ಪ್ರಕಾಶ್ ಅವರು ಗಾಯಕನಾಗಿ ಎಲ್ಲರಿಗೂ ಇಷ್ಟ. ಹಲವು ಸೂಪರ್ ಹಿಟ್ ಗೀತೆಗಳನ್ನು ಅವರು ನೀಡಿದ್ದಾರೆ. ಅವರು ಹಾಡಿರುವ ಅನೇಕ ಹಾಡುಗಳು ಈಗಲೂ ಜನರಿಗೆ ಫೇವರಿಟ್. ಅವರು ಆಗಾಗ ಕಾನ್ಸರ್ಟ್​ಗಳನ್ನು ಕೂಡ ಮಾಡುತ್ತಾರೆ. ಇದಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರುತ್ತಾರೆ. ವಿಶೇಷ ಎಂದರೆ ವಿಜಯ್ ಪ್ರಕಾಶ್ ಅವರು 90ರ ದಶಕದಲ್ಲಿ ಧ್ವನಿ ನೀಡಿದ್ದ ಜಾಹೀರಾತೊಂದು ಈಗಲೂ ಪ್ರಸಾರ ಕಾಣುತ್ತಿದೆ ಎಂಬ ವಿಚಾರ ನಿಮಗೆ ಗೊತ್ತೇ? ಆ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ ಕೇಳಿ.

ವಿಜಯ್ ಪ್ರಕಾಶ್ ಅವರು ಗಾಯಕನಾಗಿ ಮೊದಲು ಬಣ್ಣದ ಬದುಕಿಗೆ ಕಾಲಿಟ್ಟಿರಲಿಲ್ಲ. ಅವರು ಮೊದಲು ಗಮನ ಸೆಳೆದಿದ್ದು ಜಿಂಗಲ್ಸ್​ಗಳಿಂದ. ಅಂದರೆ, ಜಾಹೀರಾತುಗಳಿಗೆ ಅವರು ಧ್ವನಿ ಆಗುತ್ತಿದ್ದರು. ಅವರು ತಮ್ಮ ವೃತ್ತಿ ಜೀವನದಲ್ಲಿ 3000 ಸಾವಿರಕ್ಕೂ ಅಧಿಕ ಜಿಂಗಲ್ಸ್​ನ ಹಾಡಿದ್ದಾರೆ. ಅದರಲ್ಲೂ ಒಂದು ವಿಶೇಷ ಜಿಂಗಲ್ಸ್ ಎಲ್ಲರ ನೆನಪಿನಲ್ಲಿ ಇರುವಂಥದ್ದು.

ಸೆಂಟರ್ ಫ್ರೆಶ್​ನ ಜಾಹೀರಾತು ಈಗಲೂ ಪ್ರಸಾರ ಕಾಣುತ್ತದೆ. ಓರ್ವ ತಬಲಾ ಬಾರಿಸಿದರೆ, ಮತ್ತೋರ್ವ ಹಾಡುತ್ತಾನೆ. ಈ ಹಾಡನ್ನು ಹಾಡಿದ್ದು ವಿಜಯ್ ಪ್ರಕಾಶ್ ಅನ್ನೋದು ಅನೇಕರಿಗೆ ಗೊತ್ತಿಲ್ಲ. ಈ ಬಗ್ಗೆ ಇತ್ತೀಚೆಗೆ ವಿಜಯ್ ಪ್ರಕಾಶ್ ಹೇಳಿದ್ದಾರೆ.

‘ಯೇ ದಿಲ್ ಮಾಂಗೆ ಮೋರ್ ನಾನೇ ಹಾಡಿದ್ದು. 1999 ಅಲ್ಲಿ ಬಂದಿತ್ತು. ಸೆಂಟರ್​ಫ್ರೆಶ್​ ದು ಮಗಮಸ.. ಇದನ್ನು ನಾನೇ ಹಾಡಿದ್ದು. 3000 ಜಾಹೀರಾತು ಜಿಂಗಲ್ಸ್​ನ ನಾನು ಮಾಡಿದ್ದೇನೆ. ಐಸಿಐಸಿಐ ಜಾಹೀರಾತನ್ನು ನಾನೇ ಮಾಡಿದ್ದೆ. ಮೆಕ್​ಡೊನಾಲ್ಡ್ಸ್ ಮೊದಲು ಬಂದಾಗ ನಾನೇ ಮಾಡಿದ್ದು. ಡಾಮಿನೋಸ್ ಪಿಜ್ಜಾ ನಾನೇ ಮಾಡಿದ್ದು. ಐಸಿಐಸಿಐ ಬ್ಯಾಂಕ್​ನ ಹಂ ಹೇ ನಾ ಹಾಡಿದ್ದೇನೆ’ ಎಂದು ಹೇಳಿದ್ದರು ವಿಜಯ್ ಪ್ರಕಾಶ್.

ಇದನ್ನೂ ಓದಿ:  ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್

ವಿಜಯ್ ಪ್ರಕಾಶ್ ಅವರು ಕನ್ನಡದಲ್ಲಿ ಹಲವು ಹಾಡುಗಳನ್ನು ಹೇಳಿದ್ದಾರೆ. ಹಲವು ಹಾಡುಗಳು ಸೂಪರ್ ಹಿಟ್ ಆಗಿವೆ. ‘ಬೊಂಬೆ ಹೇಳುತೈತೆ’ ಹಾಡನ್ನು ವಿಜಯ್ ಪ್ರಕಾಶ್ ಅವರೇ ಹಾಡಿದ್ದರು. ಅವರ ಧ್ವನಿಗೆ ಮರಳುಗಾದವರೇ ಇಲ್ಲ ಎಂದರೂ ತಪ್ಪಾಗಲಾರದು. ಅವರಿಗೆ ಕನ್ನಡದಲ್ಲಿ ಸಖತ್ ಬೇಡಿಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:08 am, Mon, 25 November 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ